ಉಡುಪಿ: ಶಿಕ್ಷಣ ಕ್ಷೇತ್ರದಲ್ಲಿ ರಾಜ್ಯ ಕಾಂಗ್ರೆಸ್ ಸರಕಾರದ ಸಾಧನೆ ಶೂನ್ಯ. ಮೂಲಭೂತ ಸೌಕರ್ಯಗಳನ್ನು ನೀಡದೆ ಅನುದಾನಿತ ಶಾಲೆಗಳನ್ನು ಮುಚ್ಚುವ ಹುನ್ನಾರ ಮಾಡಲಾಗುತ್ತಿದೆ ಎಂದು ವಿಧಾನ ಪರಿಷತ್ ನೈರುತ್ಯ ಶಿಕ್ಷಕರ ಕ್ಷೇತ್ರದ ಎನ್ಡಿಎ ಮೈತ್ರಿ ಅಭ್ಯರ್ಥಿ ಬೋಜೆಗೌಡ ಹೇಳಿದ್ದಾರೆ.
ಉಡುಪಿ ಬಿಜೆಪಿ ಕಚೇರಿಯಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅನುದಾನಿತ ಶಾಲಾ ಶಿಕ್ಷಕರಿಗೆ ಕಳೆದ ಮೂರು ತಿಂಗಳಿನಿಂದ ಸಂಬಳ ಕೊಟ್ಟಿಲ್ಲ. ಈ ಶಾಲೆಗಳಿಗೆ ಶಿಕ್ಷಕರ ನೇಮಕ ಮಾಡುತ್ತಿಲ್ಲ. ಆದುದರಿಂದ ಮುಂದಿನ ದಿನಗಳಲ್ಲಿ ಅನುದಾನಿತ ಶಾಲೆಗಳ ಶಿಕ್ಷಕರ ಕೊರತೆ ನೀಗಿಸುವ ನಿಟ್ಟಿ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದರು.
ಶಿಕ್ಷಕರಿಗೆ ಹಳೆ ಪಿಂಚಣಿ ಯೋಜನೆ ಜಾರಿಗೆ ತರುವಂತೆ ಸುಪ್ರೀಂ ಕೋರ್ಟ್ ಆದೇಶ ನೀಡಿದ್ದು, ಇದರಲ್ಲಿ ಸರಕಾರದ ಪಾತ್ರ ಏನು ಇಲ್ಲ. ಹಾಗಾಗಿ ಈ ಯೋಜನೆಯನ್ನು ಕೂಡಲೇ ಅನುಷ್ಠಾನಕ್ಕೆ ತರಬೇಕು. ಕನ್ನಡವನ್ನು ಆಡಳಿತ ಭಾಷೆಯನ್ನಾಗಿಸುವ ಮೊದಲು ರಾಜ್ಯ ಸರಕಾರ ಕನ್ನಡ ಶಾಲೆಗಳನ್ನು ಉಳಿಸುವ ಕಾರ್ಯ ಮಾಡಬೇಕು ಎಂದು ಅವರು ತಿಳಿಸಿದರು.
ನೈಋತ್ಯ ಪದವೀಧರರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಧನಂಜಯ್ ಸರ್ಜಿ ಮಾತನಾಡಿ, ಇಂದು ಯುವಜನತೆ ನಿರುದ್ಯೋಗ ಸಮಸ್ಯೆಯಿಂದ ತೊಂದರೆ ಅನುಭವಿಸುತ್ತಿದ್ದಾರೆ. ಆದುದರಿಂದ ಕೌಶಲ್ಯಾಭಿವೃದ್ಧಿ ಕೇಂದ್ರಗಳ ಸ್ಥಾಪನೆಗೆ ಹೆಚ್ಟಿನ ಒತ್ತು ನೀಡಲಾಗುವುದು. ಕ್ಷೇತ್ರದ ಯುವಜನತೆಯ ಸಮಸ್ಯೆಗಳ ಪರಿಹಾರಕ್ಕಾಗಿ ವಿಧಾನ ಪರಿಷತ್ನಲ್ಲಿ ಅವರ ಧ್ವನಿಯಾಗಿ ಕೆಲಸ ಮಾಡುತ್ತೇನೆ ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್, ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ಯಶ್ಪಾಲ್ ಸುವರ್ಣ, ಅರುಣ್, ಜೆಡಿಎಸ್ ಜಿಲ್ಲಾಧ್ಯಕ್ಷ ಯೋಗೀಶ್ ಶೆಟ್ಟಿ, ಬಿಜೆಪಿ ಮುಖಂಡರಾದ ಉದಯ್ ಕುಮಾರ್ ಶೆಟ್ಟಿ, ಹೆರ್ಗ ದಿನಕರ ಶೆಟ್ಟಿ, ಹರಿಕೃಷ್ಣ, ಅಶೋಕ್ ಮೂರ್ತಿ, ಕುಯಿಲಾಡಿ ಸುರೇಶ್ ನಾಯಕ್, ಮಟ್ಟಾರು ರತ್ನಾಕರ್ ಹೆಗ್ಡೆ, ಗೀತಾಂಜಲಿ ಸುವರ್ಣ, ಮುಟ್ಲುಪಾಡಿ ಸತೀಶ್ ಶೆಟ್ಟಿ ಉಪಸ್ಥಿತರಿದ್ದರು.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…