ಉಡುಪಿ: ಬಿಜೆಪಿ ರಾಷ್ಟ್ರೀಯ ಹಿಂದುಳಿದ ವರ್ಗಗಳ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಯಶ್ಪಾಲ್ ಸುವರ್ಣ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಕೊಲೆ ಬೆದರಿಕೆ ಹಾಕಿದ ಪ್ರಕರಣದ ಆರೋಪಿ ಮಹಮ್ಮದ್ ಶಾಫಿ (26)ಗೆ ಉಡುಪಿ ಎರಡನೇ ಹೆಚ್ಚುವರಿ ಜೆ.ಎಂ.ಎಫ್.ಸಿ ನ್ಯಾಯಾಲಯ ಶರತ್ತು ಬದ್ಧ ಜಾಮೀನು ಮಂಜೂರು ಮಾಡಿ ಬಿಡುಗಡೆ ಗೊಳಿಸಿದೆ.
ಯಶ್ಪಾಲ್ ಸುವರ್ಣ ಹತ್ಯೆಗೈದವರಿಗೆ 10 ಲಕ್ಷ ರೂ ನೀಡುವುದಾಗಿ ಆರೋಪಿ ಸಾಮಾಜಿಕ ಜಾಲತಾಣಗಳಲ್ಲಿ ಕೊಲೆ ಬೆದರಿಕೆ ಹಾಕಿರುವುದಾಗಿ ಕಾಪು ವಿಧಾನಸಭಾ ಕ್ಷೇತ್ರದ ಯುವಮೋರ್ಚಾದ ಅಧ್ಯಕ್ಷ ಉದ್ಯಾವರದ ಸಚಿನ್ ಸುವರ್ಣ ಜೂನ್ 8 ರಂದು ಕಾಪು ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಕರಾವಳಿ ಹಾಗೂ ರಾಜ್ಯದಲ್ಲಿ ವ್ಯಾಪಕ ಚರ್ಚೆಗೆ ಗ್ರಾಸವಾದ ಈ ಪ್ರಕರಣ ದಾಖಲಾದ ತಕ್ಷಣ ಕಾರ್ಕಳ ಉಪವಿಭಾಗದ ಡಿವೈಎಸ್ಪಿ ಎಸ್. ವಿಜಯ ಪ್ರಸಾದ್ ಅವರು ಉಡುಪಿ ಜಿಲ್ಲಾ ಸೈಬರ್ ಪೊಲೀಸ್ ಠಾಣೆಯ ನಿರೀಕ್ಷಕರಾದ ಮಂಜುನಾಥ್ ಇವರ ತಂಡ ಮಂಗಳೂರು ಬಜ್ಪೆಯ ಮಹಮ್ಮದ್ ಶಫಿ ಪತ್ತೆ ಹಚ್ಚಿದ್ದರು. ನಂತರ ಕಾಪು ಪೋಲೀಸರ ವಿಶೇಷ ತಂಡ ಜೂನ್ 18 ರಂದು ಆರೋಪಿಯನ್ನು ಬಂಧಿಸಿ, ಉಡುಪಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು. ನ್ಯಾಯಾಲಯ ತಲಾ 2 ಜಾಮೀನು ಮತ್ತು ರೂ 50 ಸಾವಿರ ಬಾಂಡ್ ನ ಶರತ್ತು ವಿಧಿಸಿ, ಜಾಮೀನು ಮಂಜೂರು ಮಾಡಿದೆ. ಆರೋಪಿ ಪರವಾಗಿ ಯುವ ವಕೀಲ ಅಸದುಲ್ಲಾ ಕಟಪಾಡಿ ವಾದಿಸಿದ್ದರು.
ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…
ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…
ಸಕಲೇಶಪುರ–ಸುಬ್ರಹ್ಮಣ್ಯ ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…