Featured

ಉಡುಪಿ : ಯಕ್ಷಗಾನ ಕಲಾರಂಗದ 21ನೆಯ ಮನೆ ಹಸ್ತಾಂತರ -Vishwanews24

ಉಡುಪಿ : ಯಕ್ಷಗಾನ ಕಲಾರಂಗದ 21ನೆಯ ಮನೆ ಹಸ್ತಾಂತರ -Vishwanews24

ಉಡುಪಿ : ಮಂದಾರ್ತಿ ಮೇಳದ ಕಲಾವಿದ ಚಂದ್ರ ನಾಯ್ಕ ಹಾಗೂ ಮಕ್ಕಳಾದ ಯಕ್ಷಗಾನ ಕಲಾರಂಗದ ಉದ್ಯೋಗಿ ಸಂಗೀತಾ ಮತ್ತು ದ್ವಿತಿಯ ಪಿ.ಯು.ಸಿ ಯಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾಪೋಷಕ್ ವಿದ್ಯಾರ್ಥಿನಿ ಗೀತಾ ಇವರ ಕುಟುಂಬಕ್ಕೆ, ಮೈಸೂರು ಮರ್ಕಂಟೈಲ್ ಕಂಪನಿ ಲಿ. ನ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ಎಚ್. ಎಸ್. ಶೆಟ್ಟಿ ಬೆಂಗಳೂರು ಇವರ ನೆರವಿನಿಂದ ಮಂದಾರ್ತಿಯಲ್ಲಿ ನಿರ್ಮಿಸಲಾದ ನೂತನ ಮನೆ ‘ರಾಜೀವ ಸದನ’ದ ಹಸ್ತಾಂತರಕಾರ್ಯಕ್ರಮ ದಿನಾಂಕ ೩೦-೦೯-೨೦೨೧ ರಂದು ಸoಪನ್ನಗೊoಡಿತು.

ಜ್ಯೋತಿ ಬೆಳಗಿಸಿ, ಮನೆಯನ್ನು ಉದ್ಘಾಟಿಸಿ ಮಾತನಾಡಿದ ಎಚ್. ಎಸ್. ಶೆಟ್ಟರು, ಗ್ರಾಮೀಣ ಪ್ರದೇಶದ ವಿದ್ಯಾವಂತ ಯುವಕ ಯುವತಿಯರು ಹೊಸ ಹೊಸ ಉದ್ಯೋಗವಕಾಶಗಳ ಬಗ್ಗೆ ಯೋಚಿಸಿ ಧೈರ್ಯದಿಂದ ಕಾರ್ಯ ಪ್ರವೃತ್ತರಾಗಬೇಕು.

ಈ ಹಿನ್ನಲೆಯಲ್ಲಿ ಯಕ್ಷಗಾನ ಕಲಾರಂಗದ ವಿದ್ಯಾಪೋಷಕ್‌ನೊಂದಿಗೆ ನಾನು ಸದಾ ಕೈಜೋಡಿಸುತ್ತೇನೆ, ಇಂತಹ ಸಮಾಜಮುಖೀ ಚಿಂತನೆಯೊoದಿಗೆ ಕಾರ್ಯ ನಿರ್ವಹಿಸುವ ತಂಡವನ್ನು ನಾನು ಈ ತನಕ ಬೇರೆಲ್ಲೂ ಕಂಡದ್ದಿಲ್ಲ. ಇನ್ನೂ ನಾಲ್ಕು ಮನೆಗಳ ಪ್ರಾಯೋಜಕತ್ವಕ್ಕೆ ತಾನು ಬದ್ಧ ಎಂದು ನುಡಿದರು.

ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ. ಗಂಗಾಧರ ರಾವ್ ಸ್ವಾಗತಿಸಿದರು. ಎಚ್. ಧನಂಜಯ ಶೆಟ್ಟಿ, ಕೆ. ಮಹೇಶ ಉಡುಪ, ಯು. ವಿಶ್ವನಾಥ ಶೆಣೈ, ರಾಜಗೋಪಾಲ ಆಚಾರ್ಯ,ಎಚ್. ನಾಗರಾಜ ಶೆಟ್ಟಿ, ಶೇಡಿಕೋಡ್ಲು ವಿಠಲ ಶೆಟ್ಟಿ ಅಭ್ಯಾಗತರಾಗಿ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಉಪಾಧ್ಯಕ್ಷರಾದ ಎಸ್. ವಿ. ಭಟ್, ಪಿ. ಕಿಶನ್ ಹೆಗ್ಡೆ, ಕೋಶಾಧಿಕಾರಿಗಳಾದ ಮನೋಹರ ಕೆ., ಪ್ರೊ. ಕೆ. ಸದಾಶಿವ ರಾವ್ ಜತೆ ಕಾರ್ಯದರ್ಶಿ ಎಚ್. ಎನ್. ಶೃಂಗೇಶ್ವರ ಹಾಗೂ ಸಂಸ್ಥೆಯ ಸದಸ್ಯರು, ಯಕ್ಷಗಾನ ಕಲಾವಿದರು ಪಾಲುಗೊಂಡರು.

ಕಾರ್ಯದರ್ಶಿ ಮುರಲಿ ಕಡೆಕಾರ್ ನಿರೂಪಿಸಿದರು. ಜತೆ ಕಾರ್ಯದರ್ಶಿ ಪ್ರೊ. ನಾರಾಯಣ ಎಂ.ಹೆಗಡೆ ವಂದಿಸಿದರು.

ಮನೆ ಉದ್ಘಾಟನೆಯ ಪೂರ್ವದಲ್ಲಿ ಮಂದಾರ್ತಿ ದೇವಳಕ್ಕೆ ಭೇಟಿ ನೀಡಿದ ಸಂಸ್ಥೆಯ ತಂಡಕ್ಕೆ ಆಡಳಿತ ಮುಕ್ತೇಸರರಾದ ಎಚ್. ಧನಂಜಯ ಶೆಟ್ಟರು ಯಕ್ಷಗಾನ ಪ್ರಿಯೆ ದುರ್ಗಾ ಮಾತೆಯ ಪ್ರಸಾದವನ್ನು ಕೊಡಿಸಿದರು.

Vishwa News 24

Recent Posts

ಸುಳ್ಯ: ಮನೆಯ ಅಂಗಳಕ್ಕೆ ಮುರಿದು ಬಿದ್ದ ತೆಂಗಿನ ಮರ; ಕೂದಲೆಳೆ ಅಂತರದಲ್ಲಿ ಪಾರಾದ ವ್ಯಕ್ತಿ – vishwanews24

ಸುಳ್ಯ: ಮನೆಯ ಅಂಗಳಕ್ಕೆ ಮುರಿದು ಬಿದ್ದ ತೆಂಗಿನ ಮರ; ಕೂದಲೆಳೆ ಅಂತರದಲ್ಲಿ ಪಾರಾದ ವ್ಯಕ್ತಿ ಸುಳ್ಯ: ಮನೆಯ ಮುಂಭಾಗದಲ್ಲಿದ್ದ ತೆಂಗಿನ…

5 minutes ago

ಮಂಗಳೂರು: ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ – vishwanews24

ಮಂಗಳೂರು: ಸೋಮೇಶ್ವರದಲ್ಲಿ 16 ವರ್ಷದ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ ಮಂಗಳೂರು : 16 ವರ್ಷದ ಪ್ರಥಮ ವರ್ಷದ ಪಿಯುಸಿ (ಪಿಯುಸಿ)…

17 minutes ago

ಇನ್ಮುಂದೆ ವೈದ್ಯರ ಶಿಫಾರಸು ಇಲ್ಲದೇ ಮೆಡಿಕಲ್‌ನಲ್ಲಿ ಯಾವುದೇ ಸಿರಪ್‌ಗಳನ್ನು ಖರೀದಿಸುವಂತಿಲ್ಲ : ಕೇಂದ್ರ ಆದೇಶ – vishwanews24

ಮೆಡಿಕಲ್‌ನಲ್ಲಿ ಇನ್ಮುಂದೆ ಸಾರ್ವಜನಿಕರು ನೇರವಾಗಿ ಸಿರಪ್ ಖರೀದಿ ಮಾಡುವಂತಿಲ್ಲ: ಕೇಂದ್ರ ಆದೇಶ ನವದೆಹಲಿ: ಮೆಡಿಕಲ್‌ ಶಾಪ್‌ಗಳಲ್ಲಿ ಇನ್ಮುಂದೆ ಸಾರ್ವಜನಿಕರು ನೇರವಾಗಿ…

27 minutes ago

ಪಟ್ಲ ರೂರಲ್ ಎಜುಕೇಶನ್ ಸೊಸೈಟಿಯ ಸುವರ್ಣ ಮಹೋತ್ಸವಕ್ಕೆ ಚಾಲನೆ; ವನ ಮಹೋತ್ಸವ ಕಾರ್ಯಕ್ರಮ – vishwanews24

ಪಟ್ಲ ರೂರಲ್ ಎಜುಕೇಶನ್ ಸೊಸೈಟಿಯ ಸುವರ್ಣ ಮಹೋತ್ಸವಕ್ಕೆ ಚಾಲನೆ; ವನ ಮಹೋತ್ಸವ ಕಾರ್ಯಕ್ರಮ ಪಟ್ಲ: ರೂರಲ್ ಎಜುಕೇಶನ್ ಸೊಸೈಟಿ (ರಿ.),…

38 minutes ago

ರೀಲ್ಸ್ ಮಾಡಲು ಹೋಗಿ ಸಮುದ್ರಪಾಲಾದ  ಐಟಿ ಉದ್ಯೋಗಿ – vishwanews24

ರೀಲ್ಸ್ ಮಾಡಲು ಹೋಗಿ ಸಮುದ್ರಪಾಲಾದ  ಐಟಿ ಉದ್ಯೋಗಿ ಕಾರವಾರ: ರೀಲ್ಸ್ ಮಾಡಲು ಹೋಗಿ ಐಟಿ ಉದ್ಯೋಗಿಯೊಬ್ಬ  ಸಮುದ್ರಪಾಲಾದ ಘಟನೆ ಉತ್ತರ…

20 hours ago

ತಮಿಳುನಾಡು ಸಿಎಂ ವಿಜಯ್ ವಿಚ್ಛೇದನ ಪ್ರಕರಣ: ಆಗಸ್ಟ್ 7ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್ – vishwanews24

ತಮಿಳುನಾಡು ಸಿಎಂ ವಿಜಯ್ ವಿಚ್ಛೇದನ ಪ್ರಕರಣ: ಆಗಸ್ಟ್ 7ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್ ಚೆನ್ನೈ :ತಮಿಳುನಾಡು ಮುಖ್ಯಮಂತ್ರಿ, ನಟ ದಳಪತಿ…

20 hours ago