Featured

ಉಡುಪಿ: ಯಕ್ಷಗಾನದ ಹಿರಿಯ ಪ್ರಸಾದನ ತಜ್ಞ ಹಂದಾಡಿ ಬಾಲಕೃಷ್ಣ ನಾಯಕ್ ನಿಧನ – vishwanews24

ಉಡುಪಿ: ಯಕ್ಷಗಾನದ ಹಿರಿಯ ಪ್ರಸಾದನ ತಜ್ಞ ಹಂದಾಡಿ ಬಾಲಕೃಷ್ಣ ನಾಯಕ್ ನಿಧನ

ಉಡುಪಿ : ಯಕ್ಷಗಾನದ ಹಿರಿಯ ಪ್ರಸಾದನ ತಜ್ಞ ಹಂದಾಡಿ ಬಾಲಕೃಷ್ಣ ನಾಯಕ್ (76)  ಮಣಿಪಾಲದ ಕೆ.ಎಂ.ಸಿ ಆಸ್ಪತ್ರೆಯಲ್ಲಿ ಅಲ್ಪಕಾಲದ ಅಸೌಖ್ಯದಿಂದ ನಿಧನ ಹೊಂದಿದರು.

ಶ್ರೀ ಗಜಾನನ ಯಕ್ಷಗಾನ ವೇಷಭೂಷಣ ಸಂಸ್ಥೆಯ ಸಂಸ್ಥಾಪಕ, ಬಡಗುತಿಟ್ಟಿನ ಪ್ರಸಾದನ ತಜ್ಞರೂ ಆಗಿರುವ ಬಾಲಕೃಷ್ಣ ನಾಯಕ್ ಎಚ್. ಸುಬ್ಬಣ್ಣ ಭಟ್ ಮತ್ತು ಇಂದು ನಾಯಕ್ ಇವರ ಜೊತೆಯಲ್ಲಿ ಬಡಗುತಿಟ್ಟಿನ ವೇಷಭೂಷಣಗಳನ್ನು ವಿವಿಧ ಸಂಘ ಸಂಸ್ಥೆಗಳಿಗೆ ಒದಗಿಸುತ್ತಾ, ಬಳಿಕ ಸ್ವಂತ ಸಂಸ್ಥೆಯನ್ನು ಸ್ಥಾಪಿಸಿದ್ರು. ತಮ್ಮ ಅಪೂರ್ವ ಕಲಾಪ್ರತಿಭೆ ಹಾಗೂ ಸರಳ ಸಜ್ಜನಿಕೆಯಿಂದ ಎಲ್ಲ ಸಂಘ ಸಂಸ್ಥೆಗಳಿಗೂ ಅನಿವಾರ್ಯ ಎಂಬಂತೆ ಬಾಳಿದ ಧೀಮಂತರು. ಬಡಗುತಿಟ್ಟಿನ ಕಿರೀಟ ಹಾಗೂ ವೇಷಭೂಷಣಗಳ ತಯಾರಿಕೆಯಲ್ಲಿ ಸಿದ್ಧಹಸ್ತರಾಗಿದ್ದರು.

ದೇಶವಿದೇಶಗಳಲ್ಲಿ ನೂರಾರು ಮಂದಿಗೆ ಬಡಗುತಿಟ್ಟಿನ ಪಾರಂಪರಿಕ ವೇಷಭೂಷಣ ಸಿದ್ಧಪಡಿಸಿಕೊಟ್ಟ ಕೀರ್ತಿ ಬಾಲಕೃಷ್ಣ ನಾಯಕ್‍ರದ್ದು. ತನ್ನ ಮೂವರು ಪುತ್ರರೂ ಈ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವುದು ಈ ಕುಟುಂಬದ ವಿಶೇಷತೆಯಾಗಿದೆ. ಇವರ ಕಲಾ ಪ್ರತಿಭೆಯನ್ನು ಗುರುತಿಸಿ ಕರ್ನಾಟಕ ಯಕ್ಷಗಾನ ಅಕಾಡೆಮಿ, ಯಕ್ಷಗಾನ ಕಲಾರಂಗ ಹಾಗೂ ಕಳೆದ ವರ್ಷ ಉಡುಪಿಯಲ್ಲಿ ಜರಗಿದ ಪ್ರಥಮ ಯಕ್ಷಗಾನ ಸಮ್ಮೇಳನದಲ್ಲಿ ಗೌರವಿಸಲಾಗಿತ್ತು.

ಉಡುಪಿಯ ಯಕ್ಷಶಿಕ್ಷಣ ಅಭಿಯಾನ ಯಶಸ್ವಿಯಾಗುವಲ್ಲಿ ಬಾಲಕೃಷ್ಣ ನಾಯಕ್‍ರ ಕೊಡುಗೆ ಮಹತ್ತರವಾದುದು. ಮೃತರು ಪತ್ನಿ, ಮೂವರು ಪುತ್ರರು ಹಾಗೂ ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ. ಯಕ್ಷಶಿಕ್ಷಣ ಟ್ರಸ್ಟ್ ನ ಅಧ್ಯಕ್ಷರೂ, ಉಡುಪಿಯ ಶಾಸಕರೂ ಆದ ಯಶಪಾಲ್ ಸುವರ್ಣ, ಸ್ಥಾಪಕ ಟ್ರಸ್ಟಿ ಕೆ.ರಘುಪತಿ ಭಟ್ ಹಾಗೂ ಕಾರ್ಯದರ್ಶಿ ಮುರಲಿ ಕಡೆಕಾರ್, ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ. ಗಂಗಾಧರ ರಾವ್ ಹಾಗೂ ಬ್ರಹ್ಮಾವರದ ಅಜಪುರ ಯಕ್ಷಗಾನ ಮಂಡಳಿಯ ಅಧ್ಯಕ್ಷ ಪದ್ಮನಾಭ ಗಾಣಿಗ ಹಾಗೂ ಸದಸ್ಯರು ತೀರ್ವ ಸಂತಾಪ ಸೂಚಿಸಿದ್ದಾರೆ.

Vishwa News 24

Recent Posts

ಕಾಪು: ತಮಿಳುನಾಡು ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಬಿದ್ದು ಮೀನುಗಾರ ನಾಪತ್ತೆ – vishwanews24

ಕಾಪು: ತಮಿಳುನಾಡು ಮೂಲದ ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಮೀನುಗಾರ ನಾಪತ್ತೆ  ಕಾಪು: ಕಾಪು ಕಡಲ ಕಿನಾರೆಯಲ್ಲಿ…

3 minutes ago

ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು – vishwanews24

ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು ಯಲ್ಲಾಪುರ : ಉತ್ತರ ಕನ್ನಡ…

3 hours ago

ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು – vishwanews24

ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು ಕುಂದಾಪುರ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ…

3 hours ago

ಅಕ್ಷಯ್‌ ಕಲ್ಲೇಗ ಕೊಲೆ ಪ್ರಕರಣ : 3 ಮತ್ತು 4ನೇ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ಮಂಜೂರು – vishwanews24

ಪುತ್ತೂರು: ಅಕ್ಷಯ್‌ ಕಲ್ಲೇಗ ಕೊಲೆ ಪ್ರಕರಣ: 3ನೇ ಮತ್ತು 4ನೇ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ಮಂಜೂರು ಪುತ್ತೂರು: ಕಲ್ಲೇಗ ಟೈಗರ್ಸ್…

3 hours ago

ಎಲ್​ಪಿಜಿ ಸಿಲಿಂಡರ್ ಬುಕಿಂಗ್ ನಿಯಮಗಳಲ್ಲಿ ಯಾವುದೇ ಬದಲಾವಣೆ ಇಲ್ಲ : ಕೇಂದ್ರ ಸ್ಪಷ್ಟನೆ – vishwanews24

ಎಲ್​ಪಿಜಿ ಸಿಲಿಂಡರ್ ಬುಕಿಂಗ್ ನಿಯಮಗಳಲ್ಲಿ ಯಾವುದೇ ಬದಲಾವಣೆ ಇಲ್ಲ : ಕೇಂದ್ರ ಸ್ಪಷ್ಟನೆ ನವದೆಹಲಿ: ಎಲ್​ಪಿಜಿ(LPG) ಸಿಲಿಂಡರ್ ಬುಕಿಂಗ್ ನಿಯಮಗಳಲ್ಲಿ…

3 hours ago

ಸುಳ್ಯ : ಕಂಬಕ್ಕೆ ಬೈಕ್ ಡಿಕ್ಕಿ; ಮೆಸ್ಕಾಂ ಸಿಬ್ಬಂದಿ ಮೃತ್ಯು – vishwanews24

ಸುಳ್ಯ : ಕಂಬಕ್ಕೆ ಬೈಕ್ ಡಿಕ್ಕಿ; ಮೆಸ್ಕಾಂ ಸಿಬ್ಬಂದಿ ಮೃತ್ಯು ಸುಳ್ಯ,: ತಾಲೂಕಿನ ನಿಂತಿಕಲ್ಲು ಬಳಿ ವಿದ್ಯುತ್ ಕಂಬಕ್ಕೆ ಬೈಕ್…

4 hours ago