ಉಡುಪಿ : ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು ಇವರ ನಿರ್ದೆಶನದ ಮೇರೆಗೆ ಸೆಪ್ಟಂಬರ್ 30 ರಂದು ಉಡುಪಿ, ಕುಂದಾಪುರ ಹಾಗೂ ಕಾರ್ಕಳದ ವಿವಿಧ ನ್ಯಾಯಾಲಯಗಳಲ್ಲಿ ಮೇಘಾ ಲೋಕ್ ಅದಾಲತನ್ನು ಆಯೋಜಿಸಿ ಒಂದೇ ದಿನ ಒಟ್ಟು 2020 ಪ್ರಕರಣಗಳನ್ನು (ರಾಜಿಯಾಗಬಲ್ಲ ಅಪರಾಧಿಕ ಪ್ರಕರಣ -13, ಚೆಕ್ಕು ಅಮಾನ್ಯ ಪ್ರಕರಣ-100, ಬ್ಯಾಂಕ್ / ಹಣ ವಸೂಲಾತಿ ಪ್ರಕರಣ-8, ಎಂ.ವಿ.ಸಿ ಪ್ರಕರಣ-72, ಎಂ.ಎAಆರ್.ಡಿ ಆಕ್ಟ್ ಪ್ರಕರಣ-7, ವೈವಾಹಿಕ ಪ್ರಕರಣ-9, ಸಿವಿಲ್ ಪ್ರಕರಣ-74, ಇತರೇ ಕ್ರಿಮಿನಲ್ ಪ್ರಕರಣ-1505 ಹಾಗೂ ವ್ಯಾಜ್ಯ ಪೂರ್ವ ದಾವೆ-232) ರಾಜೀ ಮುಖಾಂತರ ಇತ್ಯರ್ಥಪಡಿಸಿ ರೂ.7,88,21,642/- ಪರಿಹಾರದ ಮೊತ್ತವನ್ನು ಘೋಷಿಸಲಾಯಿತು.
ನ್ಯಾಯಾಂಗ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ, ಉಡುಪಿ, ಕುಂದಾಪುರ ಹಾಗೂ ಕಾರ್ಕಳ, ಅಭಿಯೋಗ ಮತ್ತು ಸರ್ಕಾರಿ ವ್ಯಾಜ್ಯಗಳ ಇಲಾಖೆ, ಪೊಲೀಸ್ ಇಲಾಖೆ, ಕಂದಾಯ ಇಲಾಖೆ, ಗಣಿ ಮತ್ತು ಭೂವಿಜ್ಞಾನ ಇಲಾಖೆ, ವಿಮಾ ಕಂಪೆನಿಗಳು, ಬ್ಯಾಂಕ್, ಕಕ್ಷಿಗಾರರು ಹಾಗೂ ಇತರ ಸರ್ಕಾರಿ ಇಲಾಖೆಯ ಸಂಪೂರ್ಣ ಸಹಕಾರದೊಂದಿಗೆ ಲೋಕ್ ಅದಾಲತ್ ನ್ನು ಯಶಸ್ವಿಗೊಳಿಸಲಾಯಿತು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಅಧ್ಯಕ್ಷರು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಉಡುಪಿ ಅವರ ಪ್ರಕಟಣೆ ತಿಳಿಸಿದೆ.
ಉಡುಪಿ : ಹಣಕಾಸಿನ ವಿಚಾರದಲ್ಲಿ ವೈಮನಸ್ಸು ಡೇವಿಡ್ ಡಿಸೋಜ ಹತ್ಯೆಗೆ ಕಾರಣ; ತನಿಖೆಯಿಂದ ಬಯಲು ಉಡುಪಿ: ಮುದರಂಗಡಿ ಗ್ರಾ.ಪಂ ಮಾಜಿ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ: ಮೂವರು ಆರೋಪಿಗಳ ಬಂಧನ ಉಡುಪಿ: ಮುದರಂಗಡಿಯಲ್ಲಿ ಉದ್ಯಮಿ ಹಾಗೂ ಕಾಂಗ್ರೆಸ್ ಮುಖಂಡ ಡೇವಿಡ್…
ಹಿಮಾಚಲ ಪ್ರದೇಶದಲ್ಲಿ ಭೀಕರ ರಸ್ತೆ ದುರಂತ ; ಕಂದಕಕ್ಕೆ ಉರುಳಿದ ಖಾಸಗಿ ಬಸ್, 7 ಮಂದಿ ಮೃತ್ಯು ಶಿಮ್ಲಾ :…
ಗೃಹಲಕ್ಷ್ಮಿ 32ನೇ ಕಂತಿನ ಹಣ 2443 ಕೋಟಿ ರೂ. ಬಿಡುಗಡೆ ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಡಿ 32ನೇ ಕಂತಿನ ಹಣ ಬಿಡುಗಡೆಯಾಗಿದೆ.…
ನನ್ನ ಅವಶ್ಯಕತೆ ಇರಲಿಲ್ಲವೇನೋ ಅದಕ್ಕೆ ಕೊನೆ ಕ್ಷಣದಲ್ಲಿ ಕೈಬಿಟ್ಟರು: ಮಂಕಾಳ ವೈದ್ಯ ಅಸಮಾಧಾನ ಮೈಸೂರು: ನನ್ನ ಅವಶ್ಯಕತೆ ಇರಲಿಲ್ಲವೇನೋ ?…
ಶಿರ್ವ: ರಸ್ತೆ ದಾಟಲು ನಿಂತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ; ಸವಾರ ಸಾವು ಶಿರ್ವ : ರಸ್ತೆ ದಾಟಲು ನಿಂತಿದ್ದ…