Featured

ಉಡುಪಿ : ಯಕ್ಷಗಾನ ಸಮ್ಮೇಳನಕ್ಕೆ ಆಗಮಿಸುವ ಸರ್ವರಿಗೂ ಮೂಲಸೌಕರ್ಯ ಕೊರತೆಯಾಗದಂತೆ ಕ್ರಮ ವಹಿಸಿ :ಸಚಿವ ಸುನೀಲ್ ಕುಮಾರ್ – Vishwanews24

ಯಕ್ಷಗಾನ ಸಮ್ಮೇಳನಕ್ಕೆ ಆಗಮಿಸುವ ಸರ್ವರಿಗೂ ಮೂಲಸೌಕರ್ಯ ಕೊರತೆಯಾಗದಂತೆ ಕ್ರಮ ವಹಿಸಿ :ಸಚಿವ ಸುನೀಲ್ ಕುಮಾರ್

   ಉಡುಪಿ,: ಉಡುಪಿಯಲ್ಲಿ ಫೆಬ್ರವರಿ 11 ಮತ್ತು 12 ರಂದು ನಡೆಯುವ ರಾಜ್ಯಮಟ್ಟದ ಯಕ್ಷಗಾನ ಸಮ್ಮೆಳನಕ್ಕೆ ಆಗಮಿಸುವ  ಕಲಾವಿದರು ಮತ್ತು ಕಲಾಸಕ್ತರು ಹಾಗೂ ಸಾರ್ವಜನಿಕರಿಗೆ  ಯಾವುದೇ ರೀತಿಯ  ಕೊರತೆ ಆಗದಂತೆ ಅಗತ್ಯ ಮೂಲ ಸೌಕರ್ಯಗಳು ಸೇರಿದಂತೆ , ಊಟೋಪಚಾರದ ವ್ಯವಸ್ಥೆಯನ್ನು ಮಾಡಬೇಕೆಂದು ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನೀಲ್ ಕುಮಾರ್ ಅಧಿಕಾರಿಗಳು ಹಾಗೂ ಸಂಘಟಕರಿಗೆ ಸೂಚನೆ ನೀಡಿದರು.

ಅವರು ಇಂದು ರಾಜ್ಯಮಟ್ಟದ ಯಕ್ಷಗನ ಸಮ್ಮೇಳನ ಸಿದ್ಧತೆಗಳ ಕುರಿತ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಸಮ್ಮೇಳನದ ಅಧ್ಯಕ್ಷರ ಮೆರವಣಿಗೆ, ಕಾರ್ಯಕ್ರಮದ ಉದ್ಘಾಟನೆ ಹಾಗೂ ವಿವಿಧ ಗೋಷ್ಠಿಗಳು ಹಾಗೂ ಸಂವಾದಗಳು ನಿಗಧಿತ ಸಮಯಕ್ಕೆ ಸರಿಯಾಗಿ ಅರ್ಥಪೂರ್ಣವಾಗಿ ಆಯೋಜಿಸಬೇಕು. ಯಕ್ಷಗಾನ ಸಮ್ಮೇಳನಕ್ಕೆ ರಾಜ್ಯ ಮತ್ತು ಹೊರರಾಜ್ಯದಿಂದ ಆಗಮಿಸುವ ಯಕ್ಷಗಾನ ಕಲಾವಿದರು, ಕಲಾಭಿಮಾನಿಗಳು, ಜನಸಾಮಾನ್ಯರು ಸೇರಿದಂತೆ 50000 ಕ್ಕೂ ಹೆಚ್ಚು ಮಂದಿ ಭಾಗವಹಿಸುವ ನಿರೀಕ್ಷೆಯಿದ್ದು, ಆಗಮಿಸುವ ಪ್ರತಿಯೊಬ್ಬರಿಗೂ  ಕುಡಿಯುವ ನೀರು, ಶೌಚಾಲಯ ವ್ಯವಸ್ಥೆ, ಆಸನದ ವ್ಯವಸ್ಥೆ , ಆಹಾರ ವ್ಯವಸ್ಥೆ ಸೇರಿದಂತೆ ಮತ್ತಿತರ ಸೌಲಭ್ಯಗಳನ್ನು ಕಲ್ಪಿಸಬೇಕೆಂದು ತಿಳಿಸಿದರು.

ಕಾರ್ಯಕ್ರಮಕ್ಕೆ ಸಂಬAದಿಸಿದ ಆಹ್ವಾನ ಪತ್ರಿಕೆಯನ್ನು ಶಿಷ್ಠಾಚಾರದಂತೆ ಜಿಲ್ಲೆಯ ಎಲ್ಲಾ ಜನಪ್ರತಿನಿಧಿಗಳಿಗೆ ಹಾಗೂ ಕರಾವಳಿ ಭಾಗದ 3 ಜಿಲ್ಲೆಯ ಎಲ್ಲಾ ಶಾಸಕರು , ಲೋಕಸಭಾ ಸದಸ್ಯರು, ಯಕ್ಷಗಾನ ರಂಗದಲ್ಲಿ ಗಣನೀಯ ಸೇವೆ ಸಲ್ಲಿಸಿದ ಕಲಾವಿದರಿಗೆ, ಗಣ್ಯರಿಗೆ ತಲುಪಿಸಿ ಆಹ್ವಾನಿಸಬೇಕೆಂದರು.

ಸಮಾರಂಭದಲ್ಲಿ 75 ಕ್ಕೂ ಹೆಚ್ಚು ಜನ ಆಯ್ದ ಕಲಾವಿದರಿಗೆ ಸನ್ಮಾನಿಸಿ ಗೌರವಿಸಲಾಗುತ್ತಿದ್ದು, ಹೊರಜಿಲ್ಲೆಯಿಂದ ಬಂದ ಇವರಿಗೂ ಸೇರಿದಂತೆ ಇತರೆ ಕಲಾವಿದರಿಗೆ ವಸತಿ ಸೇರಿದಂತೆ ಆತಿಥ್ಯ ವ್ಯವಸ್ಥೆಯನ್ನು ಮಾಡಬೇಕು ಎಂದರು.

ಕಾರ್ಯಕ್ರಮದ ವೇದಿಕೆಯ ಪೆಂಡಾಲ್ ನಲ್ಲಿ ಧ್ವನಿ ಹಾಗೂ ಬೆಳಕಿನ ವ್ಯವಸ್ಥೆಯನ್ನು ಸುವ್ಯವಸ್ಥಿತವಾಗಿ ಇರುವ ಹಾಗೆ ನೋಡಿಕೊಳ್ಳಬೇಕು, ಮೈದಾನದಲ್ಲಿಯೂ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡÀಬೇಕು, ಎಲ್ಲವೂ ಅಚ್ಚುಕಟ್ಟಾಗಿ ನಡೆಯಲು ಸ್ವಯಂ ಸೇವಕರನ್ನು ನಿಯೋಜಿಸಬೇಕೆಂದು ತಿಳಿಸಿದರು.

ಮೈದಾನದಲ್ಲಿ 100 ಕ್ಕೂ ಹೆಚ್ಚು ವಾಣಿಜ್ಯ ಹಾಗೂ ವಿವಿಧ ಇಲಾಖೆಗಳ ಸವಲತ್ತುಗಳ ಪ್ರದರ್ಶನ ಮಳಿಗೆಗಳಿಗೆ ವ್ಯವಸ್ಥೆ ಮಾಡಲಾಗಿದೆ ಎಂದ ಅವರು, ಸಮ್ಮೇಳನಕ್ಕೆ ಆಗಮಿಸುವ ವಾಹನಗಳ ನಿಲುಗಡೆಗೆ ಅಗತ್ಯ ಪಾರ್ಕಿಂಗ್ ವ್ಯವಸ್ಥೆಯನ್ನು ಮಾಡಬೇಕೆಂದರು.

ಸಮ್ಮಳನಕ್ಕೆ ಆಗಮಿಸುವ ಜನಸಾಮಾನ್ಯರು ಇಲ್ಲಿನ ಸುತ್ತಮುತ್ತಲಿನ ಪ್ರವಾಸಿತಾಣಗಳಿಗೆ ಭೇಟಿ ನೀಡಲು ಅನುಕೂಲವಾಗುವಂತೆ ಪ್ರವಾಸಿತಾಣಗಳ ಮಾರ್ಗಸೂಚಿಗಳು ಸುಲಭವಾಗಿ ಲಭ್ಯವಾಗುವಂತೆ ಕ್ರಮ ವಹಿಸಬೇಕೆಂದು ಪ್ರವಾಸೋಧ್ಯಮ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಮ್ಮೇಳನಕ್ಕೆ ಆಗಮಿಸುವ ಸರ್ವರಿಗೂ ಲಭ್ಯವಾಗುವಂತೆ ಕಾಪಿ, ತಿಂಡಿ, ಊಟೋಪಚಾರ ನಿರಂತರವಾಗಿ ಬೆಳಗ್ಗೆಯಿಂದ ರಾತ್ರಿಯವರೆಗೂ ನಡೆಯಲಿದ್ದು ಇದಕ್ಕೆ ಅಗತ್ಯವಿರುವ ಎಲ್ಲಾ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳಬೇಕೆಂದು ಸೂಚನೆ ನೀಡಿದರು.

ಶಾಸಕ ರಘುಪತಿ ಭಟ್ ಮಾತನಾಡಿ, ಸರ್ಕಾರ ಯಕ್ಷಗಾನ ಸಮ್ಮೇಳನ ನಡೆಸಲು ಕಳೆದ ಆಯವ್ಯಯದಲ್ಲಿ ಘೋಷಿಸುವುದರೊಂದಿಗೆ ನಮ್ಮ ಜಿಲ್ಲೆಯಲ್ಲಿಯೇ ಆಯೋಜಿಸಲು ಅವಕಾಶ ಮಾಡಿಕೊಟ್ಟಿದೆ ಇದನ್ನು ಮಾದರಿ  ಸಮ್ಮೇಳನವಾಗುವ ರೀತಿಯಲ್ಲಿ ನಡೆಸಲು ಅಧಿಕಾರಿಗಳು, ಸಂಘಟಕರು , ಯಕ್ಷಗಾನ ಕಲಾವಿದರು ಹಾಗೂ ಆಸಕ್ತರು ಎಲ್ಲಾ ರೀತಿಯ ನೆರವು ಹಾಗೂ ಸಹಕಾರ ನೀಡಬೇಕೆಂದರು.

ಸಮ್ಮೇಳನವನ್ನು ವಿಶೇಷವಾಗಿ ಯುವ ಜನರಲ್ಲಿ ಕಲಾ ಆಸಕ್ತಿ ತರಬೇಕೆಂಬ ಉದ್ದೇಶದಿದಂಲೇ ಆಯೋಜಿಸಲಾಗುತ್ತಿದ್ದು, ಯುವಜನರು ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಕರೆ ನೀಡಿದರು.

ಇದೇ ಸಂದರ್ಭದಲ್ಲಿ ಸಮ್ಮೇಳನದ ಧ್ವಜವನ್ನು ಬಿಡುಗಡೆ ಮಾಡಲಾಯಿತು.

ಸಭೆಯಲ್ಲಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಜಿಲ್ಲಾ ಪಂಚಯತ್ ಮುಖ್ಯ ಕಾರ್ಯನಿರ್ವಹಾಣಧಿಕಾರಿ ಪ್ರಸನ್ನ ಹೆಚ್. ಎಸ್ಪಿ ಹಾಕೆ ಅಕ್ಷಯ್ ಮಚ್ಚೀಂದ್ರ, ಯಕ್ಷಗಾನ ಅಕಾಡೆಮಿಯ ಆಡಳಿತಾಧಿಕಾರಿ ಅಶೋಕ್ ಎನ್ ಛಲವಾದಿ, ರಿಜಿಸ್ಟಾçರ್ ಶಿವರುದ್ರಪ್ಪ, ಸಮ್ಮೇಳನದ ಕಾರ್ಯಾಧ್ಯಕ್ಷ ಡಾ.ಜಿ.ಎಲ್. ಹೆಗಡೆ, ಪ್ರಧಾನ ಸಂಚಾಲಕ ಪಳ್ಳಿ ಕಿಶನ್ ಹೆಗ್ಡೆ, ಸಂಚಾಲಕ ಮುರಳಿ ಕಡೆಕಾರ್, ಸದಸ್ಯರಾದ ಧನಂಜಯ ಶೆಟ್ಟಿ, ಪ್ರೊ.ಎಂ.ಎಲ್.ಸಾಮಗ, ನಾರಾಯಣ ಎಂ ಹೆಗಡೆ, ಮಹಾವೀರ ಪಂಡಿ, ಸುರೇಂದ್ರ ಪಣಿಯೂರು, ಪೌರಾಯುಕ್ತ ಡಾ.ಉದಯ್ ಶೆಟ್ಟಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

14 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

14 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

15 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

18 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

18 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

18 hours ago