Featured

ಉಡುಪಿ : ಮೇ 10 ರಂದು ರಾಜ್ಯ ಬಿಜೆಪಿ ಪದಾಧಿಕಾರಿಗಳ ಸಭೆ- Vishwanews24

ಉಡುಪಿ : ಮೇ 10 ರಂದು ರಾಜ್ಯ ಬಿಜೆಪಿ ಪದಾಧಿಕಾರಿಗಳ ಸಭೆ

ಉಡುಪಿ: ಬಿಜೆಪಿ ರಾಜ್ಯ ಪದಾಧಿಕಾರಿಗಳ ಸಭೆ ಮೇ 10ರಂದು ಉಡುಪಿಯಲ್ಲಿ ನಡೆಯಲಿದೆ. ಅಂದು ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ಪದಾಧಿಕಾರಿಗಳ ಸಭೆ ಕಿದಿಯೂರು ಹೋಟೆಲ್ ನ ಮಾಧವ ಕೃಷ ಸಭಾಭವನದಲ್ಲಿ ನಡೆಯಲಿದ್ದು ರಾಜ್ಯಾದ್ಯಂತ 77 ಮಂದಿ ಆಹ್ವಾನಿತರು ಈ ಸಭೆಯಲ್ಲಿ ಭಾಗವಹಿಸಲಿದ್ದಾರೆ.

ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಅಧ್ಯಕ್ಷತೆಯಲ್ಲಿ ನಡೆಯುವ ಸಭೆಗೆ ರಾಜ್ಯದ ಹಾಗೂ ರಾಷ್ಟ್ರೀಯ ನಾಯಕರು ಭಾಗವಹಿಸಲಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹಾಗೂ ಮಂಗಳೂರು ವಿಭಾಗ ಪುಭಾರಿ ಕೆ. ಉದಯಕುಮಾರ್ ಶೆಟ್ಟಿ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.

ಉಡುಪಿ ನಗರ ಸರ್ವಿಸ್ ಬಸ್ಯಾಂಡ್ ಬಳಿಯ ಗಾಂಧೀಜಿ ಪ್ರತಿಮೆಗೆ ಹೂ ಹಾರ ಹಾಕಿ ಕಿದಿಯೂರು ಹೋಟೆಲ್ ನಿಂದ ಸಭಾಂಗಣದವರೆಗಿನ ಮೆರವಣಿಗೆಯಲ್ಲಿ ರಾಜ್ಯ ಪದಾಧಿಕಾರಿಗಳನ್ನು ಕರೆತರಲಾಗುವುದು.ಚುನಾವಣೆಗೆ ಇನ್ನು 11 ತಿಂಗಳು ಮಾತ್ರ ಬಾಕಿ ಇದ್ದು, ಈ ಸಭೆ ಉಡುಪಿ ಜಿಲ್ಲೆಯಲ್ಲಿ ಬಿಜೆಪಿ ಪರವಾದ ವಾತಾವರಣ ಉಂಟು ಮಾಡಲಿದೆ.

ಉಡುಪಿಯಲ್ಲಿ ರಾಜ್ಯ ಪದಾಧಿಕಾರಿಗಳ ಸಭೆ ಮೊದಲ ಬಾರಿ ನಡೆಯಲಿದ್ದು, ಕಾರ್ಯಕರ್ತರಲ್ಲಿ ಹುಮ್ಮಸ್ಸು ಉಂಟುಮಾಡಿದೆ. ಉಡುಪಿ ನಗರ ಸಿಂಗಾರಗೊಳ್ಳಲಿದ್ದು ಎಲ್ಲೆಡೆ ಬಿಜೆಪಿ ಧ್ವಜಗಳು ರಾರಾಜಿಸಲಿದೆ. ರಾಜ್ಯದ ನಾಯಕರನ್ನು ಸ್ವಾಗತಿಸಲು ಸಕಲ ಸಿದ್ಧತೆಗಳು ನಡೆಯುತ್ತಿವೆ ಎಂದು ಅವರು ಮಾಹಿತಿ ನೀಡಿದರು.’

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

3 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

3 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

4 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

7 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

7 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

7 hours ago