ಉಡುಪಿ: ಯಾಂತ್ರೀಕೃತ ಮೀನುಗಾರಿಕೆ ದೋಣಿಗಳಿಗೆ ಕರರಹಿತ 25000 ಕಿಲೋ ಲೀಟರ್ ಡೀಸೆಲ್ 2022-23ನೇ ಸಾಲಿಗೆ ಹೆಚ್ಚುವರಿಯಾಗಿ ವಿತರಿಸಲು ಸರ್ಕಾರ ಆದೇಶ ಹೊರಡಿಸಿದೆ.
ಈ ಹಿಂದೆ ಸರ್ಕಾರವು ಕರರಹಿತ ಡೀಸೆಲ್ ಅನ್ನು ಡೆಲಿವರಿ ಪಾಯಿಂಟ್ ನಲ್ಲಿ ವಿತರಿಸಲು ಆದೇಶಿಸಿದ್ದು, 2022 – 23ನೇ ಸಾಲಿಗೆ ಆರ್ಥಿಕ ವರ್ಷ ಏಪ್ರಿಲ್ ಮಾಹೆಯಿಂದ ಅನ್ವಯವಾಗುವಂತೆ ದೋಣಿಗಳಿಗೆ ವಾರ್ಷಿಕ ಕರರಹಿತ ಡೀಸೆಲ್ ಮಿತಿಯನ್ನು 1.50 ಲಕ್ಷ ಕಿಲೋ ಲೀಟರ್ ನಿಗದಿಪಡಿಸಿದೆ. ಯಾಂತ್ರಿಕ ದೋಣಿಗಳಿಗೆ ನೀಡುತ್ತಿರುವ ಕರರಹಿತ ಡೀಸೆಲ್ ಕೋಟಾ ಡಿಸೆಂಬರ್ ಗೆ ಮುಗಿದಿದ್ದು, ಈ ಕೋಟಾ ಸಾಕಾಗುತ್ತಿಲ್ಲವಾದ್ದರಿಂದ ಪ್ರಸ್ತುತ ನಿಗದಿಯಾಗಿರುವ ವಾರ್ಷಿಕ ಮಿತಿಯನ್ನು 1.50 ಲಕ್ಷ ಕಿಲೋ ಲೀಟರ್ 2.00 ಲಕ್ಷ ಕಿಲೋ ಲೀಟರ್ ಗೆ ಹೆಚ್ಚಿಸಲು ಮನವಿ ಮಾಡಲಾಗಿತ್ತು. ಅಲ್ಲದೆ ಪ್ರತಿ ಮಾಹೆಗೆ ಸರಾಸರಿ 17500 ಕಿಲೋ ಲೀಟರ್ ಪ್ರಮಾಣ ಬೇಕಾಗಿದ್ದು, ಅದರಂತೆ ಫೆಬ್ರವರಿ ತಿಂಗಳಿನಿಂದ ಮಾರ್ಚ್ ವರೆಗೆ 2 ತಿಂಗಳಿಗೆ ಕನಿಷ್ಠ 35000 ಕಿಲೋ ಲೀಟರ್ ಪ್ರಮಾಣ ಬೇಕಾಗಿರುವುದರಿಂದ 25,000 ಕಿಲೋ ಲೀಟರ್ ಹೆಚ್ಚುವರಿಯಾಗಿ ಕರರಹಿತ ಡೀಸೆಲ್ ವಿತರಿಸಲು ಮನವಿ ಮಾಡಲಾಗಿತ್ತು.
ಮೀನುಗಾರರ ಈ ಪ್ರಮುಖ ಬೇಡಿಕೆಯನ್ನು ಈಡೇರಿಸಿದ ಮುಖ್ಯ ಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಹಾಗೂ ಇದಕ್ಕಾಗಿ ಶ್ರಮಿಸಿದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವರಾದ ಶೋಭಾ ಕರಂದ್ಲಾಜೆ ಅವರಿಗೆ ಹಾಗೂ ಮೀನುಗಾರಿಕೆ ಬಂದರು ಮತ್ತು ಒಳನಾಡು ಜಲ ಸಾರಿಗೆ ಸಚಿವರಾದ ಎಸ್. ಅಂಗಾರ ಅವರಿಗೆ ಶಾಸಕ ಕೆ ರಘುಪತಿ ಭಟ್ ಅವರು ಅಭಿನಂದನೆ ಸಲ್ಲಿಸಿದ್ದಾರೆ.
ಉಡುಪಿ: ಕಾಕ್ರೋಚ್’ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ ಉಡುಪಿ: ಚಳವಳಿಯ ಹೆಸರಿನಲ್ಲಿ ದೇಶದಲ್ಲಿ…
ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ ಕಾಪು : ಕಾಪುವಿನ ಹಿರಿಯ ಉದ್ಯಮಿ, ಧಾರ್ಮಿಕ, ಸಾಮಾಜಿಕ…
ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್ನ ನೂತನ ಶಾಖೆ ಉದ್ಘಾಟನೆ ಉಡುಪಿ: ನಗರದ ಕಿನ್ನಿಮುಲ್ಕಿಯ ಶಾಂತಾ ಬಿಲ್ಡಿಂಗ್ನಲ್ಲಿ ಕಿದಿಯೂರು ಕ್ರೆಡಿಟ್…
ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ ಪಡುಬಿದ್ರಿ : ಹೆಜಮಾಡಿ ಟೋಲ್ನಲ್ಲಿ ಸ್ಥಳೀಯ…
ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ ಮಂಗಳೂರು: ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜುಲೈ…
ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮಂಗಳೂರು : ನಗರ ಹೊರವಲಯದ ಬೈಕಂಪಾಡಿಯ…