ಉಡುಪಿ: ಬಿಜೆಪಿ ಸರ್ಕಾರದ ಆಡಳಿತದಲ್ಲಿ ಸೇರಿದಂತೆ ಯಾವುದೇ ಅಭಿವೃದ್ಧಿ ಕಾಮಗಾರಿ ಆಗಬೇಕಾದ್ರೆ ಮೊದಲು 40 ಪರ್ಸೆಂಟ್ ಕಮಿಷನ್ ಪಾವತಿಸಬೇಕು. ಆದಾದ ಬಳಿಕವೇ ಕಾಮಗಾರಿಗೆ ಎಂದು ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಆರೋಪಿಸಿದರು.
ಕಾಪು ಬ್ಲಾಕ್ ಕಾಂಗ್ರೆಸ್ ವತಿಯಿಂದ ಕಾಪು ವಿಧಾನಸಭಾ ಕ್ಷೇತ್ರಾದ್ಯಂತ ಹಮ್ಮಿಕೊಳ್ಳಲಾದ ಕರಾವಳಿ ಪ್ರಜಾಧ್ವನಿ ಯಾತ್ರೆಯ ಪ್ರಯುಕ್ತ ಆತ್ರಾಡಿಯಲ್ಲಿ ನಡೆದ ಸಮಾರಂಭದಲ್ಲಿ ಮಾತನಾಡಿದರು. ಯಾವುದೇ ಸರಕಾರಿ ಕಚೇರಿಗಳಿಗೆ ಹೋಗಬೇಕಾದ್ರೂ ದಲ್ಲಾಳಿಗಳ ಮೂಲಕವೇ ವ್ಯವಹರಿಸಬೇಕಾದ ಸ್ಥಿತಿ ನಿರ್ಮಾಣ ಆಗಿದೆ. ಉತ್ಸವಗಳನ್ನು ಮಾಡುವ ಮೂಲಕ ಜನರ ತೆರಿಗೆಯ ಹಣವನ್ನು ಲೂಟಿ ಹೊಡೆಯುವ ಕಾರ್ಯ ಆಗುತ್ತಿದೆ ಎಂದು ವಾಗ್ದಾಳಿ ನಡೆಸಿದರು.
ಎಐಸಿಸಿ ಕಾರ್ಯದರ್ಶಿ ಹಾಗೂ ಮೈಸೂರು ವಿಭಾಗೀಯ ಉಸ್ತುವಾರಿ ರೋಝಿ ಜಾನ್, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಕಾಪು ಉತ್ತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಂತೋಷ್ ಕುಲಾಲ್, ಮುಖಂಡರಾದ ಇಸ್ಮಾಯಿಲ್ ಆತ್ರಾಡಿ, ಹರೀಶ್ ಹೆಗ್ಡೆ, ಗೀತಾ ವಾಗ್ಳೆ, ಬಾಬಣ್ಣ ನಾಯಕ್, ನವೀನ್ ಸಾಲ್ಯಾನ್ ಮೊದಲಾದವರು ಉಪಸ್ಥಿತರಿದ್ದರು. ಸುಧೀರ್ ಪಟ್ಲ ಸ್ವಾಗತಿಸಿದರು. ಲಕ್ಷ್ಮೀನಾರಾಯಣ ಪ್ರಭು ಕಾರ್ಯಕ್ರಮ ನಿರೂಪಿಸಿದರು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…