ಕರಾವಳಿ ಕರ್ನಾಟಕದ ಹೆಮ್ಮೆಯ ಕಲೆಯಾದ ಯಕ್ಷಗಾನಕ್ಕೆ ವಿಶಿಷ್ಟವಾದ ಸಾಂಸ್ಕೃತಿಕ ಪರಂಪರೆಯಿದೆ.ಅದನ್ನು ನೆನಪಿಸುವ ಮತ್ತು ಭವಿಷ್ಯಕ್ಕೆ ಪೂರಕವಾಗುವ ನಿಟ್ಟಿನಲ್ಲಿ ಉಡುಪಿಯಲ್ಲಿ ಹಮ್ಮಿಕೊಂಡಿರುವ ಯಕ್ಷಗಾನ ಸಮ್ಮೇಳನ ಆಯೋಜನೆ ಅಭಿನಂದನಾರ್ಹವಾದುದು.ಆದರೆ ಇಂತಹ ಪ್ರತಿಷ್ಠಿತ ಕಾರ್ಯಕ್ರಮದ ದಿಕ್ಸೂಚಿ ಭಾಷಣಕ್ಕೆ ರೋಹಿತ್ ಚಕ್ರತೀರ್ಥರವರನ್ನು ಆಹ್ವಾನಿಸಿರುವುದು ಆಶ್ಚರ್ಯಕರವಾಗಿದೆ.ರೋಹಿತ್ರವರು ಪಠ್ಯಪುಸ್ತಕ ಸಮಿತಿಯಲ್ಲಿದ್ದಾಗ ಸುಧಾರಣಾವಾದಿ ಬ್ರಹ್ಮಶ್ರೀ ನಾರಾಯಣ ಗುರುಗಳ ಪಠ್ಯವನ್ನು ತೆಗೆದು ಹಾಕುವಂತಹ ದುಸ್ಸಾಹಸ ಮಾಡಿದವರು.ಇಂದಿಗೂ ಈ ವಿಷಯ ಸಮರ್ಪಕವಾಗಿ ಬಗೆಹರಿದಿಲ್ಲ.ಅಲ್ಲದೆ ರಾಷ್ಟ್ರ ಕವಿ ಕುವೆಂಪು ವಿರಚಿತ ನಾಡಗೀತೆಗೂ ಅವಮಾನ ಮಾಡಿದ್ದರು.ಇಷ್ಟೆಲ್ಲಾ ವಿವಾದಿತ ವ್ಯಕ್ತಿಯಾಗಿ ಹಾಗೂ ಯಕ್ಷಗಾನದಲ್ಲೂ ಏನೇನೂ ಸಾಧನೆ ಮಾಡಿಲ್ಲದ ರೋಹಿತ್ ಆಯ್ಕೆ ಯಾವ ಮಾನದಂಡದಲ್ಲಿ ಆಗಿದೆ ಎಂಬುದು ತಿಳಿಯುತ್ತಿಲ್ಲ.ಯಕ್ಷಗಾನದಲ್ಲಿ ಅವಿರತ ಸಾಧನೆ ಮಾಡಿದ ಕಲಾದಿಗ್ಗಜರು,ಯಕ್ಷ ವಿದ್ವಾಂಸರು ನಮ್ಮಲ್ಲಿರುವಾಗ ರೋಹಿತ್ ಆಹ್ವಾನವನ್ನು ತಿರಸ್ಕರಿಸುವುದು ಒಳ್ಳೆಯದು ಎಂದು ನಮ್ಮ ಅಭಿಪ್ರಾಯವಾಗಿದೆ ಎಂದು ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ ಅಧ್ಯಕ್ಷರಾದ ಪ್ರವೀಣ್ ಎಂ ಪೂಜಾರಿ ತಿಳಿಸಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…