Featured

ಉಡುಪಿ : ಯಶ್‍ಪಾಲ್ ಸುವರ್ಣಗೆ ಕೊಲೆ ಬೆದರಿಕೆ ಪ್ರಕರಣ: ಆರೋಪಿ ಮಹಮ್ಮದ್ ಶಾಫಿಗೆ ಶರತ್ತು ಬದ್ಧ ಜಾಮೀನು ಮಂಜೂರು – Vishwanews24

ಯಶ್‍ಪಾಲ್ ಸುವರ್ಣಗೆ ಕೊಲೆ ಬೆದರಿಕೆ ಪ್ರಕರಣ: ಆರೋಪಿ ಮಹಮ್ಮದ್ ಶಾಫಿಗೆ ಶರತ್ತು ಬದ್ಧ ಜಾಮೀನು ಮಂಜೂರು

ಉಡುಪಿ: ಬಿಜೆಪಿ ರಾಷ್ಟ್ರೀಯ ಹಿಂದುಳಿದ ವರ್ಗಗಳ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಯಶ್‍ಪಾಲ್ ಸುವರ್ಣ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಕೊಲೆ ಬೆದರಿಕೆ ಹಾಕಿದ ಪ್ರಕರಣದ ಆರೋಪಿ ಮಹಮ್ಮದ್ ಶಾಫಿ (26)ಗೆ ಉಡುಪಿ ಎರಡನೇ ಹೆಚ್ಚುವರಿ ಜೆ.ಎಂ.ಎಫ್.ಸಿ ನ್ಯಾಯಾಲಯ ಶರತ್ತು ಬದ್ಧ ಜಾಮೀನು ಮಂಜೂರು ಮಾಡಿ ಬಿಡುಗಡೆ ಗೊಳಿಸಿದೆ.

ಯಶ್ಪಾಲ್‍ ಸುವರ್ಣ ಹತ್ಯೆಗೈದವರಿಗೆ 10 ಲಕ್ಷ ರೂ ನೀಡುವುದಾಗಿ ಆರೋಪಿ ಸಾಮಾಜಿಕ ಜಾಲತಾಣಗಳಲ್ಲಿ ಕೊಲೆ ಬೆದರಿಕೆ ಹಾಕಿರುವುದಾಗಿ ಕಾಪು ವಿಧಾನಸಭಾ ಕ್ಷೇತ್ರದ ಯುವಮೋರ್ಚಾದ ಅಧ್ಯಕ್ಷ ಉದ್ಯಾವರದ ಸಚಿನ್ ಸುವರ್ಣ ಜೂನ್ 8 ರಂದು ಕಾಪು ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಕರಾವಳಿ ಹಾಗೂ ರಾಜ್ಯದಲ್ಲಿ ವ್ಯಾಪಕ ಚರ್ಚೆಗೆ ಗ್ರಾಸವಾದ ಈ ಪ್ರಕರಣ ದಾಖಲಾದ ತಕ್ಷಣ ಕಾರ್ಕಳ ಉಪವಿಭಾಗದ ಡಿವೈಎಸ್ಪಿ ಎಸ್. ವಿಜಯ ಪ್ರಸಾದ್ ಅವರು ಉಡುಪಿ ಜಿಲ್ಲಾ ಸೈಬರ್ ಪೊಲೀಸ್ ಠಾಣೆಯ ನಿರೀಕ್ಷಕರಾದ ಮಂಜುನಾಥ್ ಇವರ ತಂಡ ಮಂಗಳೂರು ಬಜ್ಪೆಯ ಮಹಮ್ಮದ್ ಶಫಿ ಪತ್ತೆ ಹಚ್ಚಿದ್ದರು. ನಂತರ ಕಾಪು ಪೋಲೀಸರ ವಿಶೇಷ ತಂಡ ಜೂನ್ 18 ರಂದು ಆರೋಪಿಯನ್ನು ಬಂಧಿಸಿ, ಉಡುಪಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು. ನ್ಯಾಯಾಲಯ ತಲಾ 2 ಜಾಮೀನು ಮತ್ತು ರೂ 50 ಸಾವಿರ ಬಾಂಡ್ ನ ಶರತ್ತು ವಿಧಿಸಿ, ಜಾಮೀನು ಮಂಜೂರು ಮಾಡಿದೆ. ಆರೋಪಿ ಪರವಾಗಿ ಯುವ ವಕೀಲ ಅಸದುಲ್ಲಾ ಕಟಪಾಡಿ ವಾದಿಸಿದ್ದರು.

Vishwa News 24

Recent Posts

ಮಂಗಳೂರು: ಬೈಕಂಪಾಡಿ ದರೋಡೆ ಪ್ರಕರಣಕ್ಕೆ ಟ್ವಿಸ್ಟ್ –  ವಾಹನವನ್ನು ಬಿಟ್ಟು ಪರಾರಿಯಾದ ಆರೋಪಿಗಳು ; ಕಾರು ಪತ್ತೆ – vishwanews24

ಮಂಗಳೂರು: ಬೈಕಂಪಾಡಿ ದರೋಡೆ ಪ್ರಕರಣಕ್ಕೆ ಟ್ವಿಸ್ಟ್ -  ವಾಹನವನ್ನು ಬಿಟ್ಟು ಪರಾರಿಯಾದ ಆರೋಪಿಗಳು ; ಕಾರು ಪತ್ತೆ ಮಂಗಳೂರು: ಬೈಕಂಪಾಡಿ…

21 minutes ago

ಮಂಗಳೂರು: ಮನೆ ಮೇಲೆ ತಡೆಗೋಡೆ ಕುಸಿತ; ಇಬ್ಬರು ಮಕ್ಕಳು ಸೇರಿ ಮೂವರು ದುರ್ಮರಣ – vishwanews24

ಮಂಗಳೂರು: ಮನೆ ಮೇಲೆ ತಡೆಗೋಡೆ ಕುಸಿತ; ಇಬ್ಬರು ಮಕ್ಕಳು ಸೇರಿ ಮೂವರು ದುರ್ಮರಣ ಮಂಗಳೂರು: ನಗರದಲ್ಲಿ ಸುರಿಯುತ್ತಿರುವ ಭಾರೀ ಮಳೆಯ…

1 hour ago

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

22 hours ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

22 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

22 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

22 hours ago