ಉಡುಪಿ: ಕರಾವಳಿಯ ಯಕ್ಷಗಾನವು ಇವತ್ತು ವಿಶ್ವ ಪ್ರಸಿದ್ಧ ಕಲೆಯಾಗಿ ಬೆಳೆದಿದೆ ಕಳೆದ ಆರು ಶತಮಾನಗಳಿಂದ ಈ ಕಲೆಯು ಬೆಳೆದು ಬಂದ ರೀತಿ ಅಚ್ಚರಿ ಹುಟ್ಟಿಸಿರುತ್ತದೆ ಆ ಕಲೆಯನ್ನು ಅತ್ಯದ್ಭುತವಾಗಿ ಸಂಘಟಿಸುವ ಮಹಾನೀಯರಿದ್ದಾರೆ ಯಕ್ಷಗಾನ ಪ್ರಸಂಗವನ್ನು ಬರೆದು ಪ್ರಸಿದ್ಧರಾದವರು ಇದ್ದಾರೆ.ಈ ಕಲೆಯಲ್ಲಿನ ಭಾಗವತರು ಚಂಡೆ ವಾದಕರು ತಮ್ಮದೇ ರೀತಿಯ ಶೈಲಿಯಲ್ಲಿ ನಿರ್ಮಿಸಿ ಕರ್ನಾಟಕ ಸಂಸ್ಕೃತಿಕ ಘನತೆಯನ್ನು ವಿಸ್ತರಿಸಿದ್ದಾರೆ ಇಂತಹ ಮಹಾನ್ ಕಲೆಯೊಂದರ ರಾಜ್ಯ ಸಮ್ಮೇಳ ನಡೆಯುವುದು ಅತ್ಯಂತ ಅವಶ್ಯಕವಾಗಿತ್ತು ಆದರೇ ಅಂತಹ ಸಮ್ಮೇಳನದಲ್ಲಿ ಹಿಂದುಳಿದ ವರ್ಗಗಳ ಆಶಾಕಿರಣವಾದ ಬ್ರಹ್ಮಶ್ರೀ ನಾರಾಯಣ ಗುರುಗಳ ಪಠ್ಯವನ್ನು ಕೈ ಬಿಟ್ಟು ಇಡೀ ಹಿಂದುಳಿಗ ವರ್ಗಗಳ ಸಮಾಜದ ಕೆಂಗಣ್ಣಿಗೆ ಗುರಿಯಾದ ರೋಹಿತ್ ಚಕ್ರತೀರ್ಥನನ್ನು ಕರೆತಂದು ದಿಕ್ಸೂಚಿ ಭಾಷಣ ಮಾಡಿಸುವುದು ಕರಾವಳಿಯ ಗಂಡುಕಲೆಗೆ ಮಾಡುತ್ತಿರುವ ದೊಡ್ಡದಾದ ಅವಮಾನ ಎಂದು ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಿರಿಯ ಯಕ್ಷಗಾನ ಕಲಾವಿದ ಐರೋಡಿ ಗೋವಿಂದಪ್ಪ ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಅವಿಭಜಿತ ಜಿಲ್ಲೆಯಲ್ಲಿ ಯಕ್ಷಗಾನದ ಬಗ್ಗೆ ಭೂತ-ವರ್ತಮಾನ-ಭವಿಷ್ಯತ್ ವಿಚಾರದಲ್ಲಿ ಆಳವಾದ ಅಧ್ಯಯನ ನಡೆಸಿದ ನೂರಾರು ಕಲಾವಿದರು ಇದ್ದಾರೆ ಅಂತವರನ್ನು ಬಿಟ್ಟು ಯಕ್ಷಗಾನದ ಗಂಧಗಾಳಿ ಗೊತ್ತಿರದ ಈತನನ್ನು ಕರೆತರುವುದು ಬೇಸರದ ಸಂಗತಿ ಎಂದರು.
ಈ ಸಂಧರ್ಭದಲ್ಲಿ ದೀಪಕ್ ಕೋಟ್ಯಾನ್ ಇನ್ನಾ ಮಾತನಾಡುತ್ತಾ ” ನಾರಾಯಣ ಗುರುಗಳಿಗೆ ಅವಮಾನ ಮಾಡಿರುವ ರೋಹಿತ್ ನನ್ನು ಸಚಿವ ಸುನಿಲ್ ಕುಮಾರ್ ವಿಜೃಂಭಿಸುತ್ತಿರುವುದು ವಿಪರ್ಯಾಸದ ಸಂಗತಿಯಾಗಿದೆ ಯಕ್ಷಗಾನದಲ್ಲೂ ರಾಜಕೀಯ ಮಾಡಲು ಹೊರಟಿರುವ ಸಚಿವರದ್ದು ದುರಹಂಕಾರದ ಪರಮಾವಧಿ ಎಂದರು.
ಕಟಪಾಡಿ ಯುವವಾಹಿನಿ ಅಧ್ಯಕ್ಷ ಸುನೀಲ್ ಬಂಗೇರ ಮಾತನಾಡಿ” ಹಿಂದುಳಿದ ವರ್ಗಗಳ ಆಶಾಕಿರಣವಾದ ನಾರಾಯಣ ಗುರುಗಳಿಗೆ ಅಪಮಾನ ಮಾಡಿರುವ ಚಕ್ರತೀರ್ಥನನ್ನು ಯಕ್ಷಗಾನದ ರಾಜ್ಯ ಸಮ್ಮೇಳನಕ್ಕೆ ಆಹ್ವಾನಿಸಿ ಭಾಷಣ ಮಾಡಿಸುತ್ತಿರುವುದು ಇಡೀ ಹಿಂದುಳಿದ ವರ್ಗಗಳಿಗೆ ಮಾಡಿರುವ ಅವಮಾನ ಕೂಡಲೇ ಈ ವಿಚಾರವನ್ನು ಸರ್ಕಾರ ಕೈ ಬಿಡಬೇಕು ಮತ್ತು ಸಚಿವ ಸುನಿಲ್ ಕುಮಾರ್ ಇಬ್ಬಗೆಯ ನೀತಿಯನ್ನು ಬಿಟ್ಟುಬಿಡಬೇಕು ಎಂದರು.
ಈ ಸಂಧರ್ಭದಲ್ಲಿ ನಗರಸಭಾ ಸದಸ್ಯ ರಮೇಶ್ ಕಾಂಚನ್,ದಸಂಸದ ಪ್ರಮುಖರಾದ ಗಣೇಶ್ ನೆರ್ಗಿ ಉಪಸ್ಥಿತರಿದ್ದರು.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…