Featured

ಉಡುಪಿ: ಮೋದಿಯವರ ಅಚ್ಚೇ ದಿನದ ಪರಿಣಾಮ ಗೃಹಬಳಕೆಯ ಸಿಲಿಂಡರ್ ಬೆಲೆ ಸಾವಿರದ ಗಡಿ ದಾಟಿದೆ : ವೆರೋನಿಕಾ ಕರ್ನೆಲಿಯೊ – Vishwanews24

ಉಡುಪಿ: ಮೋದಿಯವರ ಅಚ್ಚೇ ದಿನದ ಪರಿಣಾಮ ಗೃಹಬಳಕೆಯ ಸಿಲಿಂಡರ್ ಬೆಲೆ ಸಾವಿರದ ಗಡಿ ದಾಟಿದೆ : ವೆರೋನಿಕಾ ಕರ್ನೆಲಿಯೊ

ಉಡುಪಿ: ಮತ್ತೊಮ್ಮೆ ಗೃಹ ಬಳಕೆಯ ಗ್ಯಾಸ್ ಸಿಲಿಂಡರ್ ಬೆಲೆಯನ್ನು ಏರಿಸುವುದರ ಮೂಲಕ ಗೃಹಿಣಿಯರ ಕಣ್ಣಲ್ಲಿ ನೀರು ತರಿಸುವಂತಹ ಪಾಪದ ಕೆಲಸವನ್ನು ನರೇಂದ್ರ ಮೋದಿ ನೇತೃತ್ವದ ಸರಕಾರ ಮಾಡಿದೆ ಎಂದು ಕೆಪಿಸಿಸಿ ವಕ್ತಾರರಾದ ವೆರೋನಿಕಾ ಕರ್ನೆಲಿಯೋ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮೋದಿಯವರ ಅಚ್ಚೇ ದಿನದ ಪರಿಣಾಮ ಗೃಹಬಳಕೆಯ ಸಿಲಿಂಡರ್ ಬೆಲೆ ಸಾವಿರದ ಗಡಿ ದಾಟಿ ಹೋಗಿದೆ. ಈಗ ಮತ್ತೊಮ್ಮೆ 50 ರೂ ಹೆಚ್ಚಳ ಮಾಡುವುದರ ಮೂಲಕ ಚುನಾವಣೆಯ ಸಮಯದಲ್ಲಿ ಮತ್ತೆ ರೂ 25 ಕಡಿಮೆ ಮಾಡುವ ನಾಟಕ ಮಾಡುತ್ತಾರೆ. ಕೇಂದ್ರದ ಉಜ್ವಲಾ ಯೋಜನೆಯ ಮೂಲಕ ಗ್ಯಾಸ್ ಸಂಪರ್ಕ ಪಡೆದಿದ್ದ ಬಡಪಾಯಿ ಬಡವರು ಅದರಲ್ಲೂ ಕೂಲಿ ಕಾರ್ಮಿಕ, ಬಡ ಹಾಗೂ ಮಾಧ್ಯಮ ವರ್ಗದ ಮಹಿಳೆಯರು ಗ್ಯಾಸ್ ಬೆಲೆಯೇರಿಕೆಯ ಶಾಕ್ ಗೆ ತತ್ತರಿಸಿ ಹೋಗಿದ್ದಾರೆ. ಸೌದೆ ಬಿಟ್ಟು ಸಿಲಿಂಡರ್ ಮೊರೆ ಹೋಗಿದ್ದ ಮಹಿಳೆಯರಿಗೆ ದರ ಏರಿಕೆಯಿಂದ ಹಳೆ ಗಂಡನ ಪಾದವೇ ಗತಿ ಎಂಬಂತೆ ಸೌದೆಯೇ ಆಸರೆಯಾಗುತ್ತಿದೆ.

ಹಿಂದೆ ಯುಪಿಎ ಸರ್ಕಾರವಿದ್ದಾಗ ಗ್ಯಾಸ್ ಗೆ ಸಬ್ಸಿಡಿ ದೊರೆಯುತಿತ್ತು. ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲದ ಬೆಲೆ ಏರಿಳಿತವಾದರೂ ಅದರ ಬಿಸಿ ಗ್ರಾಹಕರಿಗೆ ತಟ್ಟದಂತೆ ಯುಪಿಎ ಸರ್ಕಾರ ನೋಡಿಕೊಂಡಿತ್ತು. ಆದರೆ ಮೋದಿ ಸರ್ಕಾರ ಗ್ಯಾಸ್ ಮೇಲಿನ ಸಬ್ಸಿಡಿಯನ್ನು ಸುಳಿವೇ ಕೊಡದೆ ರದ್ದು ಮಾಡಿದೆ. ಬಡವರು ಬದುಕಬಾರದು ಬದಲಾಗಿ ಅದಾನಿ ಅಂಬಾನಿಯಂತಹ ಉದ್ಯಮಿಗಳು ಮಾತ್ರ ಬದುಕಬೇಕು ಎನ್ನುವುದು ಮೋದಿ ಸರ್ಕಾರದ ಉದ್ದೇಶವಾಗಿದೆ.

ಜತೆಗೆ ರಾಜ್ಯದಲ್ಲಿ ಜನರ ಗಮನವನ್ನು ಈ ಜ್ವಲಂತ ಸಮಸ್ಯೆಗಳಿಂದ ಬೇರೆಡೆಗೆ ಸೆಳೆಯುವ ಪ್ರಯತ್ನವನ್ನು ಸರ್ಕಾರ ಮಾಡುತ್ತಿದೆ. ಭಾವನಾತ್ಮಕ ವಿಚಾರಗಳನ್ನು ಮುನ್ನಲೆಗೆ ತಂದು ಸಮಾಜದಲ್ಲಿ ಅಶಾಂತಿ ಸೃಷ್ಟಿಸುತ್ತಿದೆ. ಕೂಡಲೇ ಕೇಂದ್ರ ಸರಕಾರ ಏರಿಕೆ ಮಾಡಿರುವ ಗ್ಯಾಸ್ ಬೆಲೆಯನ್ನು ಇಳಿಸುವಂತೆ ಅವರು ಆಗ್ರಹಿಸಿದ್ದಾರೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

12 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

12 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago