Featured

ಉಡುಪಿ: ಯಾವುದೇ ರೀತಿಯ ಅಕ್ರಮ ಚಟುವಟಿಕೆಗಳ ಬಗ್ಗೆ ಮಾಹಿತಿ ಇದ್ದರೆ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿ : ನೂತನ ಎಸ್ಪಿ ಹರಿ ರಾಮ್ ಶಂಕರ್ – vishwanews24

ಉಡುಪಿ: ಕೋಮು ಸೌಹಾರ್ದಕ್ಕೆ ಧಕ್ಕೆಯಾಗಲು ಅವಕಾಶ ನೀಡಬಾರದು: ನೂತನ ಎಸ್ಪಿ ಹರಿ ರಾಮ್ ಶಂಕರ್

ಉಡುಪಿ: ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಹರಿರಾಮ್ ಶಂಕರ್ ಶುಕ್ರವಾರ ಬೆಳಗ್ಗೆ ಅಧಿಕಾರ ಸ್ವೀಕರಿಸಿದರು. ನಿರ್ಗಮನ ಎಸ್ಪಿ ಡಾ.ಅರುಣ್ ಕೆ. ಅವರು ಹರಿರಾಮ್ ರಿಗೆ ಅಧಿಕಾರ ಹಸ್ತಾಂತರಿಸಿದರು.

ಅಧಿಕಾರ ಸ್ವೀಕರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯ ಜನತೆ ಯಾವುದೇ ರೀತಿಯಲ್ಲಿ ಕೋಮು ಸೌಹಾರ್ದಕ್ಕೆ ಧಕ್ಕೆಯಾಗಲು ಅವಕಾಶ ನೀಡಬಾರದು.ಅಂತಹ ಯಾವುದೇ ಘಟನೆಗಳು ಸಂಭವಿಸದಿರಲು ಪೊಲೀಸರೊಂದಿಗೆ ಕೈಜೋಡಿಸಬೇಕು. ಆ ತರಹದ ಮಾಹಿತಿ ಇದ್ದರೆ ತಕ್ಷಣ ಮಾಹಿತಿ ನೀಡಿ. ಯಾವುದೇ ರೀತಿಯ ಅಕ್ರಮ ಚಟುವಟಿಕೆಗಳ ಬಗ್ಗೆ ಸಿಕ್ಕರೂ ತಕ್ಷಣ ಪೊಲೀಸರೊಂದಿಗೆ ಮಾಹಿತಿ ಹಂಚಿಕೊಳ್ಳಿ ಎಂದು ವಿನಂತಿಸಿದ್ದಾರೆ.

ಕಳೆದ ಸುಮಾರು 20 ತಿಂಗಳಿನಿಂದ ಉಡುಪಿ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕಾರ್ಯನಿರ್ವಹಿಸುತಿದ್ದ ಡಾ.ಅರುಣ್ ಕೆ. ಅವರನ್ನು ದ. ಕನ್ನಡ ಜಿಲ್ಲೆಯ ಎಸ್ಪಿಯಾಗಿ ರಾಜ್ಯ ಸರಕಾರ ವರ್ಗಾವಣೆ ಮಾಡಿದೆ. ತೆರವಾದ ಸ್ಥಾನಕ್ಕೆ ಪೊಲೀಸ್ ಇಂಟಲಿಜೆನ್ಸ್ ವಿಭಾಗದ ಎಸ್ಪಿಯಾಗಿ ಕಾರ್ಯನಿರ್ವಹಿಸುತ್ತಿರುವ ಹರಿರಾಮ್ ಶಂಕರ್ ರನ್ನು ನಿಯುಕ್ತಿ ಗೊಳಿಸಿ ಸರಕಾರ ಗುರುವಾರ ಆದೇಶಿಸಿತ್ತು. ಅದರಂತೆ ಅವರಿಂದು ಅಧಿಕಾರ ಸ್ವೀಕರಿಸಿದ್ದಾರೆ.

ಕೇರಳದ ತ್ರಿಶೂರ್ ನ ಹರಿರಾಮ್ ಶಂಕರ್, ಕಲ್ಲಿಕೋಟೆ ಎನ್ಐಟಿಯಿಂದ ಮೆಕ್ಯಾನಿಕಲ್ ಇಂಜಿನಿಯರಿಂಗ್ ಪದವಿ ಪಡೆದಿದ್ದಾರೆ. 2016ರಲ್ಲಿ ತಮ್ಮ ಐದನೇ ಪ್ರಯತ್ನದಲ್ಲಿ ಅವರು ಯುಪಿಎಸ್ಸಿಯಲ್ಲಿ 145ನೇ ರ್ಯಾಂಕ್ ಪಡೆದು ತಾವು ಬಯಸಿದ ಐಪಿಎಸ್ ಹುದ್ದೆಗೆ ಆಯ್ಕೆಯಾಗಿದ್ದರು.

ಹರಿರಾಮ್ ಶಂಕರ್ ಅವರು ಬೆಳಗಾವಿ, ಕುಂದಾಪುರ ಉಪವಿಭಾಗದ ಎಸಿಪಿ, ಮಂಗಳೂರಿನಲ್ಲಿ ಡಿಸಿಪಿ, ಹಾಸನದಲ್ಲಿ ಎಸ್ಪಿಯಾಗಿಯೂ ಕಾರ್ಯನಿರ್ವಹಿಸಿದ್ದರು.

Vishwa News 24

Recent Posts

ನಾಳಿನ ‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ – vishwanews24

‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…

52 minutes ago

ನಟ ಪ್ರಕಾಶ್ ರಾಜ್ ಮತದಾರರ ಪಟ್ಟಿ ಹೆಸರು ಕೈಬಿಟ್ಟ ಆರೋಪ ಸುಳ್ಳು: ಬಿಬಿಎಂಪಿ ಸ್ಪಷ್ಟನೆ – vishwanews24

ವೋಟರ್ ಲಿಸ್ಟ್​ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್​ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…

1 hour ago

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ. ಕೆ. ಶಿವಕುಮಾರ್ – vishwanews24

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ ಅವರ ಸಚಿವ ಸಂಪುಟಕ್ಕೆ…

1 hour ago

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ – vishwanews24

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ ಹೊಸದಿಲ್ಲಿ: ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್. ಚಂದ್ರಶೇಖರನ್ ಅವರು…

1 hour ago

ಉಡುಪಿ:  ಆ.14 ರಂದು ನೇರ ಸಂದರ್ಶನ – vishwanews24

ಉಡುಪಿ:  ಆ.14 ರಂದು ನೇರ ಸಂದರ್ಶನ ಉಡುಪಿ: ನಗರದ ನಿಟ್ಟೂರು ರಾ.ಹೆ 66 ರ ಆಭರಣ ಮೋಟಾರ್ಸ್ ಪ್ರೆöÊವೇಟ್ ಲಿ.ನಲ್ಲಿ…

2 hours ago

ಮೀನುಗಾರರಿಗೆ ಸಬ್ಸಿಡಿ ರಹಿತ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ – vishwanews24

ಮೀನುಗಾರರಿಗೆ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ ಕುಂದಾಪುರ: ರಾಜ್ಯದ ಸಾಂಪ್ರದಾಯಿಕ ನಾಡ ದೋಣಿ…

2 hours ago