ಉಡುಪಿ: ಪೊಲೀಸ್ ಇಲಾಖೆಯಲ್ಲಿ ಅತ್ಯುನ್ನತ ಸೇವೆ ಸಲ್ಲಿಸಿದ ಹಿನ್ನೆಲೆಯಲ್ಲಿ 2025ನೇ ಸಾಲಿನ ಮಾನ್ಯ ಮುಖ್ಯಮಂತ್ರಿಗಳ ಚಿನ್ನದ ಪದಕಕ್ಕೆ ಉಡುಪಿ ಜಿಲ್ಲೆಯ ಮೂವರು ಪೊಲೀಸ್ ಸಿಬ್ಬಂದಿ ಭಾಜನರಾಗಿದ್ದಾರೆ.
ಉಡುಪಿ ನಗರ ಪೊಲೀಸ್ ಠಾಣೆಯ ASI ಚಂದ್ರ ಶೆಟ್ಟಿ ಅವರು ತಮ್ಮ ಸೇವೆಗೆ ಈ ಗೌರವ ಪಡೆದಿದ್ದಾರೆ. ಕರಾವಳಿ ಕಾವಲು ಪೊಲೀಸ್ ಪಡೆಯಲ್ಲಿ ಸೇವೆ ಸಲ್ಲಿಸುತ್ತಿರುವ AHC ಸಂತೋಷ್ ಶೆಟ್ಟಿ ಅವರು ಕರಾವಳಿ ಕಾವಲು ವಿಭಾಗದಲ್ಲಿ ನೀಡಿದ ವಿಶಿಷ್ಠ ಸೇವೆಗಾಗಿ ಚಿನ್ನದ ಪದಕ ಪಡೆದಿದ್ದಾರೆ.
ಇದನ್ನೂ ಓದಿ:
ಇದೇ ರೀತಿ ನಕ್ಸಲ್ ನಿಗ್ರಹ ಪಡೆ, ಕಾರ್ಕಳದಲ್ಲಿ ಸೇವೆ ಸಲ್ಲಿಸುತ್ತಿರುವ RSI ಮಂಜುನಾಥ ದೇವರಮನೆ ಅವರು ನಕ್ಸಲ್ ನಿಗ್ರಹ ಕಾರ್ಯಾಚರಣೆಯಲ್ಲಿ ತೋರಿದ ಅತ್ಯುತ್ತಮ ಸೇವೆಗಾಗಿ ಈ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಪದಕ ಪುರಸ್ಕೃತರನ್ನು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಹಾಗೂ ಕರಾವಳಿ ಕಾವಲು ಪಡೆ ಮತ್ತು ನಕ್ಸಲ್ ನಿಗ್ರಹ ಪಡೆಯ ಪ್ರಭಾರ ಎಸ್ಪಿ ಹರಿರಾಮ್ ಶಂಕರ್ ಅವರು ಅಭಿನಂದಿಸಿದ್ದಾರೆ.
ಏ. 2ರಂದು ಕುಂದಾಪುರ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…
ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…
ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…
ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…
ಬೆಳ್ತಂಗಡಿ: ನವವಿವಾಹಿತ ಉದ್ಯಮಿ ಆತ್ಮಹತ್ಯೆಗೆ ಶರಣು ಬೆಳ್ತಂಗಡಿ: ಕಳೆದ ತಿಂಗಳು ಮದುವೆಯಾಗಿದ್ದ ನವವಿವಾಹಿತ ಉದ್ಯಮಿಯೊಬ್ಬರು ಪತ್ನಿಯ ಮನೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿ,…
ಶ್ರೀ ಕ್ಷೇತ್ರ ಶಂಕರಪುರದಲ್ಲಿ ಮಾ.31 ರಿಂದ ಎ.2 ರವರೆಗೆ ಮುಖ್ಯಪ್ರಾಣ ಏಕಶಿಲಾಮೂರ್ತಿ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಕಟಪಾಡಿ: ಶ್ರೀ ಕ್ಷೇತ್ರ ಶಂಕರಪುರ…