ಉಡುಪಿ: ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ದಿನದಿಂದಲೂ ಹಿಂದೂಗಳ ಧಾರ್ಮಿಕ ಭಾವನೆ, ಸಂಸ್ಕೃತಿ ಆಚರಣೆಗಳ ಬಗ್ಗೆ ನಿರಂತರ ಧಕ್ಕೆ ತರುವ ಕಾರ್ಯಕ್ಕೆ ಮುಂದಾಗಿದ್ದು, ಇದರ ಮುಂದುವರೆದ ಭಾಗವಾಗಿ ಮೊನ್ನೆ ಕಾರ್ಕಳದಲ್ಲಿ ಯಕ್ಷಗಾನ ಪ್ರದರ್ಶನಕ್ಕೆ ತಡೆ ಒಡ್ಡುವ ಮೂಲಕ ಕರಾವಳಿ ಜಿಲ್ಲೆಯ ಹಿಂದೂಗಳ ಭಾವನೆಗೆ ಧಕ್ಕೆ ತಂದಿದೆ ಎಂದು ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ತುಳುನಾಡಿನ ಗಂಡು ಕಲೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಯಕ್ಷಗಾನ ಅನಾದಿ ಕಾಲದಿಂದಲೂ ಶ್ರದ್ದಾ ಭಕ್ತಿಯಿಂದ ಬ್ರಿಟಿಷರ ಆಳ್ವಿಕೆಯ ಸಮಯದಲ್ಲಿಯೂ ನಡೆಯುತ್ತಿದ್ದ ಯಕ್ಷಗಾನ ಕಲೆಗೆ ಹಲವು ಕಾನೂನುಗಳ ನೆಪವೊಡ್ಡಿ ತಡೆ ಮಾಡಿ ಮತೀಯ ಶಕ್ತಿಗಳ ಓಲೈಕೆಗೆ ರಾಜ್ಯ ಸರ್ಕಾರ ಮುಂದಾಗಿದೆ.
ಯಕ್ಷಗಾನ, ನಾಗಮಂಡಲ, ದೈವಾರಾಧನೆಯ ಭಾಗವಾಗಿ ಸಾಂಪ್ರದಾಯಿಕ ಕೋಳಿ ಅಂಕಗಳು ತುಳುನಾಡಿನ ಸಂಸ್ಕೃತಿಯ ಭಾಗವಾಗಿದ್ದರೂ ಪೊಲೀಸ್ ಇಲಾಖೆ ರಾಜ್ಯ ಸರ್ಕಾರದ ಕೈಗೊಂಬೆಯಾಗಿ ಅನುಮತಿ ನೀಡದೇ ಪರೋಕ್ಷವಾಗಿ ಹತ್ತಿಕ್ಕಲು ಸಿದ್ದರಾಮಯ್ಯ ಸರ್ಕಾರ ಯತ್ನಿಸುತ್ತಿದೆ.
ರಾಜ್ಯ ಸರ್ಕಾರ ಒಂದು ಕಡೆ ಯಕ್ಷಗಾನ ಆಕಾಡೆಮಿ ಸ್ಥಾಪಿಸಿ ಯಕ್ಷಗಾನ ಉಳಿವಿಗೆ ಕೊಡುಗೆ ನೀಡುವಂತೆ ಬಿಂಬಿಸಿ, ಇನ್ನೊಂದು ಕಡೆ ಯಕ್ಷಗಾನ ಪ್ರದರ್ಶನಕ್ಕೆ ತಡೆ ಒಡ್ಡುವ ಮೂಲಕ ಸರ್ಕಾರದ ದ್ವಂದ್ವ ನೀತಿಯನ್ನು ಜನತೆಯ ಮುಂದೆ ಪ್ರದರ್ಶಿಸಿದೆ.
ಹಲವಾರು ಭಕ್ತರು ತಮ್ಮ ಹರಕೆ ಸೇವೆಗಾಗಿ ಹಲವು ವರ್ಷಗಳ ಕಾಲ ಕಾದು ಆಯೋಜಿಸಿರುವ ವಿವಿಧ ಮೇಳಗಳ ಯಕ್ಷಗಾನ ಪ್ರದರ್ಶನಕ್ಕೆ ಸರ್ಕಾರ ತೊಂದರೆ ನೀಡುತ್ತಿರುವುದು ಅಕ್ಷಮ್ಯವಾಗಿದ್ದು ಸರ್ಕಾರ ಕೂಡಲೇ ಕರಾವಳಿ ಜಿಲ್ಲೆಯಲ್ಲಿ ಯಕ್ಷಗಾನ ಪ್ರದರ್ಶನಕ್ಕೆ ಮುಕ್ತ ಅವಕಾಶ ನೀಡುವಂತೆ ರಾಜ್ಯ ಸರ್ಕಾರವನ್ನು ಆಗ್ರಹಿಸುವುದಾಗಿ ಯಶ್ ಪಾಲ್ ಸುವರ್ಣ ತಿಳಿಸಿದ್ದಾರೆ.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…