ಉಡುಪಿ: ಯಶ್ಪಾಲ್ ಸುವರ್ಣರ ಪುಷ್ಪಾನಂದ ಫೌಂಡೇಶನ್ ವತಿಯಿಂದ ಜ.31 ರಂದು ಬಡ ಕುಟುಂಬಕ್ಕೆ ಮನೆ ಹಸ್ತಾಂತರ – vishwanews24
ಉಡುಪಿ: ಯಶ್ಪಾಲ್ ಸುವರ್ಣರ ಪುಷ್ಪಾನಂದ ಫೌಂಡೇಶನ್ ವತಿಯಿಂದ ಜ.31 ರಂದು ಬಡ ಕುಟುಂಬಕ್ಕೆ ಮನೆ ಹಸ್ತಾಂತರ
ಉಡುಪಿ: ಮಲ್ಪೆ ವಡಭಾಂಡೇಶ್ವರ ವಾರ್ಡಿನ ಅರ್ಹ ಬಡ ಕುಟುಂಬಕ್ಕೆ ಪುಷ್ಪಾನಂದ ಫೌಂಡೇಶನ್ ವತಿಯಿಂದ ಸುಮಾರು 10 ಲಕ್ಷ ವೆಚ್ಚದಲ್ಲಿ ನಿರ್ಮಿಸಿದ “ಪುಷ್ಪಾನಂದ” ಮನೆಯನ್ನು ಪೇಜಾವರ ಮಠದ ಪರಮ ಪೂಜ್ಯ ಶ್ರೀ ವಿಶ್ವ ಪ್ರಸನ್ನ ತೀರ್ಥ ಶ್ರೀಪಾದರು ಜನವರಿ 31 ಶುಕ್ರವಾರ ಬೆಳಿಗ್ಗೆ 9.00 ಗಂಟೆಗೆ ಹಸ್ತಾಂತರಿಸಲಿದ್ದಾರೆ ಎಂದು ಪುಷ್ಪಾನಂದ ಫೌಂಡೇಶನ್ ಪ್ರವರ್ತಕರಾದ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ತಿಳಿಸಿದ್ದಾರೆ.
ಅಯೋಧ್ಯೆ ಶ್ರೀರಾಮ ಮಂದಿರ ಲೋಕಾರ್ಪಣೆಯ ಶುಭ ಸಂದರ್ಭದಲ್ಲಿ ಪೇಜಾವರ ಶ್ರೀಗಳ ರಾಮ ರಾಜ್ಯ ನಿರ್ಮಾಣದ ಸಂಕಲ್ಪಕ್ಕೆ ಪೂರಕವಾಗಿ ಬಡ ಕುಟುಂಬಗಳಿಗೆ ಸೂರು ಕಲ್ಪಿಸುವ ಆಶಯದಂತೆ ಶ್ರೀಗಳ ಮಾರ್ಗದರ್ಶನದಲ್ಲಿ ಹೆತ್ತವರ ಸ್ಮರಣಾರ್ಥವಾಗಿ ಶ್ರೀರಾಮ ನವಮಿಯಂದು ಮನೆಗೆ ಶಿಲಾನ್ಯಾಸ ನೆರವೇರಿಸಿದ್ದು ಇದೀಗ ನೂತನ ಮನೆಯನ್ನು ಪೇಜಾವರ ಶ್ರೀಗಳೇ ಹಸ್ತಾಂತರಿಸಲಿದ್ದಾರೆ.
ಬೆಂಗಳೂರು: ಹೈಫೈ ಮನೆ ಬಾಡಿಗೆ ಪಡೆದು ವೇಶ್ಯಾವಾಟಿಕೆ ; ಇಬ್ಬರು ಅರೆಸ್ಟ್ – vishwanews24
ಪುಷ್ಪಾನಂದ ಫೌಂಡೇಶನ್ ಮೂಲಕ ಶಿಕ್ಷಣ, ಸಾಮಾಜಿಕ, ಆರೋಗ್ಯ, ಧಾರ್ಮಿಕ ಕ್ಷೇತ್ರದ ಸಮಾಜಮುಖಿ ಕಾರ್ಯಗಳಿಗೆ ಸಹಕಾರ ನೀಡುತ್ತಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಬಡ ಕುಟುಂಬಗಳಿಗೆ ಶಕ್ತಿ ತುಂಬುವ ಕೆಲಸ ನಿರಂತರವಾಗಿ ನಡೆಸುವ ಮೂಲಕ ಹೆತ್ತವರ ಹೆಸರನ್ನು ಚಿರಸ್ಥಾಯಿಯಾಗಿಸುವ ಸಂಕಲ್ಪ ಸಾಕಾರಗೊಳಿಸುವ ಯೋಜನೆಯಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಜೆಕಾರು ಬಾಲಕೃಷ್ಣ ಪೂಜಾರಿ ಕೊಲೆ ಪ್ರಕರಣ : ಆರೋಪಿಯಿಂದ ಜಾಮೀನಿಗೆ ಅರ್ಜಿ – vishwanews24
