ಉಡುಪಿ: ಅಂಗನವಾಡಿ ಮಕ್ಕಳು ಮತ್ತು ಗರ್ಭಿಣಿ ಮಹಿಳೆಯರಲ್ಲಿ ಪೌಷ್ಠಿಕತೆ ಹೆಚ್ಚಿಸುವ ನಿಟ್ಟಿನಲ್ಲಿ ಸರಕಾರದಿಂದ ಕೊಡಮಾಡುವ ಮೊಟ್ಟೆ ಸರಬರಾಜು ಟೆಂಡರ್ ಪ್ರಕ್ರಿಯೆಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವ ಶಶಿಕಲಾ ಜೊಲ್ಲೆ ಲಂಚಕ್ಕೆ ಬೇಡಿಕೆ ಇಟ್ಟಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ ಎಂದು ಕೆಪಿಸಿಸಿ ಪ್ಯಾನಲಿಸ್ಟ್ ವೆರೋನಿಕಾ ಕರ್ನೆಲಿಯೋ ಹೇಳಿದ್ದಾರೆ.
ಮೊಟ್ಟೆ ಸರಬರಾಜು ಟೆಂಡರ್ ಪ್ರಕ್ರಿಯೆಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಶಶಿಕಲಾ ಜೊಲ್ಲೆ ಹಸ್ತಕ್ಷೇಪ ನಡೆಸಲು ಒಪ್ಪಿಕೊಂಡು, ಮಾಸಿಕ ಕೋಟಿ ರೂ. ಲಂಚಕ್ಕೆ ಬೇಡಿಕೆ ಇಟ್ಟಿರುವುದು ಟಿವಿ ಮಾಧ್ಯಮವೊಂದರ ಕುಟುಕು ಕಾರ್ಯಾಚರಣೆಯಲ್ಲಿ ಬಹಿರಂಗ ಗೊಂಡಿದ್ದು ಆ ನೆಲೆಯಲ್ಲಿ ಅವರು ಕೂಡಲೇ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಸೂಕ್ತ ತನಿಕೆಗೆ ಅವಕಾಶ ಮಾಡಿಕೊಡ ಬೇಕು.
ಒರ್ವ ಮಹಿಳಾ ಸಚಿವೆಯಾಗಿ ಬಡ ಗರ್ಭಿಣಿ ಮಹಿಳೆಯರಿಗಾಗಿ ಸರ್ಕಾರ ನೀಡುವ ಮೊಟ್ಟೆಯಲ್ಲಿ ಕೂಡ ಸಚಿವೆ ಕಮೀಷನ್ ಪಡೆಯುತ್ತಿರುವುದು ನಾಚಿಕೆಗೇಡು. ದಿನಕ್ಕೊಂದು ಹಗರಣಗಳಲ್ಲಿ ತೊಡಗಿರುವ ಬಿಜೆಪಿ ನೇತೃತ್ವದ ರಾಜ್ಯ ಸರಕಾರದಿಂದ ಇನ್ನೊಂದು ಹಗರಣ ಬಯಲಾಗಿದೆ. ಮಾಜಿ ಮುಖ್ಯ ಮಂತ್ರಿ ಸಿದ್ಧರಾಮಯ್ಯನವರ ಆಡಳಿತದ ಅವದಿಯಲ್ಲಿ ಜಾರಿಗೆ ಬಂದಿದ್ದ ಈ ಜನಪರ ಯೋಜನೆಯಡಿಯಲ್ಲಿ ಅಂಗನವಾಡಿಗಳ ಮೂಲಕ ಹಾಲಿನೊಂದಿಗೆ ಮೊಟ್ಟೆಯನ್ನು ನೀಡಲಾಗುತ್ತಿತ್ತು. ಅಂದು ವಿರೋಧ ಪಕ್ಷವಾಗಿದ್ದ ಬಿಜೆಪಿ ಧರ್ಮದ ನೆಲೆಗಟ್ಟಿನಲ್ಲಿ ಇದನ್ನು ವಿರೋಧಿಸುತ್ತ ಬಂದಿತ್ತು. ಇಂದು ಅದೇ ಪಕ್ಷದ ಸಚಿವೆಯೊಬ್ಬರು ಅದೇ ಮೊಟ್ಟೆಯಲ್ಲಿ ಹಣ ದೋಚಲು ನೋಡಿ, ಭ್ರಷ್ಠಾಚಾರಕ್ಕೆ ಕೈ ಚಾಚಿ, ಯೋಜನೆ ಯನ್ನು ಕುಲಗೆಡಿಸುತ್ತಿರುವುದು, ಸರಕಾರದ ಜನಪರ ಚಿಂತನೆಯ ಆಡಳಿತಾತ್ಮಕ ವೈಫಲ್ಯಕ್ಕೆ ಸಾಕ್ಷಿಯಾಗಿದೆ ಎಂದು ಅವರು ಹೇಳಿದ್ದಾರೆ.
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…
ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…
ಟೈಮಿಂಗ್ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್ಪ್ರೆಸ್ ಬಸ್ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…
ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…
ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…