ಉಡುಪಿ: ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ದಿನದಿಂದಲೂ ಹಿಂದೂಗಳ ಧಾರ್ಮಿಕ ಭಾವನೆ, ಸಂಸ್ಕೃತಿ ಆಚರಣೆಗಳ ಬಗ್ಗೆ ನಿರಂತರ ಧಕ್ಕೆ ತರುವ ಕಾರ್ಯಕ್ಕೆ ಮುಂದಾಗಿದ್ದು, ಇದರ ಮುಂದುವರೆದ ಭಾಗವಾಗಿ ಮೊನ್ನೆ ಕಾರ್ಕಳದಲ್ಲಿ ಯಕ್ಷಗಾನ ಪ್ರದರ್ಶನಕ್ಕೆ ತಡೆ ಒಡ್ಡುವ ಮೂಲಕ ಕರಾವಳಿ ಜಿಲ್ಲೆಯ ಹಿಂದೂಗಳ ಭಾವನೆಗೆ ಧಕ್ಕೆ ತಂದಿದೆ ಎಂದು ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ತುಳುನಾಡಿನ ಗಂಡು ಕಲೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಯಕ್ಷಗಾನ ಅನಾದಿ ಕಾಲದಿಂದಲೂ ಶ್ರದ್ದಾ ಭಕ್ತಿಯಿಂದ ಬ್ರಿಟಿಷರ ಆಳ್ವಿಕೆಯ ಸಮಯದಲ್ಲಿಯೂ ನಡೆಯುತ್ತಿದ್ದ ಯಕ್ಷಗಾನ ಕಲೆಗೆ ಹಲವು ಕಾನೂನುಗಳ ನೆಪವೊಡ್ಡಿ ತಡೆ ಮಾಡಿ ಮತೀಯ ಶಕ್ತಿಗಳ ಓಲೈಕೆಗೆ ರಾಜ್ಯ ಸರ್ಕಾರ ಮುಂದಾಗಿದೆ.
ಯಕ್ಷಗಾನ, ನಾಗಮಂಡಲ, ದೈವಾರಾಧನೆಯ ಭಾಗವಾಗಿ ಸಾಂಪ್ರದಾಯಿಕ ಕೋಳಿ ಅಂಕಗಳು ತುಳುನಾಡಿನ ಸಂಸ್ಕೃತಿಯ ಭಾಗವಾಗಿದ್ದರೂ ಪೊಲೀಸ್ ಇಲಾಖೆ ರಾಜ್ಯ ಸರ್ಕಾರದ ಕೈಗೊಂಬೆಯಾಗಿ ಅನುಮತಿ ನೀಡದೇ ಪರೋಕ್ಷವಾಗಿ ಹತ್ತಿಕ್ಕಲು ಸಿದ್ದರಾಮಯ್ಯ ಸರ್ಕಾರ ಯತ್ನಿಸುತ್ತಿದೆ.
ರಾಜ್ಯ ಸರ್ಕಾರ ಒಂದು ಕಡೆ ಯಕ್ಷಗಾನ ಆಕಾಡೆಮಿ ಸ್ಥಾಪಿಸಿ ಯಕ್ಷಗಾನ ಉಳಿವಿಗೆ ಕೊಡುಗೆ ನೀಡುವಂತೆ ಬಿಂಬಿಸಿ, ಇನ್ನೊಂದು ಕಡೆ ಯಕ್ಷಗಾನ ಪ್ರದರ್ಶನಕ್ಕೆ ತಡೆ ಒಡ್ಡುವ ಮೂಲಕ ಸರ್ಕಾರದ ದ್ವಂದ್ವ ನೀತಿಯನ್ನು ಜನತೆಯ ಮುಂದೆ ಪ್ರದರ್ಶಿಸಿದೆ.
ಹಲವಾರು ಭಕ್ತರು ತಮ್ಮ ಹರಕೆ ಸೇವೆಗಾಗಿ ಹಲವು ವರ್ಷಗಳ ಕಾಲ ಕಾದು ಆಯೋಜಿಸಿರುವ ವಿವಿಧ ಮೇಳಗಳ ಯಕ್ಷಗಾನ ಪ್ರದರ್ಶನಕ್ಕೆ ಸರ್ಕಾರ ತೊಂದರೆ ನೀಡುತ್ತಿರುವುದು ಅಕ್ಷಮ್ಯವಾಗಿದ್ದು ಸರ್ಕಾರ ಕೂಡಲೇ ಕರಾವಳಿ ಜಿಲ್ಲೆಯಲ್ಲಿ ಯಕ್ಷಗಾನ ಪ್ರದರ್ಶನಕ್ಕೆ ಮುಕ್ತ ಅವಕಾಶ ನೀಡುವಂತೆ ರಾಜ್ಯ ಸರ್ಕಾರವನ್ನು ಆಗ್ರಹಿಸುವುದಾಗಿ ಯಶ್ ಪಾಲ್ ಸುವರ್ಣ ತಿಳಿಸಿದ್ದಾರೆ.
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…
ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…
ಟೈಮಿಂಗ್ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್ಪ್ರೆಸ್ ಬಸ್ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…
ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…
ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…