Featured

ಉಡುಪಿ: ಯಕ್ಷಗಾನ ರಂಗಕ್ಕೂ ರಾಜಕೀಯ ತಂದಿರುವುದು ಬೇಸರದ ಸಂಗತಿ : ರಮೇಶ್ ಕಾಂಚನ್ – Vishwanews24

ಉಡುಪಿ: ಯಕ್ಷಗಾನ ರಂಗಕ್ಕೂ ರಾಜಕೀಯ ತಂದಿರುವುದು ಬೇಸರದ ಸಂಗತಿ : ರಮೇಶ್ ಕಾಂಚನ್

ಉಡುಪಿ: ರಾಜ್ಯ ಬಿಜೆಪಿ ಸರಕಾರವು 40% ಕಮಿಷನ್ ತಿಂದು ಅದು ಸಾಕಾಗದೆ ಈಗ ಇದ್ದ ಬಿದ್ದ ಎಲ್ಲಾ ಸಂಘ ಸಂಸ್ಥೆಗಳಿಗೂ ರಾಜಕೀಯ ಅಂಟಿಸುವ ಪರಿಪಾಠ ಬೆಳೆಸುತ್ತಿರುವುದು ಖಂಡನೀಯ. ಉಡುಪಿ ಜಿಲ್ಲೆಯಲ್ಲಿ ರಾಜ್ಯ ಮಟ್ಟದ ಸಮಗ್ರ ಯಕ್ಷಗಾನ ಸಮ್ಮೇಳನ ನಡೆಸುವ ಮೂಲಕ ಯಕ್ಷಗಾನ ರಂಗಕ್ಕೂ ರಾಜಕೀಯ ತಂದಿರುವುದು ಬೇಸರದ ಸಂಗತಿ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ಹೇಳಿದ್ದಾರೆ.

✴️ ಸಮಗ್ರ ಯಕ್ಷಗಾನ ಹೆಸರಲ್ಲಿ ಯಕ್ಷಗಾನದ ಸಮಗ್ರತೆಯನ್ನು ಮರೆತು ಸೀಮಿತಗೊಳಿಸಿರುವುದು ನ್ಯಾಯವೇ

✴️ನಮ್ಮ ರಾಜ್ಯದ ಸಂಸ್ಕೃತಿಕ ಜಾನಪದ ಕಲೆಯಾದ ಯಕ್ಷಗಾನ ಸಮ್ಮೇಳನದಲ್ಲಿ 90%ಕ್ಕೂ ಅಧಿಕ ರಾಜಕೀಯ ನಾಯಕರೇ ತುಂಬಿ ಉದ್ಘಾಟನೆ ಬಿಜೆಪಿ ಪಕ್ಷದ ಕಾರ್ಯಕ್ರಮದ ಹಾಗೆ ಆಗಿರುವುದು ಯಕ್ಷಗಾನ ಪ್ರೇಮಿಗಳಾದ ನಮಗೆ ಮುಜುಗರ.

✴️ಯಕ್ಷಗಾನ ಅನ್ನುವ ಪದ ಕೇಳಿದಾಗ ಚಿಟ್ಟಾಣಿ ಅನ್ನುವ ಮೇರು ನಟ ಸಾರ್ವಭೌಮ ನೆನಪಾಗದೇ ಇರಲಾರ. ಕನ್ನಡದ ಮೇರು ನಟ ರಾಜ್ಕುಮಾರ್ ಅವರೇ ಸ್ವತಃ ಬೆಳ್ಳಿ ಕಿರೀಟ ತೊಡಿಸಿ ಚಿಟ್ಟಾಣಿ ಅವರ ಕಲೆಗೆ ಬೆರಗಾಗಿದ್ದು ಅಂತಹ ಚಿಟ್ಟಾಣಿ ಅವರಿಗೆ ದೇಶದ ಉಚ್ಚ ಪದ್ಮ ಪ್ರಶಸ್ತಿ ಯಕ್ಷಗಾನಕ್ಕೆ ಮೊದಲಾಗಿ ಒಲಿದು ಬಂದಿದ್ದು ಯಕ್ಷಗಾನ ಅಕಾಡೆಮಿಗೆ ನೆನಪಿಲ್ಲವೇ ?

✴️ಎಲ್ಲಿಯ ಪದ್ಮಶ್ರೀ ಚಿಟ್ಟಾಣಿ ಎಲ್ಲಿಯ ರೋಹಿತ್ ಚಕ್ರತೀರ್ಥ ಹೋಲಿಕೆ ಸಾಧ್ಯವೇ. ಹಾಗಿರುವಾಗ ಯಕ್ಷಗಾನ ರಂಗಕ್ಕೆ ಸಂಬಂಧ ಪಡದ ವಿವಾದಾತ್ಮಕ ವ್ಯಕ್ತಿಯ ಬಾಯಲ್ಲಿ ಯಕ್ಷಗಾನದ ದಿಕ್ಸುಚಿ ಭಾಷಣ. ಇಂತ ಹೊಲಸು ರಾಜಕೀಯವನ್ನು ಪರಿಪೂರ್ಣ ಕಲೆಯಾದ ಯಕ್ಷಗಾನದಲ್ಲೂ ಬೆರೆಸುತ್ತಿರುವ ಬಿಜೆಪಿಗೆ ಯಾವ ನೈತಿಕತೆ ಇದೆ.

✴️ಯಕ್ಷಗಾನ ಸಮ್ಮೇಳನ ನೆಪದಲ್ಲಿ ಬಿಜೆಪಿ ಜನರನ್ನು ಸೆಳೆಯುವ ಮತ್ತು ಅಧಿಕಾರ ಬಳಸಿ ಕಲೆಯಲ್ಲೂ ಹುಳಿ ಹಿಂಡುವ ಶಕುನಿ ಬುದ್ದಿಗೆ ಜನ ಬುದ್ದಿ ಕಲಿಸದೇ ಇರಲಾರರು.

✴️ಬ್ರಹ್ಮಶ್ರೀ ನಾರಾಯಣ ಗುರುಗಳ ವಿಚಾರವನ್ನು ಪಠ್ಯ ಪುಸ್ತಕದಿಂದ ಕೈಬಿಟ್ಟ, ಡಾ. ಬಿ ಆರ್ ಅಂಬೇಡ್ಕರ್ ಅವರ ಹೆಸರನ್ನು ತಿರುಚಿ ಇಂತಹ ಹಲವು ವಿಷಯಗಳಲ್ಲಿ ವಿವಾದವನ್ನು ಸೃಷ್ಟಿಸಿರುವ ರೋಹಿತ್ ಚಕ್ರತೀರ್ಥ ಅವರನ್ನು ಯಕ್ಷಗಾನ ಸಮಾವೇಶದಲ್ಲಿ ದಿಕ್ಸೂಚಿ ಭಾಷಣಗಾರರಾಗಿ ಕರೆಸಿರುವ ಕಾರಣವಾದರೇನು ?

✴️ಉಡುಪಿ ವಿಧಾನಸಭಾ ಕ್ಷೇತ್ರದ ಬಿಜೆಪಿಯ ಆಕಾಂಕ್ಷಿ ಅಭ್ಯರ್ಥಿಯ ಪಟ್ಟಿಯಲ್ಲಿರುವ ರೋಹಿತ್ ಚಕ್ರತೀರ್ಥ ಅವರನ್ನು ಇಂತಹ ಕಾರ್ಯಕ್ರಮಕ್ಕೆ ಕರೆಸಿ ಸರ್ಕಾರದ ಹಣದಲ್ಲಿ ಪ್ರಚಾರ ನೀಡುವ ಹುನ್ನಾರವೇ ?

ಯಕ್ಷಗಾನ ಸಾಧಕರಿಗೆ ಸುಣ್ಣ ಬೆಣ್ಣೆಯ ತಂತ್ರ ಅನುಸರಿಸಿ ಬಿಜೆಪಿ ತನ್ನ ರಾಜಕೀಯ ಬೇಳೆ ಬೇಯಿಸಿಕೊಳ್ಳುವ ಕೆಟ್ಟ ರಣತಂತ್ರಕ್ಕೆ ರಾಜ್ಯದ ಮತ್ತು ಉಡುಪಿ ಜಿಲ್ಲೆಯ ಪ್ರಜ್ಞಾವಂತ ನಾಗರಿಕರು ಮುಂಬರುವ ಚುನಾವಣೆಯಲ್ಲಿ ತಕ್ಕ ಶಾಸ್ತಿ ಮಾಡುತ್ತಾರೆ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ರಮೇಶ್ ಕಾಂಚನ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ -vishwanews24

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…

5 hours ago

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ -vishwanews24

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…

5 hours ago

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ -vishwanews24

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…

5 hours ago

ಕಾರ್ಕಳ : ಯಕ್ಷರಂಗಾಯಣದ ಹೆಸರನ್ನು ಬದಲಾಯಿಸಿರುವುದು ಅತ್ಯಂತ ಬೇಜವಾಬ್ದಾರಿ ಹಾಗೂ ಏಕಪಕ್ಷೀಯ ನಿರ್ಧಾರ : ಸುನಿಲ್‌ ಕುಮಾರ್‌ ಆಕ್ರೋಶ -vishwanews24

ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್‌ ಕುಮಾರ್‌ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…

9 hours ago

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ -vishwanews24

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…

9 hours ago

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ -vishwanews24

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…

9 hours ago