ಉಡುಪಿ: ಪ್ರಿಯತಮೆಯೊಂದಿಗೆ ಮೊಬೈಲ್ನಲ್ಲಿ ಮಾತನಾಡುತ್ತಿದ್ದ ಯುವಕ ಕ್ಷಣಾರ್ಧದಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಕುಂಜಿಬೆಟ್ಟು ನಿವಾಸಿ ರಾಜು ಅವರ ಪುತ್ರ ರಂಜಿತ್ (28) ಮೃತರು.
ಜ.29ರಂದು ರಂಜಿತ್ ಅವರು ಪೈಂಟಿಂಗ್ ಕೆಲಸ ಮುಗಿಸಿ ಮನೆಗೆ ಬಂದು ಮನೆಯವರೊಟ್ಟಿಗೆ ಮಾತನಾಡಿದ್ದರು. ಅನಂತರ ತಾನು ಪ್ರೀತಿಸುತ್ತಿದ್ದ ಹುಡುಗಿ ಪ್ರೀತಿ ಎಂಬವರ ಜತೆ ಫೋನಿನಲ್ಲಿ ಮಾತನಾಡುತ್ತಾ ಅವರ ರೂಮಿನೊಳಗೆ ಹೋಗಿದ್ದಾರೆ. ರಾತ್ರಿ ವೇಳೆ ಮನೆಯ ವಾಟರ್ ಟ್ಯಾಂಕಿನ ನೀರು ತುಂಬಿ ಕೆಳಗೆ ಬೀಳುತ್ತಿದ್ದುದರಿಂದ ಅವರ ತಂದೆ ವಾಟರ್ ಟ್ಯಾಂಕಿನ ವಾಲ್ ನ್ನು ಆಫ್ ಮಾಡಲು ಹೋಗುವಾಗ ರಂಜಿತ್ ಅವರ ರೂಮಿನ ಕಿಟಕಿ ತೆರೆದು ನೋಡಿದ್ದಾರೆ. ಈ ವೇಳೆ ಆತ ಫ್ಯಾನಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಕಂಡುಬಂದಿದ್ದಾನೆ. ಕೂಡಲೇ ಆತನನ್ನು ಕೆಳಗೆ ಇಳಿಸಿ ಚಿಕಿತ್ಸೆಗಾಗಿ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ವೈದ್ಯರು ಆತನಿಗೆ 20 ನಿಮಿಷ ಶೂಶ್ರುಷೆ ಮಾಡಿದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ. ಈ ಸಾವಿನಲ್ಲಿ ಸಂಶಯವಿರುವುದಾಗಿ ಆತನ ಅಣ್ಣ ರಕ್ಷಿತ್ ಅವರು ನಗರ ಠಾಣೆಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ. ಪ್ರಕರಣ ದಾಖಲಾಗಿದೆ.
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…
ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…
ಟೈಮಿಂಗ್ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್ಪ್ರೆಸ್ ಬಸ್ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…
ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…
ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…