Featured

ಉಡುಪಿ: ಮೇ 28 ರಂದು ಗ್ರಾ.ಪಂ. ಉಪ ಚುನಾವಣೆಯ ಮತ ಎಣಿಕೆ : ನಿಷೇಧಾಜ್ಞೆ ಜಾರಿ – vishwanews24

ಉಡುಪಿ: ಮೇ 28 ರಂದು ಗ್ರಾ.ಪಂ. ಉಪ ಚುನಾವಣೆಯ ಮತ ಎಣಿಕೆ : ನಿಷೇಧಾಜ್ಞೆ ಜಾರಿ

     ಉಡುಪಿ: ಗ್ರಾಮ ಪಂಚಾಯತ್ ಉಪಚುನಾವಣೆ 2025 ಕ್ಕೆ ಸಂಬ0ಧಿಸಿದ0ತೆ ಜಿಲ್ಲೆಯಲ್ಲಿ ವಿವಿಧ ಕಾರಣಗಳಿಂದ ತೆರವಾಗಿರುವ ಸದಸ್ಯ ಸ್ಥಾನಗಳಿಗೆ ನಡೆದ ಉಪಚುನಾವಣೆಯ ಮತ ಎಣಿಕೆ ಕಾರ್ಯವು ಮೇ 28 ರಂದು ಉಡುಪಿ ತಾಲೂಕು ಕಚೇರಿ ಮತ್ತು ಕಾಪು ತಾಲೂಕು ಕಚೇರಿಯಲ್ಲಿ ನಡೆಯಲಿರುವ ಹಿನ್ನೆಲೆ, ಸಂದರ್ಭದಲ್ಲಿ ಸಾರ್ವಜನಿಕ ಶಾಂತಿ ಸುವ್ಯವಸ್ಥೆಯನ್ನು ಕಾಪಾಡುವ ಮೂಲಕ ಮುಕ್ತ ಮತ್ತು ನ್ಯಾಯಯುತ ಹಾಗೂ ನಿಷ್ಪಕ್ಷಪಾತವಾಗಿ ಮತ ಎಣಿಕೆ ಕಾರ್ಯವನ್ನು ನಡೆಸುವ ನಿಟ್ಟಿನಲ್ಲಿ, ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023 ಕಲಂ 163 ಮತ್ತು ಕರ್ನಾಟಕ ಪೊಲೀಸ್ ಕಾಯ್ದೆ 1963 ಕಲಂ 35 ರಡಿ ಪ್ರದತ್ತವಾಗಿರುವ ಅಧಿಕಾರವನ್ನು ಚಲಾಯಿಸಿ, ಮೇ 28 ಬೆಳಗ್ಗೆ 5 ಗಂಟೆಯಿA ಮತ ಎಣಿಕೆ ಕಾರ್ಯವು ಮುಕ್ತಾಯವಾಗುವವರೆಗೆ ಮೇಲ್ಕಂಡ ತಾಲೂಕು ಕಚೇರಿಗಳ ಮತ ಎಣಿಕೆ ಕೇಂದ್ರದ ಸುತ್ತಮುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ, ಜಿಲ್ಲಾ ದಂಡಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಆದೇಶಿಸಿರುತ್ತಾರೆ

      ಸಂದರ್ಭದಲ್ಲಿ ಜಿಲ್ಲೆಯ ವ್ಯಾಪ್ತಿಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಸಾರ್ವಜನಿಕರು 5 ಜನರು ಅಥವಾ ಅದಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಗುಂಪು ಸೇರುವುದು ಅಥವಾ ತಿರುಗುವುದನ್ನು ಅಥವಾ ಮೆರವಣಿಗೆ, ಸಭೆ ಸಮಾರಂಭ ಜರುಗಿಸುವುದನ್ನು ನಿಷೇಧಿಸಿದೆ. ಅವಧಿಯಲ್ಲಿ ಧ್ವನಿವರ್ಧಕಗಳನ್ನು ಬಳಸುವಂತಿಲ್ಲ.

   ಮತ ಎಣಿಕೆ ಕೇಂದ್ರದ 100 ಮೀಟರ್ ಅಂತರದಲ್ಲಿ ಮೊಬೈಲ್ ಫೋನ್, ಕಾರ್ಡ್ಲೆಸ್ ಫೋನ್ ಅಥವಾ ಇನ್ನಿತರೆ ಎಲೆಕ್ಟ್ರಾನಿಕ್ ಉಪಕರಣಗಳನ್ನು ತೆಗೆದುಕೊಂಡು ಹೋಗುವುದನ್ನು ನಿಷೇಧಿಸಲಾಗಿದೆ

   ಯಾವುದೇ ರೀತಿಯ ಸಾರ್ವಜನಿಕ ಮೆರವಣಿಗೆ, ವಿಜಯೋತ್ಸವ, ಕರಾಳೋತ್ಸವ, ಪ್ರತಿಭಟನಾ ಮೆರವಣಿಗೆ ಹಾಗೂ ವಿಜಯೋತ್ಸವದ ಅಂಗವಾಗಿ ಸಾರ್ವಜನಿಕ ಸಭೆ ಸಮಾರಂಭಗಳನ್ನು ಹಾಗೂ ಯಾವುದೇ ರೀತಿಯ ಘೋಷಣೆ ಕೂಗುವುದನ್ನು ಪಟಾಕಿ/ಸಿಡಿಮದ್ದು ಸಿಡಿಸುವುದನ್ನು ನಿಷೇಧಿಸಲಾಗಿದೆ

    ಅವಧಿಯಲ್ಲಿ ಯಾವುದೇ ಆಯುಧ, ಕುಡುಗೋಲು, ಖಡ್ಗ, ಭರ್ಜಿ, ಗಧೆ, ಕೋಲು, ಚೂರಿ, ದೊಣ್ಣೆ, ಲಾಠಿಗಳನ್ನು ಅಥವಾ ದೈಹಿಕ ಹಿಂಸೆಗೆ ಕಾರಣವಾಗುವ ಅಥವಾ ಮಾರಕವಾಗುವ ಇನ್ನಾವುದೇ ವಸ್ತುಗಳನ್ನು ಧರಿಸುವುದನ್ನು ಮತ್ತು ಯಾವುದೇ ಕ್ಷಾರಕ ಯಾ ಸ್ಫೋಟಕ ವಸ್ತುಗಳು/ಪಟಾಕಿ/ಸಿಡಿಮದ್ದು ಹೊಂದುವುದನ್ನು ನಿಷೇದಿಸಲಾಗಿದೆ.

    ಯಾವುದೇ ಸಾರ್ವಜನಿಕ ಪ್ರದೇಶದಲ್ಲಿ ಕಲ್ಲುಗಳನ್ನು ಒಟ್ಟುಗೂಡಿಸುವುದು, ಯಾ ಕ್ಷಿಪಣಿಗಳು ಅಥವಾ ಕ್ಷಿಪಣಿಯಾಗಿ ಉಪಯೋಗಿಸಲ್ಪಡುವ ಇತರ ಆಯುಧಗಳು ಮತ್ತು ಸಾಧನ ಸಾಮಾಗ್ರಿಗಳನ್ನು ಧರಿಸುವುದನ್ನು ನಿಷೇದಿಸಲಾಗಿದೆ

    ಸಾರ್ವಜನಿಕವಾಗಿ ಯಾವುದೇ ವ್ಯಕ್ತಿ ಪ್ರಚೋದನಾತ್ಮಕ ಹಾಗೂ ಉದ್ರೇಕಕಾರಿ ಹಾಡುಗಳು, ಕೂಗಾಟ ಮಾಡುವುದನ್ನು ಹಾಗೂ ವ್ಯಕ್ತಿಗಳ ತೇಜೋವಧೆ ಮಾಡುವಂತಹ ಚಿತ್ರಗಳು, ಚಿಹ್ನೆಗಳು, ಪ್ರತಿಕೃತಿಗಳು ಮುಂತಾದವುಗಳನ್ನು ಪ್ರದರ್ಶಿಸುವುದಾಗಲಿ ಹಾಗೂ ಸಾರ್ವಜನಿಕ ಗಾಂಭೀರ್ಯ ಹಾಗೂ ನೈತಿಕತೆಗೆ ಭಂಗ ತರುವಂತಹ ಅಥವಾ ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ತರುವಂತಹ ಯಾವುದೇ ಕೃತ್ಯಗಳಲ್ಲಿ ತೊಡಗುವುದನ್ನು ನಿಷೇಧಿಸಲಾಗಿದೆ.

    ಯಾವುದೇ ವ್ಯಕ್ತಿ ಬಹಿರಂಗವಾಗಿ ಮೇಲೆ ವಿವರಿಸಿದ ಮಾರಕಾಸ್ತ್ರಗಳು, ಸ್ಫೋಟಕ ವಸ್ತುಗಳು, ವಿನಾಶಕಾರಿ ವಸ್ತುಗಳು ಹಾಗೂ ಇತರ ಆಕ್ಷೇಪಾರ್ಹ ವಸ್ತುಗಳನ್ನು ಹೊಂದಿದ್ದು ಕಂಡುಬA ಕೂಡಲೇ ಅವುಗಳನ್ನು ವಶಪಡಿಸಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಅಧಿಕಾರ ಇರುತ್ತದೆ. ಅಂತಹ ಮಾರಕಾಸ್ತ್ರಗಳನ್ನು ಸರಕಾರಕ್ಕೆ ಮುಟ್ಟುಗೋಲು ಮಾಡಿಕೊಳ್ಳಲಾಗುವುದು. ಅಲ್ಲದೇ ಸಂಬAಧಿಸಿದ ವ್ಯಕ್ತಿಗಳ ಮೇಲೆ ಕಾನೂನು ರೀತ್ಯಾ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ

Vishwa News 24

Recent Posts

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

14 hours ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

15 hours ago

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ – vishwanews24

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…

15 hours ago

ಟೈಮಿಂಗ್‌ ವಿವಾದ: ಕಾಪು ಸರ್ವಿಸ್ ರಸ್ತೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ – vishwanews24

ಟೈಮಿಂಗ್‌ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…

17 hours ago

ಉಡುಪಿ: ‘ಭಗವತಿ ಟೂರಿಸ್ಟ್’ ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ – vishwanews24

ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…

17 hours ago

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ – vishwanews24

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…

17 hours ago