ಉಡುಪಿ:ಮನೆಯ ಮೇಲ್ಚಾವಣಿ ಕಾಂಕ್ರೀಟ್ ಮಾಡಿ ಕೊಡುವುದಾಗಿ ಹಣ ಪಡೆದು ವ್ಯಕ್ತಿಯೊಬ್ಬರಿಗೆ ಮೋಸ ಮಾಡಿರುವ ಬಗ್ಗೆ ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಂಚನೆಗೆ ಒಳಗಾದವರು ಮಣಿಪಾಲದ ಬಡಗಬೆಟ್ಟು ಗ್ರಾಮದ ಪ್ರಗತಿ ನಗರ ಪುಟ್ಟು ನಾಯ್ಕ. ಇವರು ಮನೆಯ ಮೇಲ್ಚಾವಣಿ ಕಾಂಕ್ರೀಟ್ ಮಾಡಿ ಕೊಡುವುದಾಗಿ 2,15,000ರೂ.ಗೆ ಜುಲೈ .5 ರಂದು ಪ್ರಶಾಂತ್ ನಾಯ್ಕ(45) ಅವರೊಂದಿಗೆ ಒಪ್ಪಂದ ಮಾಡಿಕೊಂಡಿದ್ದರು.
ಅಲ್ಲದೇ ಈ ಸಂಬಂಧ ಪ್ರಶಾಂತ್ ಮತ್ತು ಅವರ ಮಿತ್ರ ಎನ್.ರಾಘವ ನಾಯ್ಕ ಒಟ್ಟು 1.25ಲಕ್ಷ ರೂ. ಹಣ ನೀಡಿದ್ದರು ಎನ್ನಲಾಗಿದೆ. ಸೆ.4ರಂದು ಮೇಲ್ಚಾವಣಿ ಮಾಡಲು ಪ್ರಾರಂಭಿಸಿದ ಪ್ರಶಾಂತ್ ನಾಯ್ಕ 10 ದಿನಗಳೊಳಗೆ ಮಾಡಿ ಕೊಡುವುದಾಗಿ ಪೊಲೀಸ್ ಠಾಣೆಯಲ್ಲಿ ಲಿಖಿತವಾಗಿ ನೀಡಿದ್ದರು.
ಆದರೆ ಪುಟ್ಟು ನಾಯ್ಕ ಮನೆಯ ಮೇಲ್ಚಾವಣಿ ಕಾಂಕ್ರೀಟ್ ಮಾಡಿ ಕೊಡದೇ, ಹಣವನ್ನು ವಾಪಾಸು ನೀಡದೇ ಮೋಸ ಮಾಡಿರುವುದಾಗಿ ದೂರಲಾಗಿದೆ.
ಆರೋಪಿ ವಿರುದ್ದ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಭಕ್ತರು ಗೋಕರ್ಣದ ಗಣೇಶನ ವಿಗ್ರಹ ಸ್ಪರ್ಶಿಸಿ ಪೂಜೆ ಮಾಡುವಂತಿಲ್ಲ ಗೋಕರ್ಣ (ಉತ್ತರ ಕನ್ನಡ ಜಿಲ್ಲೆ): ಗೋಕರ್ಣದ ಮಹಾಗಣಪತಿ ದೇವಸ್ಥಾನದಲ್ಲಿರುವ ಸಾವಿರಾರು ವರ್ಷಗಳಷ್ಟು…
ಕೊಲಂಬೊ : ಅಕ್ರಮ ಪ್ರವೇಶಿಸಿ ಮೀನುಗಾರಿಕೆ ನಡೆಸಿದ ಆರೋಪ : 9 ಭಾರತೀಯ ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ ಕೊಲಂಬೊ :…
ಸುಳ್ಯ: ಬೈಕ್-ಕಾರು ಅಪಘಾತ; ದ್ವಿತೀಯ ಪಿಯು ವಿದ್ಯಾರ್ಥಿ ಸಾವು ಅರಂತೋಡು: ಅರಂತೋಡು ಕುಲ್ಚಾರ್ ಸಮೀಪ ಬೈಕ್ ಕಾರು ನಡುವೆ ಅಪಘಾತ…
ಮಂಗಳೂರು: ವಿದ್ಯಾರ್ಥಿಗಳು, ವಿಪಕ್ಷ ನಾಯಕನ ಜೊತೆ ಆಡಳಿತ ಪಕ್ಷ ನಡೆಸಿಕೊಂಡ ರೀತಿ ಖಂಡನೀಯ: ರಮಾನಾಥ ರೈ ಮಂಗಳೂರು: ನೀಟ್ ಪರೀಕ್ಷೆಯಲ್ಲಿನ…
ಪ್ರಶ್ನೆ ಪತ್ರಿಕೆ ಸೋರಿಕೆ: ಕೇಂದ್ರ ಸರ್ಕಾರ ಯಾರನ್ನೂ ಕಾಪಾಡಬಾರದು : ಡಿ ಕೆ ಶಿವಕುಮಾರ್ ಆಗ್ರಹ ಬೆಂಗಳೂರು: ಪ್ರಶ್ನೆ ಪತ್ರಿಕೆ…
ವಿದ್ಯಾರ್ಥಿಗಳ ಹಿತಕ್ಕಾಗಿ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದ್ದರೆ, ಬಿಜೆಪಿ ನಾಯಕರು ಮೋದಿ ಮೆಚ್ಚಿಸಲು ಪ್ರತಿಭಟಿಸುತ್ತಿದ್ದಾರೆ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರು:…