Featured

ಉಡುಪಿ : ಯಶ್‍ಪಾಲ್ ಸುವರ್ಣಗೆ ಕೊಲೆ ಬೆದರಿಕೆ ಪ್ರಕರಣ: ಆರೋಪಿ ಮಹಮ್ಮದ್ ಶಾಫಿಗೆ ಶರತ್ತು ಬದ್ಧ ಜಾಮೀನು ಮಂಜೂರು – Vishwanews24

ಯಶ್‍ಪಾಲ್ ಸುವರ್ಣಗೆ ಕೊಲೆ ಬೆದರಿಕೆ ಪ್ರಕರಣ: ಆರೋಪಿ ಮಹಮ್ಮದ್ ಶಾಫಿಗೆ ಶರತ್ತು ಬದ್ಧ ಜಾಮೀನು ಮಂಜೂರು

ಉಡುಪಿ: ಬಿಜೆಪಿ ರಾಷ್ಟ್ರೀಯ ಹಿಂದುಳಿದ ವರ್ಗಗಳ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಯಶ್‍ಪಾಲ್ ಸುವರ್ಣ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಕೊಲೆ ಬೆದರಿಕೆ ಹಾಕಿದ ಪ್ರಕರಣದ ಆರೋಪಿ ಮಹಮ್ಮದ್ ಶಾಫಿ (26)ಗೆ ಉಡುಪಿ ಎರಡನೇ ಹೆಚ್ಚುವರಿ ಜೆ.ಎಂ.ಎಫ್.ಸಿ ನ್ಯಾಯಾಲಯ ಶರತ್ತು ಬದ್ಧ ಜಾಮೀನು ಮಂಜೂರು ಮಾಡಿ ಬಿಡುಗಡೆ ಗೊಳಿಸಿದೆ.

ಯಶ್ಪಾಲ್‍ ಸುವರ್ಣ ಹತ್ಯೆಗೈದವರಿಗೆ 10 ಲಕ್ಷ ರೂ ನೀಡುವುದಾಗಿ ಆರೋಪಿ ಸಾಮಾಜಿಕ ಜಾಲತಾಣಗಳಲ್ಲಿ ಕೊಲೆ ಬೆದರಿಕೆ ಹಾಕಿರುವುದಾಗಿ ಕಾಪು ವಿಧಾನಸಭಾ ಕ್ಷೇತ್ರದ ಯುವಮೋರ್ಚಾದ ಅಧ್ಯಕ್ಷ ಉದ್ಯಾವರದ ಸಚಿನ್ ಸುವರ್ಣ ಜೂನ್ 8 ರಂದು ಕಾಪು ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಕರಾವಳಿ ಹಾಗೂ ರಾಜ್ಯದಲ್ಲಿ ವ್ಯಾಪಕ ಚರ್ಚೆಗೆ ಗ್ರಾಸವಾದ ಈ ಪ್ರಕರಣ ದಾಖಲಾದ ತಕ್ಷಣ ಕಾರ್ಕಳ ಉಪವಿಭಾಗದ ಡಿವೈಎಸ್ಪಿ ಎಸ್. ವಿಜಯ ಪ್ರಸಾದ್ ಅವರು ಉಡುಪಿ ಜಿಲ್ಲಾ ಸೈಬರ್ ಪೊಲೀಸ್ ಠಾಣೆಯ ನಿರೀಕ್ಷಕರಾದ ಮಂಜುನಾಥ್ ಇವರ ತಂಡ ಮಂಗಳೂರು ಬಜ್ಪೆಯ ಮಹಮ್ಮದ್ ಶಫಿ ಪತ್ತೆ ಹಚ್ಚಿದ್ದರು. ನಂತರ ಕಾಪು ಪೋಲೀಸರ ವಿಶೇಷ ತಂಡ ಜೂನ್ 18 ರಂದು ಆರೋಪಿಯನ್ನು ಬಂಧಿಸಿ, ಉಡುಪಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು. ನ್ಯಾಯಾಲಯ ತಲಾ 2 ಜಾಮೀನು ಮತ್ತು ರೂ 50 ಸಾವಿರ ಬಾಂಡ್ ನ ಶರತ್ತು ವಿಧಿಸಿ, ಜಾಮೀನು ಮಂಜೂರು ಮಾಡಿದೆ. ಆರೋಪಿ ಪರವಾಗಿ ಯುವ ವಕೀಲ ಅಸದುಲ್ಲಾ ಕಟಪಾಡಿ ವಾದಿಸಿದ್ದರು.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

2 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

3 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

3 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

3 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

3 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

3 days ago