Featured

ಉಡುಪಿ: ಯಾಂತ್ರೀಕೃತ ದೋಣಿಗಳಿಗೆ 25,000 ಕಿ.ಲೀ ಡೀಸೆಲ್‌ ಹೆಚ್ಚುವರಿಯಾಗಿ ವಿತರಿಸಲು ಸರ್ಕಾರ ಆದೇಶ – Vishwanews24

ಉಡುಪಿ: ಯಾಂತ್ರೀಕೃತ ದೋಣಿಗಳಿಗೆ 25,000 ಕಿ.ಲೀ ಡೀಸೆಲ್‌ ಹೆಚ್ಚುವರಿಯಾಗಿ ವಿತರಿಸಲು ಸರ್ಕಾರ ಆದೇಶ

ಉಡುಪಿ: ಯಾಂತ್ರೀಕೃತ ಮೀನುಗಾರಿಕೆ ದೋಣಿಗಳಿಗೆ ಕರರಹಿತ 25000 ಕಿಲೋ ಲೀಟರ್ ಡೀಸೆಲ್ 2022-23ನೇ ಸಾಲಿಗೆ ಹೆಚ್ಚುವರಿಯಾಗಿ ವಿತರಿಸಲು ಸರ್ಕಾರ ಆದೇಶ ಹೊರಡಿಸಿದೆ.

ಈ ಹಿಂದೆ ಸರ್ಕಾರವು ಕರರಹಿತ ಡೀಸೆಲ್ ಅನ್ನು ಡೆಲಿವರಿ ಪಾಯಿಂಟ್ ನಲ್ಲಿ ವಿತರಿಸಲು ಆದೇಶಿಸಿದ್ದು, 2022 – 23ನೇ ಸಾಲಿಗೆ ಆರ್ಥಿಕ ವರ್ಷ ಏಪ್ರಿಲ್ ಮಾಹೆಯಿಂದ ಅನ್ವಯವಾಗುವಂತೆ ದೋಣಿಗಳಿಗೆ ವಾರ್ಷಿಕ ಕರರಹಿತ ಡೀಸೆಲ್ ಮಿತಿಯನ್ನು 1.50 ಲಕ್ಷ ಕಿಲೋ ಲೀಟರ್ ನಿಗದಿಪಡಿಸಿದೆ. ಯಾಂತ್ರಿಕ ದೋಣಿಗಳಿಗೆ ನೀಡುತ್ತಿರುವ ಕರರಹಿತ ಡೀಸೆಲ್ ಕೋಟಾ ಡಿಸೆಂಬರ್ ಗೆ ಮುಗಿದಿದ್ದು, ಈ ಕೋಟಾ ಸಾಕಾಗುತ್ತಿಲ್ಲವಾದ್ದರಿಂದ ಪ್ರಸ್ತುತ ನಿಗದಿಯಾಗಿರುವ ವಾರ್ಷಿಕ ಮಿತಿಯನ್ನು 1.50 ಲಕ್ಷ ಕಿಲೋ ಲೀಟರ್ 2.00 ಲಕ್ಷ ಕಿಲೋ ಲೀಟರ್ ಗೆ ಹೆಚ್ಚಿಸಲು ಮನವಿ ಮಾಡಲಾಗಿತ್ತು. ಅಲ್ಲದೆ ಪ್ರತಿ ಮಾಹೆಗೆ ಸರಾಸರಿ 17500 ಕಿಲೋ ಲೀಟರ್ ಪ್ರಮಾಣ ಬೇಕಾಗಿದ್ದು, ಅದರಂತೆ ಫೆಬ್ರವರಿ ತಿಂಗಳಿನಿಂದ ಮಾರ್ಚ್ ವರೆಗೆ 2 ತಿಂಗಳಿಗೆ ಕನಿಷ್ಠ 35000 ಕಿಲೋ ಲೀಟರ್ ಪ್ರಮಾಣ ಬೇಕಾಗಿರುವುದರಿಂದ 25,000 ಕಿಲೋ ಲೀಟರ್ ಹೆಚ್ಚುವರಿಯಾಗಿ ಕರರಹಿತ ಡೀಸೆಲ್ ವಿತರಿಸಲು ಮನವಿ ಮಾಡಲಾಗಿತ್ತು.

ಮೀನುಗಾರರ ಈ ಪ್ರಮುಖ ಬೇಡಿಕೆಯನ್ನು ಈಡೇರಿಸಿದ ಮುಖ್ಯ ಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಹಾಗೂ ಇದಕ್ಕಾಗಿ ಶ್ರಮಿಸಿದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವರಾದ ಶೋಭಾ ಕರಂದ್ಲಾಜೆ ಅವರಿಗೆ ಹಾಗೂ ಮೀನುಗಾರಿಕೆ ಬಂದರು ಮತ್ತು ಒಳನಾಡು ಜಲ ಸಾರಿಗೆ ಸಚಿವರಾದ ಎಸ್. ಅಂಗಾರ ಅವರಿಗೆ ಶಾಸಕ ಕೆ ರಘುಪತಿ ಭಟ್ ಅವರು ಅಭಿನಂದನೆ ಸಲ್ಲಿಸಿದ್ದಾರೆ.

Vishwa News 24

Recent Posts

ರಾಜ್ಯಸಭೆ ಸ್ಥಾನದಿಂದ ನನ್ನ ಮೋದಿ ಅವರ ಸಂಬಂಧ ಮುಕ್ತಾಯ ಆಗೋದಿಲ್ಲ : ಹೆಚ್.ಡಿ ದೇವೇಗೌಡ – vishwanews24

ನನ್ನ ಜೀವನದ ಕೊನೆ ಘಟ್ಟದವರೆಗೂ ಮೈತ್ರಿ ಮುಂದುವರೆಸಿಕೊಂಡು ಹೋಗುತ್ತೇನೆ : ಹೆಚ್‌ಡಿಡಿ ಬೆಂಗಳೂರು: ಒಂದು ರಾಜ್ಯಸಭೆ ಸ್ಥಾನದಿಂದ ನನ್ನ, ಮೋದಿ …

17 hours ago

ಜೂನ್ 15 ರಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ : ಕೇರಳ ಸರ್ಕಾರ ಘೋಷಣೆ – vishwanews24

ಜೂನ್ 15 ರಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ : ಕೇರಳ ಸರ್ಕಾರ ಘೋಷಣೆ ತಿರುವನಂತಪುರಂ: ಕೇರಳ ಸರ್ಕಾರ ಮಹತ್ವದ…

18 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ಐವರು ಆರೋಪಿಗಳ ಜಾಮೀನು ರದ್ದು ಅರ್ಜಿ ವಜಾಗೊಳಿಸಿದ ಹೈಕೋರ್ಟ್ – vishwanews24

ರೇಣುಕಾಸ್ವಾಮಿ ಕೊಲೆ ಪ್ರಕರಣ : ಐವರು ಆರೋಪಿಗಳ ಜಾಮೀನು ರದ್ದು ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ…

18 hours ago

ಮನೆ ಕೆಲಸಕ್ಕೆ ಸೇರಿದ್ದ ದಂಪತಿಯಿಂದ ಕಳ್ಳತನ ; 25 ಲಕ್ಷ ಹಣ ಕದ್ದು ನೇಪಾಳಕ್ಕೆ ಎಸ್ಕೇಪ್ ಆಗುತ್ತಿದ್ದ ವೇಳೆ ಅರೆಸ್ಟ್ – vishwanews24

ಮನೆ ಕೆಲಸಕ್ಕೆ ಸೇರಿದ್ದ ದಂಪತಿಯಿಂದ ಕಳ್ಳತನ ; 25 ಲಕ್ಷ ಹಣ ಕದ್ದು ನೇಪಾಳಕ್ಕೆ ಎಸ್ಕೇಪ್ ಆಗುತ್ತಿದ್ದ ವೇಳೆ ಅರೆಸ್ಟ್ ಬೆಂಗಳೂರು:…

18 hours ago

ಮಂಗಳೂರು: ಜೋಕಟ್ಟೆ ಫ್ಲೈಓವರ್ ಬಳಿ ಅಪರಿಚಿತ ಯುವಕನ ಶವ ಪತ್ತೆ – vishwanews24

ಮಂಗಳೂರು: ಜೋಕಟ್ಟೆ ಫ್ಲೈಓವರ್ ಬಳಿ ಅಪರಿಚಿತ ಯುವಕನ ಶವ ಪತ್ತೆ ಮಂಗಳೂರು: ಪಣಂಬೂರಿನ ಜೋಕಟ್ಟೆ ಬಳಿ ಬುಧವಾರ ಯುವಕನೊಬ್ಬನ ಶವ…

19 hours ago

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ : ಪ್ರಧಾನಿಗೆ ಮುಸ್ಲಿಂ ಬಾಂಧವ್ಯ ವೇದಿಕೆ ಮನವಿ – vishwanews24

ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ, ಗೋಹತ್ಯೆ, ಗೋಮಾಂಸ ರಫ್ತನ್ನು ನಿಷೇಧಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ…

19 hours ago