ಉಡುಪಿ : ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು ಇವರ ನಿರ್ದೆಶನದ ಮೇರೆಗೆ ಸೆಪ್ಟಂಬರ್ 30 ರಂದು ಉಡುಪಿ, ಕುಂದಾಪುರ ಹಾಗೂ ಕಾರ್ಕಳದ ವಿವಿಧ ನ್ಯಾಯಾಲಯಗಳಲ್ಲಿ ಮೇಘಾ ಲೋಕ್ ಅದಾಲತನ್ನು ಆಯೋಜಿಸಿ ಒಂದೇ ದಿನ ಒಟ್ಟು 2020 ಪ್ರಕರಣಗಳನ್ನು (ರಾಜಿಯಾಗಬಲ್ಲ ಅಪರಾಧಿಕ ಪ್ರಕರಣ -13, ಚೆಕ್ಕು ಅಮಾನ್ಯ ಪ್ರಕರಣ-100, ಬ್ಯಾಂಕ್ / ಹಣ ವಸೂಲಾತಿ ಪ್ರಕರಣ-8, ಎಂ.ವಿ.ಸಿ ಪ್ರಕರಣ-72, ಎಂ.ಎAಆರ್.ಡಿ ಆಕ್ಟ್ ಪ್ರಕರಣ-7, ವೈವಾಹಿಕ ಪ್ರಕರಣ-9, ಸಿವಿಲ್ ಪ್ರಕರಣ-74, ಇತರೇ ಕ್ರಿಮಿನಲ್ ಪ್ರಕರಣ-1505 ಹಾಗೂ ವ್ಯಾಜ್ಯ ಪೂರ್ವ ದಾವೆ-232) ರಾಜೀ ಮುಖಾಂತರ ಇತ್ಯರ್ಥಪಡಿಸಿ ರೂ.7,88,21,642/- ಪರಿಹಾರದ ಮೊತ್ತವನ್ನು ಘೋಷಿಸಲಾಯಿತು.
ನ್ಯಾಯಾಂಗ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ, ಉಡುಪಿ, ಕುಂದಾಪುರ ಹಾಗೂ ಕಾರ್ಕಳ, ಅಭಿಯೋಗ ಮತ್ತು ಸರ್ಕಾರಿ ವ್ಯಾಜ್ಯಗಳ ಇಲಾಖೆ, ಪೊಲೀಸ್ ಇಲಾಖೆ, ಕಂದಾಯ ಇಲಾಖೆ, ಗಣಿ ಮತ್ತು ಭೂವಿಜ್ಞಾನ ಇಲಾಖೆ, ವಿಮಾ ಕಂಪೆನಿಗಳು, ಬ್ಯಾಂಕ್, ಕಕ್ಷಿಗಾರರು ಹಾಗೂ ಇತರ ಸರ್ಕಾರಿ ಇಲಾಖೆಯ ಸಂಪೂರ್ಣ ಸಹಕಾರದೊಂದಿಗೆ ಲೋಕ್ ಅದಾಲತ್ ನ್ನು ಯಶಸ್ವಿಗೊಳಿಸಲಾಯಿತು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಅಧ್ಯಕ್ಷರು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಉಡುಪಿ ಅವರ ಪ್ರಕಟಣೆ ತಿಳಿಸಿದೆ.
ಮುಂಬೈ: ಹೆಂಡತಿ ಮೇಲಿನ ಅನುಮಾನಕ್ಕೆ ಮನೆ ತುಂಬಾ ಸಿಸಿಟಿವಿ ಅಳವಡಿಸಿದ್ದ ಪತಿ ; ಕಿರುಕುಳ ತಾಳಲಾರದೇ ಪತ್ನಿ ಆತ್ಮಹತ್ಯೆ ಮುಂಬೈ:…
ಕಾಪು : ಸ್ಕೂಟಿಗೆ ಬಸ್ ಢಿಕ್ಕಿ ; ಸವಾರ ಗಂಭೀರ ಕಾಪು: ರಾಷ್ಟ್ರೀಯ ಹೆದ್ದಾರಿ 66ರ ಕಾಪು ಸಾಯಿ ಸರ್ವಿಸ್…
ಬೆಳ್ತಂಗಡಿ ಸೇತುವೆ ಪುನಃ ನಿರ್ಮಾಣ ಕಾಮಗಾರಿ: ಸಂಚಾರ ಮಾರ್ಗ ಬದಲಾವಣೆ ಮಂಗಳೂರು: ಬೆಳ್ತಂಗಡಿ ತಾಲೂಕಿನ ಉಜಿರೆ-ಇಂದಬೆಟ್ಟು ಜಿಲ್ಲಾ ಮುಖ್ಯ ರಸ್ತೆಯಲ್ಲಿನ…
ಅನುಮತಿ ಇಲ್ಲದೆ ವ್ಯಕ್ತಿಯೊಬ್ಬರ ಖಾಸಗಿ ಚಿತ್ರ ಹಂಚಿಕೊಂಡರೆ ತಕ್ಷಣ ಎಫ್ಐಆರ್ ಗೆ ಆದೇಶ ಬೆಂಗಳೂರು, : ವ್ಯಕ್ತಿಯೊಬ್ಬರ ಒಪ್ಪಿಗೆಯಿಲ್ಲದೆ ಅವರ…
ನಮ್ಮದು ಸಣ್ಣ ಪಕ್ಷ ನಾವ್ಯಾಕೆ ಕಾಂಗ್ರೆಸ್ ಶಾಸಕರನ್ನ ಆಪರೇಷನ್ ಮಾಡೋಣ ? : ಹೆಚ್ಡಿಕೆ ವಾಗ್ದಾಳಿ ಬೆಂಗಳೂರು: ನಮ್ಮದು ಸಣ್ಣ…
ಮಂಗಳೂರು : ಶಾಸ್ತ್ರೀಯ ನೃತ್ಯ ಕಲಾವಿದೆಯಾಗಿ ರೆಮೋನಾ ಎವೆಟ್ ಪೆರೇರಾ ಆಯ್ಕೆ ಮಂಗಳೂರು : ಮಂಗಳೂರಿನ ಸಂತ ಅಲೋಸಿಯೆಸ್ ಪರಿಗಣಿತ…