ಉಡುಪಿ: ಕಾಂಗ್ರೆಸಿನ ಬಿಟ್ಟಿ ಭಾಗ್ಯಗಳಿಗೆ ಯಾವುದೇ ಮನ್ನಣೆ ನೀಡದೆ ಮೂರು ರಾಜ್ಯಗಳ ಜನತೆ ದೇಶಕ್ಕೆ ಮೋದಿ ಪ್ರಧಾನಿ ಆಗಬೇಕು ಎನ್ನುವ ದೃಷ್ಟಿಯಿಂದ ಬಿಜೆಪಿಯನ್ನು ಗೆಲ್ಲಿಸಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕೂಡ ಬಿಜೆಪಿ ಪಕ್ಷ ಗೆಲ್ಲುವ ಸೂಚನೆ ನೀಡಿದೆ ಎಂದು ಬಿಜೆಪಿ ಜಿಲ್ಲಾ ಮಹಿಳಾ ಅಧ್ಯಕ್ಷೆ ವೀಣಾ ಶೆಟ್ಟಿ ಹೇಳಿದ್ದಾರೆ.
ಕಾಂಗ್ರೆಸಿನ ಹುಸಿ ಗ್ಯಾರಂಟಿಗಳನ್ನು ಘೋಷಿಸಿ ಚುನಾವಣೆ ಎದುರಿಸಿ ಕರ್ನಾಟಕವನ್ನು ಗೆದ್ದ ಹಾಗೆ ಎಂದು ತಿಳಿದಿದ್ದರು. ಆದರೆ ಅದು ಇನ್ನು ಆಗುವುದಿಲ್ಲ ಜನತೆ ಬಿಜೆಪಿಯ ಅಭಿವೃದ್ಧಿ ಚಿಂತನೆ ಇಟ್ಟುಕೊಂಡು ಪ್ರಚಾರ ನಡೆಸಿದ್ದು ಅದನ್ನು ಮೆಚ್ಚಿಕೊಂಡು ಜನರು ಬಿಜೆಪಿ ಪಕ್ಷಕ್ಕೆ ಮತ ನೀಡಿದ್ದಾರೆ. ದೇಶಕ್ಕೆ ಮೋದಿಯವರೆ ಗ್ಯಾರಂಟಿ ಎಂದಿರುವ ಪರಿಣಾಮ ಮೂರು ರಾಜ್ಯಗಳಲ್ಲಿ ಬಿಜೆಪಿ ಅಧಿಕಾರದ ಗದ್ದುಗೆ ಹಿಡಿದೆ. ಜನರು ನೀಡಿರುವ ತೀರ್ಪಿನಿಂದ ಕಾಂಗ್ರೆಸ್ ಮುಕ್ತ ಭಾರತ ಆಗುವ ಕಾಲ ಬಂದಿದೆ. ಮೂರು ರಾಜ್ಯಗಳ ಗೆಲುವಿನಿಂದ ಬಿಜೆಪಿ ಕಾರ್ಯಕರ್ತರಲ್ಲಿ ಉತ್ಸಾಹ ಹೆಚ್ಚಾಗಿದೆ. ಮುಂದಿನ ದಿನಗಳಲ್ಲಿ ಲೋಕಸಭಾ ಚುನಾವಣೆಯನ್ನು 28 ಕ್ಷೇತ್ರಗಳಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಲಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…