ಉಡುಪಿ: ರಾಜ್ಯ ಸರಕಾರದ ಯುವನಿಧಿ ಯೋಜನೆಗೆ ನೋಂದಣ ಚಾಲ್ತಿಯಲ್ಲಿದ್ದು, ಅರ್ಹರು ಸೇವಾ ಸಿಂಧು ಪೋರ್ಟಲ್ನಲ್ಲಿ ಆನ್ಲೈನ್ ಮೂಲಕ ನೋಂದಣ ಮಾಡಿಕೊಳ್ಳಬಹುದಾಗಿದೆ.
೨೦೨೨-೨೩ ನೇ ಹಾಗೂ ಅನಂತರದ ಸಾಲಿನಲ್ಲಿ ಪದವಿ, ಸ್ನಾತಕೋತ್ತರ ಪದವಿ (ವೃತ್ತಿಪರ ಸೇರಿದಂತೆ) ಹಾಗೂ ಯಾವುದೇ ಡಿಪ್ಲೋಮಾ ಪಡೆದು ನಿರುದ್ಯೋಗಿಯಾಗಿರುವವರು ಯುವನಿಧಿ ಯೋಜನೆಯ ಮೂಲಕ ಪ್ರತಿ ತಿಂಗಳು ಪದವೀಧರ ನಿರುದ್ಯೋಗಿಗಳಿಗೆ ರೂ ೩,೦೦೦ ಹಾಗೂ ಡಿಪ್ಲೋಮಾ ಪಡೆದ ನಿರುದ್ಯೋಗಿಗಳಿಗೆ ರೂ.೧,೫೦೦ ನೇರ ನಗದು ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುವುದು.
ಪ್ರತಿ ತಿಂಗಳು ಸ್ವಯಂ ಘೋಷಣೆ ಕಡ್ಡಾಯ : ಯುವನಿಧಿ ಯೋಜನೆಯ ಫಲಾನುಭವಿಗಳು ಪ್ರತಿ ತಿಂಗಳ ೨೫ ನೇ ತಾರೀಕಿನ ಒಳಗಾಗಿ ಆನ್ಲೈನ್ನಲ್ಲಿ ಲಾಗಿನ್ ಆಗಿ ಸ್ವಯಂ ಘೋಷಣೆ ನೀಡಬೇಕು. ಸ್ವಯಂ ಘೋಷಣೆ ನೀಡದಿದ್ದಲ್ಲಿ ಆ ತಿಂಗಳ ನೇರ ನಗದು ಖಾತೆಗೆ ಜಮೆಯಾಗುವುದಿಲ್ಲ.
ಆದ್ದರಿಂದ ಫಲಾನುಭವಿಗಳು ತಪ್ಪದೇ ಸೇವಾ ಸಿಂಧು ಪೋರ್ಟಲ್ನಲ್ಲಿ ಆನ್ಲೈನ್ ಮೂಲಕ ಪ್ರತಿ ತಿಂಗಳು ಸ್ವಯಂ ಘೋಷಣೆ ನೀಡಬೇಕು. ಹೆಚ್ಚಿನ ಮಾಹಿತಿಗಾಗಿ ಉದ್ಯೋಗಾಧಿಕಾರಿ, ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಕಛೇರಿ ಸಂಕೀರ್ಣ, ಬಿ. ಬ್ಲಾಕ್, ಮೊದಲನೆ ಮಹಡಿ, ರಜತಾದ್ರಿ, ಮಣ ಪಾಲ ಉಡುಪಿ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…