Featured

ಉಡುಪಿ: ಮೈಕ್ರೋ ಫೈನಾನ್ಸ್ ಗಳು, ಆರ್.ಬಿ.ಐ ಮಾರ್ಗಸೂಚಿಗಳನ್ನು ಪಾಲಿಸಬೇಕು : ಜಿಲ್ಲಾಧಿಕಾರಿ ಡಾ.ಕೆ ವಿದ್ಯಾಕುಮಾರಿ – vishwanews24

ಉಡುಪಿ: ಮೈಕ್ರೋ ಫೈನಾನ್ಸ್ ಗಳು, ಆರ್.ಬಿ.ಐ ಮಾರ್ಗಸೂಚಿಗಳನ್ನು ಪಾಲಿಸಬೇಕು : ಜಿಲ್ಲಾಧಿಕಾರಿ ಡಾ.ಕೆ ವಿದ್ಯಾಕುಮಾರಿ

ಉಡುಪಿ: ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ , ಫೈನಾನ್ಸ್ ಗಳು, ಲೇವಾದೇವಿ ವ್ಯವಹಾರಸ್ಥರು, ಮೈಕ್ರೋ ಫೈನಾನ್ಸ್ ಹಣಕಾಸು ಸಂಸ್ಥೆಗಳು ಭಾರತೀಯ ರಿಸರ್ವ್ ಬ್ಯಾಂಕ್‌ಗಳು ನೀಡುವ ಮಾರ್ಗದರ್ಶನಗಳು ಹಾಗೂ ನಿಯಮಗಳನ್ನು ಚಾಚೂ ತಪ್ಪದೆ ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ ಹೇಳಿದರು.

ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ. ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ನಡೆದ ಕರ್ನಾಟಕ ರಾಜ್ಯ ಮೈಕ್ರೋ ಫೈನಾನ್ಸ್ ಸಂಸ್ಥೆಗಳ ನಿಯಂತ್ರಣದ ಕುರಿತು ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

ಇತ್ತೀಚಿನ ದಿನಗಳಲ್ಲಿ ರಾಜ್ಯದಾದ್ಯಂತ ಮೈಕ್ರೋ ಫೈನಾನ್ಸ್ಗಳಲ್ಲಿ ಸಾಲ ಪಡೆದ ಗ್ರಾಹಕರಿಗೆ ಕಿರುಕುಳದಂತಹ ಪ್ರಕರಣಗಳು ಪತ್ರಿಕೆಗಳಲ್ಲಿ ಕೇಳಿ ಬರುತ್ತಿವೆ. ಇದಕ್ಕೆಲ್ಲಾ ಕಾರಣ ಮಾರ್ಗಸೂಚಿಗಳು ಹಾಗೂ ನಿಯಮಗಳ ಪಾಲಿಸದೇ ಇರುವುದು ಮೇಲ್ನೋಟಕ್ಕೆ ಕಂಡು ಬರುತ್ತದೆ ಎಂದರು.

ಮೈಕ್ರೋ ಫೈನಾನ್ಸ್ಗಳು ಸಾಲ ಕೊಡುವ ಮುನ್ನ ಸಾಲಗಾರರ ಕುಟುಂಬದ ಆದಾಯ ಸೇರಿದಂತೆ ಮತ್ತಿತರ ಪೂರ್ವಾಪರಗಳನ್ನು ಪರಿಶೀಲನೆಯನ್ನು ಮಾಡಿ, ಅವರ ಆದಾಯದ ಶೇ. 50 ರಷ್ಟು ಮಾತ್ರ ಸಾಲ ನೀಡಬೇಕು. ಆದರೆ, ಅವರು ಸಾಲ ತೆಗೆದುಕೊಳ್ಳುವ ಸಾಮರ್ಥ್ಯ ನೋಡದೇ ಸಾಲವನ್ನು ನೀಡಿರುವ ಬಗ್ಗೆ ಕಂಡುಬರುತ್ತಿದೆ. ಇವುಗಳಿಗೆ ಆಸ್ಪದ ನೀಡಬಾರದು. ಸಾಲ ನೀಡುವವರು ಹಾಗೂ ತೆಗೆದುಕೊಳ್ಳುವವರು ಇಬ್ಬರೂ ಸಹ ಆರ್ಥಿಕ ಶಿಸ್ತನ್ನು ಪಾಲಿಸಬೇಕು ಎಂದರು.

ಆರ್.ಬಿ.ಐ ಮಾರ್ಗಸೂಚಿಯ ಪ್ರಕಾರ ಮೈಕ್ರೋ ಫೈನಾನ್ಸ್ಗಳು 3 ಲಕ್ಷ ರೂ. ವರೆಗೆ ಮಾತ್ರ ಸಾಲ ನೀಡಲು ಅವಕಾಶವಿದೆ. ಸಾಲ ಮರುಪಾವತಿಯನ್ನು ಕಾನೂನಿನ ಅನ್ವಯ ಕ್ರಮಗಳನ್ನು ಕೈಗೊಳ್ಳಬೇಕು. ಕಾನೂನನ್ನು ಉಲ್ಲಂಘಿಸಿ, ದೌರ್ಜನ್ಯ, ಕೆಟ್ಟ ಪದಗಳಲ್ಲಿ ಬೈಯುವುದು, ದಬ್ಬಾಳಿಕೆ, ಕಿರುಕುಳ ನೀಡುವುದು ಮಾಡಿದ್ದಲ್ಲಿ ಅಂತಹವರ ವಿರುದ್ಧ ಪೊಲೀಸ್ ನವರು ಸೊಮೋಟೋ ಪ್ರಕರಣ ದಾಖಲಿಸಿಕೊಳ್ಳಲು ಅವಕಾಶವಿದೆ ಎಂದು ಎಚ್ಚರಿಸಿದರು.
ಅದೇ ರೀತಿ ಸಾಲ ನೀಡಿದ ಫೈನಾನ್ಸ್ಗಳ ವಿರುದ್ಧ ತಿರುಗಿ ಬೀಳುವುದು ಅಥವಾ ಸಾಲ ಪಡೆದವರ ಮೇಲೆ ಫೈನಾನ್ಸ್ಗಳು, ಕಾನೂನು ಉಲ್ಲಂಘಿಸಿ ತಿರುಗಿ ಬಿದ್ದಲ್ಲಿ ಅಂತಹವರು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಾರ್ವಜನಿಕರು ಮೈಕ್ರೋ ಫೈನಾನ್ಸ್ ಸಂಬAಧಿತ ಕಿರುಕುಳ ದೂರುಗಳನ್ನು ಕಂಟ್ರೋಲ್ ರೂಂ ಸಂಖ್ಯೆ: 0820-2574802 ಗೆ ಕಚೇರಿ ವೇಳೆಯಲ್ಲಿ ನೀಡಬಹುದಾಗಿದೆ ಎಂದರು.

ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಅರುಣ್ ಕೆ ಮಾತನಾಡಿ, ಮೈಕ್ರೋ ಫೈನಾನ್ಸ್ಗಳಲ್ಲಿ ತೆಗೆದುಕೊಳ್ಳುವ, ಕೊಡುವ ವ್ಯವಹಾರಗಳು ಶಾಂತಿಯುತವಾಗಿ ಆಗಬೇಕು. ಸಾಲ ವಸೂಲಾತಿಗಾಗಿ ಫೈನಾನ್ಸ್ ಕಂಪನಿಗಳು ಬೆಳಗ್ಗೆ 9 ಕ್ಕೂ ಮುನ್ನ ಸಂಜೆ 6 ರ ನಂತರ ಸಾಲಗಾರರ ಮನೆಗೆ ಹೋಗಬಾರದು. ಯಾವುದೇ ರೀತಿಯ ದೌರ್ಜನ್ಯಗಳನ್ನು ನಡೆಸಬಾರದು. ಒಂದೊಮ್ಮೆ ಉಲ್ಲಂಘಿಸಿದ್ದಲ್ಲಿ ಅಂಹವರ ಮೇಲೆ ನಿರ್ದ್ಯಾಕ್ಷಿಣ್ಯವಾಗಿ ಕಾನೂನಿನ ಅಡಿಯಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದರು.

ಸಭೆಯಲ್ಲಿ ಸಹಾಯಕ ಕಮೀಷನರ್ ಮಹೇಶ್ಚಂದ್ರ, ಲೀಡ್ ಬ್ಯಾಂಕ್ ಮೆನೇಜರ್ ಹರೀಶ್, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು, ತಹಶೀಲ್ದಾರರುಗಳು, ವಿವಿಧ ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಪ್ರತಿನಿಧಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Vishwa News 24

Recent Posts

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ – vishwanews24

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್‌…

9 hours ago

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ ಪ್ರಕ್ರಿಯೆಗೆ ಚಾಲನೆ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ – vishwanews24

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…

9 hours ago

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ – vishwanews24

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…

9 hours ago

ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ – vishwanews24

 ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…

10 hours ago

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ–ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ – vishwanews24

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…

10 hours ago

ಕುದುರೆಮುಖ ಆಫ್ ರೋಡಿಂಗ್ ಚಟುವಟಿಕೆ ವಿರುದ್ಧ ತೀವ್ರ ಆಕ್ರೋಶ – vishwanews24

ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…

12 hours ago