ಉಡುಪಿ: ಕರಾವಳಿಯ ಯಕ್ಷಗಾನವು ಇವತ್ತು ವಿಶ್ವ ಪ್ರಸಿದ್ಧ ಕಲೆಯಾಗಿ ಬೆಳೆದಿದೆ ಕಳೆದ ಆರು ಶತಮಾನಗಳಿಂದ ಈ ಕಲೆಯು ಬೆಳೆದು ಬಂದ ರೀತಿ ಅಚ್ಚರಿ ಹುಟ್ಟಿಸಿರುತ್ತದೆ ಆ ಕಲೆಯನ್ನು ಅತ್ಯದ್ಭುತವಾಗಿ ಸಂಘಟಿಸುವ ಮಹಾನೀಯರಿದ್ದಾರೆ ಯಕ್ಷಗಾನ ಪ್ರಸಂಗವನ್ನು ಬರೆದು ಪ್ರಸಿದ್ಧರಾದವರು ಇದ್ದಾರೆ.ಈ ಕಲೆಯಲ್ಲಿನ ಭಾಗವತರು ಚಂಡೆ ವಾದಕರು ತಮ್ಮದೇ ರೀತಿಯ ಶೈಲಿಯಲ್ಲಿ ನಿರ್ಮಿಸಿ ಕರ್ನಾಟಕ ಸಂಸ್ಕೃತಿಕ ಘನತೆಯನ್ನು ವಿಸ್ತರಿಸಿದ್ದಾರೆ ಇಂತಹ ಮಹಾನ್ ಕಲೆಯೊಂದರ ರಾಜ್ಯ ಸಮ್ಮೇಳ ನಡೆಯುವುದು ಅತ್ಯಂತ ಅವಶ್ಯಕವಾಗಿತ್ತು ಆದರೇ ಅಂತಹ ಸಮ್ಮೇಳನದಲ್ಲಿ ಹಿಂದುಳಿದ ವರ್ಗಗಳ ಆಶಾಕಿರಣವಾದ ಬ್ರಹ್ಮಶ್ರೀ ನಾರಾಯಣ ಗುರುಗಳ ಪಠ್ಯವನ್ನು ಕೈ ಬಿಟ್ಟು ಇಡೀ ಹಿಂದುಳಿಗ ವರ್ಗಗಳ ಸಮಾಜದ ಕೆಂಗಣ್ಣಿಗೆ ಗುರಿಯಾದ ರೋಹಿತ್ ಚಕ್ರತೀರ್ಥನನ್ನು ಕರೆತಂದು ದಿಕ್ಸೂಚಿ ಭಾಷಣ ಮಾಡಿಸುವುದು ಕರಾವಳಿಯ ಗಂಡುಕಲೆಗೆ ಮಾಡುತ್ತಿರುವ ದೊಡ್ಡದಾದ ಅವಮಾನ ಎಂದು ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಿರಿಯ ಯಕ್ಷಗಾನ ಕಲಾವಿದ ಐರೋಡಿ ಗೋವಿಂದಪ್ಪ ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಅವಿಭಜಿತ ಜಿಲ್ಲೆಯಲ್ಲಿ ಯಕ್ಷಗಾನದ ಬಗ್ಗೆ ಭೂತ-ವರ್ತಮಾನ-ಭವಿಷ್ಯತ್ ವಿಚಾರದಲ್ಲಿ ಆಳವಾದ ಅಧ್ಯಯನ ನಡೆಸಿದ ನೂರಾರು ಕಲಾವಿದರು ಇದ್ದಾರೆ ಅಂತವರನ್ನು ಬಿಟ್ಟು ಯಕ್ಷಗಾನದ ಗಂಧಗಾಳಿ ಗೊತ್ತಿರದ ಈತನನ್ನು ಕರೆತರುವುದು ಬೇಸರದ ಸಂಗತಿ ಎಂದರು.
ಈ ಸಂಧರ್ಭದಲ್ಲಿ ದೀಪಕ್ ಕೋಟ್ಯಾನ್ ಇನ್ನಾ ಮಾತನಾಡುತ್ತಾ ” ನಾರಾಯಣ ಗುರುಗಳಿಗೆ ಅವಮಾನ ಮಾಡಿರುವ ರೋಹಿತ್ ನನ್ನು ಸಚಿವ ಸುನಿಲ್ ಕುಮಾರ್ ವಿಜೃಂಭಿಸುತ್ತಿರುವುದು ವಿಪರ್ಯಾಸದ ಸಂಗತಿಯಾಗಿದೆ ಯಕ್ಷಗಾನದಲ್ಲೂ ರಾಜಕೀಯ ಮಾಡಲು ಹೊರಟಿರುವ ಸಚಿವರದ್ದು ದುರಹಂಕಾರದ ಪರಮಾವಧಿ ಎಂದರು.
ಕಟಪಾಡಿ ಯುವವಾಹಿನಿ ಅಧ್ಯಕ್ಷ ಸುನೀಲ್ ಬಂಗೇರ ಮಾತನಾಡಿ” ಹಿಂದುಳಿದ ವರ್ಗಗಳ ಆಶಾಕಿರಣವಾದ ನಾರಾಯಣ ಗುರುಗಳಿಗೆ ಅಪಮಾನ ಮಾಡಿರುವ ಚಕ್ರತೀರ್ಥನನ್ನು ಯಕ್ಷಗಾನದ ರಾಜ್ಯ ಸಮ್ಮೇಳನಕ್ಕೆ ಆಹ್ವಾನಿಸಿ ಭಾಷಣ ಮಾಡಿಸುತ್ತಿರುವುದು ಇಡೀ ಹಿಂದುಳಿದ ವರ್ಗಗಳಿಗೆ ಮಾಡಿರುವ ಅವಮಾನ ಕೂಡಲೇ ಈ ವಿಚಾರವನ್ನು ಸರ್ಕಾರ ಕೈ ಬಿಡಬೇಕು ಮತ್ತು ಸಚಿವ ಸುನಿಲ್ ಕುಮಾರ್ ಇಬ್ಬಗೆಯ ನೀತಿಯನ್ನು ಬಿಟ್ಟುಬಿಡಬೇಕು ಎಂದರು.
ಈ ಸಂಧರ್ಭದಲ್ಲಿ ನಗರಸಭಾ ಸದಸ್ಯ ರಮೇಶ್ ಕಾಂಚನ್,ದಸಂಸದ ಪ್ರಮುಖರಾದ ಗಣೇಶ್ ನೆರ್ಗಿ ಉಪಸ್ಥಿತರಿದ್ದರು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…