ಉಡುಪಿ: ಯುವ ಮತದಾರರಲ್ಲಿ ಮತದಾನದ ಬಗ್ಗೆ ಜಾಗೃತಿ ಮೂಡಿಸಿ : ಜಿಲ್ಲಾಧಿಕಾರಿ ಜಗದೀಶ್ -Vishwanews24

ಉಡುಪಿ: ಯುವ ಮತದಾರರಲ್ಲಿ ಮತದಾನದ ಬಗ್ಗೆ ಜಾಗೃತಿ ಮೂಡಿಸಲು ಜನವರಿ 25 ರಂದು ಉಡುಪಿ ಜಿಲ್ಲೆಯ ಎಲ್ಲಾ ತಾಲೂಕುಗಳು ಮತ್ತು ಬೂತ್ ಗಳಲ್ಲಿ ಜಾಥಾ ಮತ್ತು ಪ್ರತಿಜ್ಞಾ ಬೋಧನೆಗಳನ್ನು ಹಮ್ಮಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಹೇಳಿದರು.

ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆಯ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.
ಯುವ ಮತದಾರರಿಗೆ ಮತದಾನದ ಬಗ್ಗೆ ಜಾಗೃತಿ ಮೂಡಿಸಲು ಅಧಿಕಾರಿಗಳಿಗೆ ಸೂಚಿಸಿದ ಜಿಲ್ಲಾಧಿಕಾರಿ, ಹೊಸದಾಗಿ ಮತದಾರರ ಪಟ್ಟಿಯಲ್ಲಿ ನೋಂದಾಯಿತರಾದವರ ಎಪಿಕ್ ಕಾರ್ಡನ್ನು ಮತದಾರರ ದಿನಾಚರಣೆಯಂದೇ ವಿತರಣೆ ಮಾಡಲು 50 ಜನ ಯುವ ಮತದಾರರನ್ನು ಗುರುತಿಸಲು ಹಾಗೂ ಜನವರಿ 24 ರಂದು ಮತದಾರರ ದಿನದ ಪ್ರತಿಜ್ಞಾ ವಿಧಿಯನ್ನು ಎಲ್ಲಾ ಕಡೆಯೂ ಬೋಧಿಸಲು ತಿಳಿಸಿದರು.

ಜನವರಿ 24 ರಂದು ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಪ್ರತಿಜ್ಞಾ ವಿಧಿ ಬೋಧಿಸುವ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಕಚೇರಿಯ ಎಲ್ಲಾ ಸಿಬ್ಬಂದಿಗಳೂ ಕಡ್ಡಾಯವಾಗಿ ಹಾಜರಿರಬೇಕು. ಜನವರಿ 25 ರಂದು ಉಡುಪಿ ಪುರಭವನದಲ್ಲಿ ನಡೆಯುವ ಮತದಾನ ದಿನಾಚರಣೆ ಕಾರ್ಯಕ್ರಮವನ್ನು ಕ್ಲಪ್ತ ಸಮಯಕ್ಕೆ ಪ್ರಾರಂಭಿಸಿ, ಉತ್ತಮ ರೀತಿಯಲ್ಲಿ ನಿರ್ವಹಿಸಬೇಕು. ಎಲ್ಲಾ ಬೂತ್ಗಾಳಲ್ಲಿಯೂ ಮತದಾನದ ಬಗ್ಗೆ ಜಾಗೃತಿ ಮೂಡಿಸುವ ಬ್ಯಾನರ್ಗತಳನ್ನು ಅಳವಡಿಸಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.

ಮತದಾನದ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮದ ಅಂಗವಾಗಿ ಎಲ್ಲಾ ಶಾಲೆಗಳು, ಪದವಿ ಪೂರ್ವ ಮತ್ತು ಪದವಿ ಕಾಲೇಜುಗಳಲ್ಲಿ ಪ್ರಬಂಧ ಸ್ಪರ್ಧೆಗಳನ್ನು ಈಗಾಗಲೇ ಹಮ್ಮಿಕೊಳ್ಳಲಾಗಿದ್ದು, ಮತದಾರರ ದಿನಾಚರಣೆಯಂದು ವಿಜೇತರಿಗೆ ಬಹುಮಾನವನ್ನು ನೀಡಲಾಗುವುದು. ಉತ್ತಮ ಇ.ಎಲ್.ಸಿ ಮತ್ತು ಸಿ.ಜೆ.ಸಿಗಳನ್ನು ಗೌರವಿಸಲಾಗುವುದು ಮತ್ತು ಅತಿಕ್ಲಿಷ್ಟಕರ ಸನ್ನಿವೇಶಗಳಲ್ಲಿಯೂ ಮತದಾನ ಮಾಡಿರುವ 100 ವಯಸ್ಸು ಮೇಲ್ಪಟ್ಟ ಮತದಾರರನ್ನು ಸನ್ಮಾನಿಸಲಾಗುವುದು ಎಂದು ಸಾರ್ವಜನಿಕ ಶಿಕ್ಷಣ ಇಲಾಖಾಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.

ಎಲ್ಲಾ ತಾಲೂಕುಗಳ ತಹಶೀಲ್ದಾರರು ಯು.ಎಲ್.ಬಿ ಗಳ ಜೊತೆ ಸಮಾಲೋಚನೆ ನಡೆಸಬೇಕು ಮತ್ತು ಈ ಎಲ್ಲಾ ಕಾರ್ಯಕ್ರಮಗಳು ಯಶಸ್ವಿಯಾಗಲು ನಗರಸಭೆ ಅಧಿಕಾರಿಗಳು ಸಹಕರಿಸಬೇಕು ಎಂದು ಜಿಲ್ಲಾಧಿಕಾರಿಗಳು ಸೂಚಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಸಾರ್ವಜನಿಕ ಶಿಕ್ಷಣ ಇಲಾಖಾಧಿಕಾರಿಗಳು, ತಾಲೂಕು ತಹಶೀಲ್ದಾರ್ಗುಳು ಮತ್ತಿತರರು ಉಪಸ್ಥಿತರಿದ್ದರು.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

3 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

3 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

3 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

3 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

4 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

4 hours ago