Featured

ಉಡುಪಿ: ಮೂವರು ರೌಡಿ ಶೀಟರ್‌ಗಳ ಗಡಿಪಾರು : ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆದೇಶ – vishwanews24

ಉಡುಪಿ: ಮೂವರು ರೌಡಿ ಶೀಟರ್‌ಗಳ ಗಡಿಪಾರು : ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆದೇಶ

ಉಡುಪಿ: ಉಡುಪಿ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯ ಮೂವರು ರೌಡಿ ಶೀಟರ್‌ಗಳನ್ನು ಗಡಿಪಾರು ಮಾಡಿ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹಾಗೂ ವಿಶೇಷ ಕಾರ್ಯಾಂಗ ದಂಡಾಧಿಕಾರಿ ಹರಿರಾಂ ಶಂಕರ್ ಆದೇಶ ಹೊರಡಿಸಿದ್ದಾರೆ.

ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಗುಲ್ವಾಡಿ ಗ್ರಾಮದ ಮಾವಿನಕಟ್ಟೆ ನಿವಾಸಿ ದಾನೀಶ್ ಮದನಿ (23) ಮತ್ತು ಕಾವ್ರಾಡಿ ಗ್ರಾಮ ಕಂಡ್ಲೂರು ನಿವಾಸಿ ಕರಾಣಿ ಮುಸೀನ್(44) ಹಾಗೂ ಶಿರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಪಾದೂರು ಗ್ರಾಮದ ಚಂದ್ರನಗರದ ಜನತಾ ಕಾಲೋನಿಯ ಇಲಿಯಾಸ್(36) ಎಂಬವರ ವಿರುದ್ಧ ವಿಶೇಷ ಕಾರ್ಯಾಂಗ ದಂಡಾಧಿಕಾರಿ ಜೂ.24ರಂದು ಈ ಆದೇಶ ಹೊರಡಿಸಿದ್ದಾರೆ.

ದಾನೀಶ್ ಮದನಿ ವಿರುದ್ಧ ಎಂಟು ಪ್ರಕರಣಗಳು ದಾಖಲಾಗಿದ್ದು, ಕುಂದಾಪುರ ಗ್ರಾಮಾಂತರ ಠಾಣೆಯಲ್ಲಿ ರೌಡಿ ಶೀಟರ್ ತೆರೆಯಲಾಗಿದೆ. ಕರಾಣಿ ಮುಸೀನ್ ವಿರುದ್ಧ 7 ಪ್ರಕರಣಗಳು ದಾಖಲಾಗಿದ್ದು ಕುಂದಾಪುರ ಗ್ರಾಮಾಂತರ ಠಾಣೆಯಲ್ಲಿ ರೌಡಿ ಶೀಟರ್ ತೆರೆಯಲಾಗಿದೆ. ಇಲಿಯಾಸ್ ವಿರುದ್ಧ 15 ಪ್ರಕರಣಗಳು ದಾಖಲಾಗಿದ್ದು ಶಿರ್ವ ಠಾಣೆಯಲ್ಲಿ ರೌಡಿ ಶೀಟರ್ ತೆರೆಯಲಾಗಿದೆ.

ಗಡಿಪಾರು ಕ್ರಮಕ್ಕೆ ಒಳಗಾದ ಈ ಮೂವರು ಆರೋಪಿಗಳು, ಕೊಲೆ, ಕೊಲೆಯತ್ನ, ಪೊಲೀಸ್ ಠಾಣೆಗೆ ಕಲ್ಲೆಸೆತ, ಕಳವು, ಜಾನುವಾರು ಕಳವು, ಜಾನುವಾರು ಹತ್ಯೆ, ರೌಡಿಸಂ ಪ್ರವೃತ್ತಿಯ ಹಲ್ಲೆ ಮುಂತಾದ ಪ್ರಕರಣಗಳ ಸಹಿತ ಒಟ್ಟು 30 ಪ್ರಕರಣಗಳಲ್ಲಿ ಭಾಗಿಯಾಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ದಾನೀಶ್ ಮದನಿನನ್ನು ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ನಗರ ಪೊಲೀಸ್ ಠಾಣಾ ವ್ಯಾಪ್ತಿಗೆ, ಕರಾಣಿ ಮುಸೀನ್‌ ನನ್ನು ಬೀದರ್ ಜಿಲ್ಲೆಯ ಗಾಂಧಿ ಗಂಜ ಪೊಲೀಸ್ ಠಾಣಾ ವ್ಯಾಪ್ತಿಗೆ ಮತ್ತು ಇಲಿಯಾಸ್‌ನನ್ನು ಉತ್ತರ ಕನ್ನಡ ಜಿಲ್ಲೆಯ ಕಾರವಾರ ನಗರ ಪೊಲೀಸ್ ಠಾಣಾ ವ್ಯಾಪ್ತಿಗೆ ಗಡಿಪಾರು ಮಾಡಲಾಗಿದೆ.

ಕಳೆದ ಒಂದು ವರ್ಷದಿಂದ ಜಿಲ್ಲೆಯಲ್ಲಿ ಸಮಾಜ ವಿರೋಧಿ ಶಕ್ತಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗಿದೆ ಎಂದು ಉಡುಪಿ ಪೊಲೀಸರು ತಿಳಿಸಿದ್ದಾರೆ. ಈ ಅವಧಿಯಲ್ಲಿ ಮೂವರನ್ನು ಪಿಐಟಿ ಎನ್‌ಡಿಪಿಎಸ್ ಕಾಯ್ದೆಯಡಿ ಬಂಧಿಸಲಾಗಿದೆ, ನಾಲ್ವರ ವಿರುದ್ಧ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಿ ಜೈಲಿಗೆ ಹಾಕಲಾಗಿದೆ, 14 ಜನ ಸಾಮಾನ್ಯರ ವಿರುದ್ಧ ಗಡಿಪಾರು ಆದೇಶ ಹೊರಡಿಸಲಾಗಿದೆ.

Vishwa News 24

Recent Posts

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ -vishwanews24

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…

12 hours ago

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ -vishwanews24

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…

12 hours ago

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು -vishwanews24

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…

12 hours ago

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ:ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ ಬಹಿರಂಗ! -vishwanews24

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ…

12 hours ago

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

1 day ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

1 day ago