ಉಡುಪಿ: ಯಾಂತ್ರೀಕೃತ ಮೀನುಗಾರಿಕೆ ದೋಣಿಗಳಿಗೆ ಕರರಹಿತ 25000 ಕಿಲೋ ಲೀಟರ್ ಡೀಸೆಲ್ 2022-23ನೇ ಸಾಲಿಗೆ ಹೆಚ್ಚುವರಿಯಾಗಿ ವಿತರಿಸಲು ಸರ್ಕಾರ ಆದೇಶ ಹೊರಡಿಸಿದೆ.
ಈ ಹಿಂದೆ ಸರ್ಕಾರವು ಕರರಹಿತ ಡೀಸೆಲ್ ಅನ್ನು ಡೆಲಿವರಿ ಪಾಯಿಂಟ್ ನಲ್ಲಿ ವಿತರಿಸಲು ಆದೇಶಿಸಿದ್ದು, 2022 – 23ನೇ ಸಾಲಿಗೆ ಆರ್ಥಿಕ ವರ್ಷ ಏಪ್ರಿಲ್ ಮಾಹೆಯಿಂದ ಅನ್ವಯವಾಗುವಂತೆ ದೋಣಿಗಳಿಗೆ ವಾರ್ಷಿಕ ಕರರಹಿತ ಡೀಸೆಲ್ ಮಿತಿಯನ್ನು 1.50 ಲಕ್ಷ ಕಿಲೋ ಲೀಟರ್ ನಿಗದಿಪಡಿಸಿದೆ. ಯಾಂತ್ರಿಕ ದೋಣಿಗಳಿಗೆ ನೀಡುತ್ತಿರುವ ಕರರಹಿತ ಡೀಸೆಲ್ ಕೋಟಾ ಡಿಸೆಂಬರ್ ಗೆ ಮುಗಿದಿದ್ದು, ಈ ಕೋಟಾ ಸಾಕಾಗುತ್ತಿಲ್ಲವಾದ್ದರಿಂದ ಪ್ರಸ್ತುತ ನಿಗದಿಯಾಗಿರುವ ವಾರ್ಷಿಕ ಮಿತಿಯನ್ನು 1.50 ಲಕ್ಷ ಕಿಲೋ ಲೀಟರ್ 2.00 ಲಕ್ಷ ಕಿಲೋ ಲೀಟರ್ ಗೆ ಹೆಚ್ಚಿಸಲು ಮನವಿ ಮಾಡಲಾಗಿತ್ತು. ಅಲ್ಲದೆ ಪ್ರತಿ ಮಾಹೆಗೆ ಸರಾಸರಿ 17500 ಕಿಲೋ ಲೀಟರ್ ಪ್ರಮಾಣ ಬೇಕಾಗಿದ್ದು, ಅದರಂತೆ ಫೆಬ್ರವರಿ ತಿಂಗಳಿನಿಂದ ಮಾರ್ಚ್ ವರೆಗೆ 2 ತಿಂಗಳಿಗೆ ಕನಿಷ್ಠ 35000 ಕಿಲೋ ಲೀಟರ್ ಪ್ರಮಾಣ ಬೇಕಾಗಿರುವುದರಿಂದ 25,000 ಕಿಲೋ ಲೀಟರ್ ಹೆಚ್ಚುವರಿಯಾಗಿ ಕರರಹಿತ ಡೀಸೆಲ್ ವಿತರಿಸಲು ಮನವಿ ಮಾಡಲಾಗಿತ್ತು.
ಮೀನುಗಾರರ ಈ ಪ್ರಮುಖ ಬೇಡಿಕೆಯನ್ನು ಈಡೇರಿಸಿದ ಮುಖ್ಯ ಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಹಾಗೂ ಇದಕ್ಕಾಗಿ ಶ್ರಮಿಸಿದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವರಾದ ಶೋಭಾ ಕರಂದ್ಲಾಜೆ ಅವರಿಗೆ ಹಾಗೂ ಮೀನುಗಾರಿಕೆ ಬಂದರು ಮತ್ತು ಒಳನಾಡು ಜಲ ಸಾರಿಗೆ ಸಚಿವರಾದ ಎಸ್. ಅಂಗಾರ ಅವರಿಗೆ ಶಾಸಕ ಕೆ ರಘುಪತಿ ಭಟ್ ಅವರು ಅಭಿನಂದನೆ ಸಲ್ಲಿಸಿದ್ದಾರೆ.
ಉಡುಪಿ: ಜೂ.28ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ ಉಡುಪಿ: ರಾಜ್ಯದಲ್ಲಿ 0 ಇಂದ 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಕಡ್ಡಾಯವಾಗಿ…
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ :18ನೇ ಆರೋಪಿ ಗೆ ಮಧ್ಯಂತರ ಜಾಮೀನು ಮಂಜೂರು ಮಂಗಳೂರು: ಬಿಜೆಪಿ ಯುವ ಮೋರ್ಚಾ ನಾಯಕ ಪ್ರವೀಣ್…
ಪುತ್ತೂರು ಅತ್ಯಾಚಾರ ಪ್ರಕರಣ: ರಾಜಿ ಸಂಧಾನದ ಮೂಲಕ ವಿವಾದ ಇತ್ಯರ್ಥಕ್ಕೆ ಹೈಕೋರ್ಟ್ ಸೂಚನೆ ಬೆಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ…
ಬೆಳ್ತಂಗಡಿ: ಮಹಿಳೆ ಮೇಲೆ ಅತ್ಯಾಚಾರ ಪ್ರಕರಣ ; ಆರೋಪಿ ಬಂಧನ ಬೆಳ್ತಂಗಡಿ: ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಮಹಿಳೆಯೊಬ್ಬರ ಮೇಲೆ…
ಸುಳ್ಯ : ದ್ವಿತೀಯ ಪಿಯುಸಿಯಲ್ಲಿ ರಾಜ್ಯದಲ್ಲಿ 4ನೇ ರ್ಯಾಂಕ್ ಪಡೆದಿದ್ದ ವಿದ್ಯಾರ್ಥಿನಿ ಅಭಿಜ್ಞಾ ಭಟ್ ಅಸೌಖ್ಯದಿಂದ ನಿಧನ ಸುಳ್ಯ :…
ಬ್ರಹ್ಮಾವರ: ತಲೆ ಮೇಲೆ ತೆಂಗಿನಕಾಯಿ ಬಿದ್ದು ಒಂದೂವರೆ ವರ್ಷದ ಮಗು ಮೃತ್ಯು ಬ್ರಹ್ಮಾವರ: ತೆಂಗಿನ ಮರದಿಂದ ಬಿದ್ದ ತೆಂಗಿನಕಾಯಿ ತಲೆಗೆ…