Featured

ಉಡುಪಿ: ಯಕ್ಷಗಾನ ರಂಗಕ್ಕೂ ರಾಜಕೀಯ ತಂದಿರುವುದು ಬೇಸರದ ಸಂಗತಿ : ರಮೇಶ್ ಕಾಂಚನ್ – Vishwanews24

ಉಡುಪಿ: ಯಕ್ಷಗಾನ ರಂಗಕ್ಕೂ ರಾಜಕೀಯ ತಂದಿರುವುದು ಬೇಸರದ ಸಂಗತಿ : ರಮೇಶ್ ಕಾಂಚನ್

ಉಡುಪಿ: ರಾಜ್ಯ ಬಿಜೆಪಿ ಸರಕಾರವು 40% ಕಮಿಷನ್ ತಿಂದು ಅದು ಸಾಕಾಗದೆ ಈಗ ಇದ್ದ ಬಿದ್ದ ಎಲ್ಲಾ ಸಂಘ ಸಂಸ್ಥೆಗಳಿಗೂ ರಾಜಕೀಯ ಅಂಟಿಸುವ ಪರಿಪಾಠ ಬೆಳೆಸುತ್ತಿರುವುದು ಖಂಡನೀಯ. ಉಡುಪಿ ಜಿಲ್ಲೆಯಲ್ಲಿ ರಾಜ್ಯ ಮಟ್ಟದ ಸಮಗ್ರ ಯಕ್ಷಗಾನ ಸಮ್ಮೇಳನ ನಡೆಸುವ ಮೂಲಕ ಯಕ್ಷಗಾನ ರಂಗಕ್ಕೂ ರಾಜಕೀಯ ತಂದಿರುವುದು ಬೇಸರದ ಸಂಗತಿ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ಹೇಳಿದ್ದಾರೆ.

✴️ ಸಮಗ್ರ ಯಕ್ಷಗಾನ ಹೆಸರಲ್ಲಿ ಯಕ್ಷಗಾನದ ಸಮಗ್ರತೆಯನ್ನು ಮರೆತು ಸೀಮಿತಗೊಳಿಸಿರುವುದು ನ್ಯಾಯವೇ

✴️ನಮ್ಮ ರಾಜ್ಯದ ಸಂಸ್ಕೃತಿಕ ಜಾನಪದ ಕಲೆಯಾದ ಯಕ್ಷಗಾನ ಸಮ್ಮೇಳನದಲ್ಲಿ 90%ಕ್ಕೂ ಅಧಿಕ ರಾಜಕೀಯ ನಾಯಕರೇ ತುಂಬಿ ಉದ್ಘಾಟನೆ ಬಿಜೆಪಿ ಪಕ್ಷದ ಕಾರ್ಯಕ್ರಮದ ಹಾಗೆ ಆಗಿರುವುದು ಯಕ್ಷಗಾನ ಪ್ರೇಮಿಗಳಾದ ನಮಗೆ ಮುಜುಗರ.

✴️ಯಕ್ಷಗಾನ ಅನ್ನುವ ಪದ ಕೇಳಿದಾಗ ಚಿಟ್ಟಾಣಿ ಅನ್ನುವ ಮೇರು ನಟ ಸಾರ್ವಭೌಮ ನೆನಪಾಗದೇ ಇರಲಾರ. ಕನ್ನಡದ ಮೇರು ನಟ ರಾಜ್ಕುಮಾರ್ ಅವರೇ ಸ್ವತಃ ಬೆಳ್ಳಿ ಕಿರೀಟ ತೊಡಿಸಿ ಚಿಟ್ಟಾಣಿ ಅವರ ಕಲೆಗೆ ಬೆರಗಾಗಿದ್ದು ಅಂತಹ ಚಿಟ್ಟಾಣಿ ಅವರಿಗೆ ದೇಶದ ಉಚ್ಚ ಪದ್ಮ ಪ್ರಶಸ್ತಿ ಯಕ್ಷಗಾನಕ್ಕೆ ಮೊದಲಾಗಿ ಒಲಿದು ಬಂದಿದ್ದು ಯಕ್ಷಗಾನ ಅಕಾಡೆಮಿಗೆ ನೆನಪಿಲ್ಲವೇ ?

✴️ಎಲ್ಲಿಯ ಪದ್ಮಶ್ರೀ ಚಿಟ್ಟಾಣಿ ಎಲ್ಲಿಯ ರೋಹಿತ್ ಚಕ್ರತೀರ್ಥ ಹೋಲಿಕೆ ಸಾಧ್ಯವೇ. ಹಾಗಿರುವಾಗ ಯಕ್ಷಗಾನ ರಂಗಕ್ಕೆ ಸಂಬಂಧ ಪಡದ ವಿವಾದಾತ್ಮಕ ವ್ಯಕ್ತಿಯ ಬಾಯಲ್ಲಿ ಯಕ್ಷಗಾನದ ದಿಕ್ಸುಚಿ ಭಾಷಣ. ಇಂತ ಹೊಲಸು ರಾಜಕೀಯವನ್ನು ಪರಿಪೂರ್ಣ ಕಲೆಯಾದ ಯಕ್ಷಗಾನದಲ್ಲೂ ಬೆರೆಸುತ್ತಿರುವ ಬಿಜೆಪಿಗೆ ಯಾವ ನೈತಿಕತೆ ಇದೆ.

✴️ಯಕ್ಷಗಾನ ಸಮ್ಮೇಳನ ನೆಪದಲ್ಲಿ ಬಿಜೆಪಿ ಜನರನ್ನು ಸೆಳೆಯುವ ಮತ್ತು ಅಧಿಕಾರ ಬಳಸಿ ಕಲೆಯಲ್ಲೂ ಹುಳಿ ಹಿಂಡುವ ಶಕುನಿ ಬುದ್ದಿಗೆ ಜನ ಬುದ್ದಿ ಕಲಿಸದೇ ಇರಲಾರರು.

✴️ಬ್ರಹ್ಮಶ್ರೀ ನಾರಾಯಣ ಗುರುಗಳ ವಿಚಾರವನ್ನು ಪಠ್ಯ ಪುಸ್ತಕದಿಂದ ಕೈಬಿಟ್ಟ, ಡಾ. ಬಿ ಆರ್ ಅಂಬೇಡ್ಕರ್ ಅವರ ಹೆಸರನ್ನು ತಿರುಚಿ ಇಂತಹ ಹಲವು ವಿಷಯಗಳಲ್ಲಿ ವಿವಾದವನ್ನು ಸೃಷ್ಟಿಸಿರುವ ರೋಹಿತ್ ಚಕ್ರತೀರ್ಥ ಅವರನ್ನು ಯಕ್ಷಗಾನ ಸಮಾವೇಶದಲ್ಲಿ ದಿಕ್ಸೂಚಿ ಭಾಷಣಗಾರರಾಗಿ ಕರೆಸಿರುವ ಕಾರಣವಾದರೇನು ?

✴️ಉಡುಪಿ ವಿಧಾನಸಭಾ ಕ್ಷೇತ್ರದ ಬಿಜೆಪಿಯ ಆಕಾಂಕ್ಷಿ ಅಭ್ಯರ್ಥಿಯ ಪಟ್ಟಿಯಲ್ಲಿರುವ ರೋಹಿತ್ ಚಕ್ರತೀರ್ಥ ಅವರನ್ನು ಇಂತಹ ಕಾರ್ಯಕ್ರಮಕ್ಕೆ ಕರೆಸಿ ಸರ್ಕಾರದ ಹಣದಲ್ಲಿ ಪ್ರಚಾರ ನೀಡುವ ಹುನ್ನಾರವೇ ?

ಯಕ್ಷಗಾನ ಸಾಧಕರಿಗೆ ಸುಣ್ಣ ಬೆಣ್ಣೆಯ ತಂತ್ರ ಅನುಸರಿಸಿ ಬಿಜೆಪಿ ತನ್ನ ರಾಜಕೀಯ ಬೇಳೆ ಬೇಯಿಸಿಕೊಳ್ಳುವ ಕೆಟ್ಟ ರಣತಂತ್ರಕ್ಕೆ ರಾಜ್ಯದ ಮತ್ತು ಉಡುಪಿ ಜಿಲ್ಲೆಯ ಪ್ರಜ್ಞಾವಂತ ನಾಗರಿಕರು ಮುಂಬರುವ ಚುನಾವಣೆಯಲ್ಲಿ ತಕ್ಕ ಶಾಸ್ತಿ ಮಾಡುತ್ತಾರೆ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ರಮೇಶ್ ಕಾಂಚನ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

14 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

14 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

14 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

15 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

15 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

16 hours ago