Featured

ಉಡುಪಿ: ಯುವ ಚೌಪಾಲ್ – 18ರಿಂದ 25 ವರ್ಷ ವಯೋಮಿತಿಯೊಳಗಿನ ಹೊಸ ಯುವ ಮತದಾರರ ‘ಯುವ ಸಂವಾದ : ಕಿಶೋರ್ ಕುಮಾರ್ – Vishwanews24

ಲೋಕಸಭಾ ಚುನಾವಣೆಯನ್ನು ಸಮರ್ಪಕವಾಗಿ ಎದುರಿಸಲು ಉಡುಪಿ ಜಿಲ್ಲಾ ಬಿಜೆಪಿ ಸಜ್ಜು ..

ಪಕ್ಷದ ಅಭ್ಯರ್ಥಿಯ ದೊಡ್ಡ ಅಂತರದ ಗೆಲುವಿಗೆ ಕಂಕಣಬದ್ಧರಾಗಿ ಶ್ರಮಿಸಬೇಕು : ಕಿಶೋರ್ ಕುಮಾರ್ ಕರೆ

ಉಡುಪಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ದಾರವರ ಕರೆಯಂತೆ ಫೆ.25ರಿಂದ ಮಾ.5ರ ವರೆಗೆ ಉಡುಪಿ ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ ‘ನಮೋ ಯುವ ಭಾರತ’ ಅಭಿಯಾನದಡಿ ‘ಯುವ ಚೌಪಾಲ್’, 18ರಿಂದ 25 ವರ್ಷ ವಯೋಮಿತಿಯೊಳಗಿನ ಹೊಸ ಯುವ ಮತದಾರರ ‘ಯುವ ಸಂವಾದ’ ಕಾರ್ಯಕ್ರಮ ನಡೆಯಲಿದೆ.

ಈ ಅಭಿಯಾನವು ಫೆ. 25ರಂದು ಜಿಲ್ಲೆಯ ಎಲ್ಲಾ ಮಂಡಲಗಳಲ್ಲಿ ಶಾಸಕರ ಉಪಸ್ಥಿತಿಯಲ್ಲಿ ಉದ್ಘಾಟನೆಗೊಂಡು, ಮಾ.3ರ ತನಕ ಜಿಲ್ಲೆಯ ಎಲ್ಲಾ ಗ್ರಾಮಗಳಲ್ಲಿ ನಡೆಯಲಿದೆ. ಈ ಅಭಿಯಾನದ ಮೂಲಕ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ ಜನಪರ ಯೋಜನೆಗಳು ಮತ್ತು ಸಾಧನೆಗಳ ಬಗ್ಗೆ ಹೊಸ ಯುವ ಮತದಾರರಲ್ಲಿ ಅರಿವು ಮೂಡಿಸಲಾಗುವುದು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ತಿಳಿಸಿದರು.

ಅವರು ಇಂದು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದರು.

ರಾಜ್ಯ ಬಿಜೆಪಿ ನಿರ್ದೇಶನದಂತೆ ಗ್ರಾಮ ಚಲೋ, ‘ಮೋದಿ ಮತ್ತೊಮ್ಮೆ’ ಗೋಡೆ ಬರಹ, ಲಾಭಾರ್ಥಿಗಳ ಸಂಪರ್ಕ ಮತ್ತು ಶಕ್ತಿ ವಂದನ ಅಭಿಯಾನಗಳನ್ನು ಪರಿಣಾಮಕಾರಿಯಾಗಿ ಕಾರ್ಯಗತಗೊಳಿಸಲು ಯೋಜನೆ ರೂಪಿಸಲಾಗಿದೆ.

ಪಕ್ಷದ ಯೋಜನೆಯಂತೆ ಮಾ.3ರಂದು ಉಡುಪಿ ಜಿಲ್ಲೆಯ ನಿಗದಿತ ಕಾರ್ಯಕರ್ತರು ಉಡುಪಿ ರೈಲ್ವೆ ನಿಲ್ದಾಣದಿಂದ ಅಯೋಧ್ಯೆಯ ಶ್ರೀರಾಮ ಮಂದಿರದ ದರ್ಶನಕ್ಕೆ ತೆರಳಲ್ಲಿದ್ದಾರೆ.

ಲೋಕಸಭಾ ಚುನಾವಣೆಯನ್ನು ಸಮರ್ಪಕವಾಗಿ ಎದುರಿಸಲು ಉಡುಪಿ ಜಿಲ್ಲಾ ಬಿಜೆಪಿ ಸಜ್ಜಾಗಿದೆ. ಈಗಾಗಲೇ ಜಿಲ್ಲಾ ಲೋಕಸಭಾ ಚುನಾವಣಾ ಕಾರ್ಯಾಲಯವು ಬಿಜೆಪಿ ಜಿಲ್ಲಾ ಕಛೇರಿಯ ಬಳಿ ಇರುವ ಮಾಂಡವಿ ಟ್ರೇಡ್ ಸೆಂಟರ್ ಸಂಕೀರ್ಣದ ತಳ ಅಂತಸ್ತಿನಲ್ಲಿ ಉದ್ಘಾಟನೆಗೊಂಡಿದೆ. ಮುಂದಿನ ಕಾರ್ಯ ಯೋಜನೆಗಳು ಪ್ರಗತಿಯಲ್ಲಿವೆ.

ಉಡುಪಿ ಜಿಲ್ಲಾ ಬಿಜೆಪಿಯ ನೂತನ ತಂಡ ಹಾಗೂ ವಿವಿಧ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರು ಸಂಘಟಿತ ಪ್ರಯತ್ನದ ಮೂಲಕ ಪಕ್ಷ ನೀಡಿರುವ ಎಲ್ಲಾ ಅಭಿಯಾನಗಳನ್ನು ಜಿಲ್ಲೆಯಾದ್ಯಂತ ಪರಿಣಾಮಕಾರಿಯಾಗಿ ಕಾರ್ಯಗತಗೊಳಿಸುವ ಜೊತೆಗೆ ಸದೃಢ ಪಕ್ಷ ಸಂಘಟನೆಯ ಮೂಲಕ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಯ ದೊಡ್ಡ ಅಂತರದ ಗೆಲುವಿಗೆ ಕಂಕಣಬದ್ಧರಾಗಿ ಶ್ರಮಿಸಬೇಕು ಎಂದು ಅವರು ಕರೆ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪ್ರ. ಕಾರ್ಯದರ್ಶಿಗಳಾದ ಕೆ.ರಾಘವೇಂದ್ರ ಕಿಣಿ, ರೇಷ್ಮಾ ಉದಯ್ ಶೆಟ್ಟಿ, ಯುವ ಮೋರ್ಚಾ ರಾಜ್ಯ ಕಾರ್ಯದರ್ಶಿ ವಿಖ್ಯಾತ್ ಶೆಟ್ಟಿ, ಜಿಲ್ಲಾ ವಕ್ತಾರ ವಿಜಯಕುಮಾರ್ ಉದ್ಯಾವರ, ಮಾಧ್ಯಮ ಸಂಚಾಲಕ ಶ್ರೀನಿಧಿ ಹೆಗ್ಡೆ, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಶಿವಕುಮಾರ್ ಅಂಬಲಪಾಡಿ, ಜಿಲ್ಲಾ ಯುವ ಮೋರ್ಚಾ ಉಪಾಧ್ಯಕ್ಷ ಅಕ್ಷಿತ್ ಶೆಟ್ಟಿ ಹೆರ್ಗ ಉಪಸ್ಥಿತರಿದ್ದರು.

Vishwa News 24

Recent Posts

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

11 minutes ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

19 minutes ago

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ – vishwanews24

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…

39 minutes ago

80ನೇ ಸ್ವಾತಂತ್ರ್ಯ ದಿನಾಚರಣೆ : ಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ಡಿಕೆಶಿ ಧ್ವಜಾರೋಹಣ – vishwanews24

80ನೇ ಸ್ವಾತಂತ್ರ್ಯ ದಿನಾಚರಣೆ : ಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದ ಡಿಕೆಶಿ ಬೆಂಗಳೂರು: ಇಡೀ ದೇಶವೇ ಇಂದು 80ನೇ…

57 minutes ago

80ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ : ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ – vishwanews24

80ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ : ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ ಬೆಂಗಳೂರು: ಇಡೀ ದೇಶವೇ ಇಂದು 80ನೇ ಸ್ವಾತಂತ್ರ್ಯ…

1 hour ago

ಉಡುಪಿ: 80ನೇ ಸ್ವಾತಂತ್ರ್ಯೋತ್ಸವ; ಧ್ವಜಾರೋಹಣ ನೆರವೇರಿಸಿದ ಉಸ್ತುವಾರಿ ಸಚಿವ ರಿಝ್ವಾನ್ ಅರ್ಷದ್‌ – vishwanews24

ಉಡುಪಿ: 80ನೇ ಸ್ವಾತಂತ್ರ್ಯೋತ್ಸವ; ಧ್ವಜಾರೋಹಣ ನೆರವೇರಿಸಿದ ಉಸ್ತುವಾರಿ ಸಚಿವ ರಿಝ್ವಾನ್ ಅರ್ಷದ್‌ ಉಡುಪಿ: ಉಡುಪಿ ಜಿಲ್ಲಾಡಳಿತದ ವತಿಯಿಂದ ಅಜ್ಜರಕಾಡು ಮಹಾತ್ಮಾಗಾಂಧಿ…

1 hour ago