ಉಡುಪಿ : ರಂಗ ವರ್ಣದಲ್ಲಿ ಕನಕ ಗೋಪುರ ಝಗಮಗ
ಉಡುಪಿ: ಇಲ್ಲಿನ ರಥಬೀದಿಯ ಕನಕ ಗೋಪುರ ತ್ರಿವರ್ಣಗಳಿಂದ ಝಗಮಗಿಸುತ್ತಿದೆ. ರಾಷ್ಟ್ರಧ್ವಜದ ಮೂರು ಬಣ್ಣಗಳಾದ ಕೇಸರಿ, ಬಿಳಿ ಮತ್ತು ಹಸಿರು ವರ್ಣದಲ್ಲಿ ಶೋಭಿಸುತ್ತಿದೆ. ಸ್ವಾತಂತ್ರ್ಯ ಅಮೃತ ಮಹೋತ್ಸವ ಅಂಗವಾಗಿ ಪರ್ಯಾಯ ಕೃಷ್ಣಾಪುರ ಶ್ರೀಕೃಷ್ಣ ಮಠ ಆಶ್ರಯದಲ್ಲಿ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ಉಡುಪಿ ವಲಯ ನೇತೃತ್ವದಲ್ಲಿ ಪಂಚಮಿ ಟ್ರಸ್ಟ್ ಮತ್ತು ಗಾಂಧಿ ಹಾಸ್ಪಿಟಲ್ ಸಹಯೋಗದೊಂದಿಗೆ ಕೃಷ್ಣ ಮಠದ ಕನಕ ಗೋಪುರ ತ್ರಿವರ್ಣದೊಂದಿಗೆ ಝಗಮಗಿಸುವಂತೆ ಮಾಡಲಾಗಿದ್ದು, ಶನಿವಾರದಿಂದ ಸೋಮವಾರ ವರೆಗೆ ಪ್ರತಿದಿನ ಸಂಜೆ 6.30ರಿಂದ ರಾತ್ರಿ 10ರ ವರೆಗೆ ವಿಶೇಷ ವಿದ್ಯುದ್ದೀಪಗಳ ಶೃಂಗಾರದಿಂದ ಕಂಗೊಳಿಸಲಿದೆ.
ಕನಕ ಗೋಪುರದ ದೀಪಾಲಂಕಾರವನ್ನು ಶನಿವಾರ ಉದ್ಘಾಟಿಸಲಾಗಿದ್ದು, ಪರ್ಯಾಯ ಕೃಷ್ಣಾಪುರ ಮಠಾಧೀಶ ಶ್ರೀ ವಿದ್ಯಾಸಾಗರತೀರ್ಥ ಶ್ರೀಪಾದರು ಸ್ವಿಚ್ ಆನ್ ಮಾಡುವ ಮೂಲಕ ತ್ರಿವರ್ಣ ದೀಪಾಲಂಕಾರಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಗಾಂಧಿ ಆಸ್ಪತ್ರೆ ಆಡಳಿತ ನಿರ್ದೇಶಕ ಡಾ. ಹರಿಶ್ಚಂದ್ರ, ನಗರಸಭಾ ಸದಸ್ಯ ವಿಜಯ ಕೊಡವೂರು, ರೋಟರಿ ಉಡುಪಿ ರಾಯಲ್ ಅಧ್ಯಕ್ಷ ಪ್ರೊ. ಬಾಲಕೃಷ್ಣ ಮದ್ದೋಡಿ, ಕಾರ್ಯಕ್ರಮ ಸಂಚಾಲಕ ಆಸ್ಟ್ರೋ ಮೋಹನ್, ಉಪಾಧ್ಯಕ್ಷ ಪ್ರವೀಣ್ ಹೂಡೆ, ಕಸಾಪ ಉಡುಪಿ ತಾಲೂಕು ಘಟಕಾಧ್ಯಕ್ಪ ರವಿರಾಜ್ ಹೆಚ್.ಪಿ ಛಾಯಾಗ್ರಾಹಕರ ಸಂಘದ ಪದಾಧಿಕಾರಿಗಳು ಮೊದಲಾದವರಿದ್ದರು.
ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ .. ಟೋಲ್ ಗೇಟ ನ್ನು ತಕ್ಷಣ ತೆರವುಗೊಳಿಸಬೇಕು ಎಂದು ಆಗ್ರಹ 15…
ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಿ ಪರೀಕ್ಷೆ ಬರೆಯುವಂತಿಲ್ಲ : ಪ್ರಿಯಾಂಕ ಖರ್ಗೆ ಸ್ಪಷ್ಟನೆ ಬೆಂಗಳೂರು: ಕರ್ನಾಟಕದ ಪೊಲೀಸ್…
ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ. ವಿಶೇಷ ಸೇನಾ…
ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ :ಭಕ್ತರಿಗೆ ಡ್ರಮ್ಗಳಲ್ಲಿ ಪರ್ಯಾಯ ಸ್ನಾನ ವ್ಯವಸ್ಥೆ ಕಡಬ:ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಿರಂತರ ಸುರಿಯುತ್ತಿರುವ…
ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ ಉಡುಪಿ: ಜೂನ್ ಮತ್ತು ಜುಲೈ…
ಕುಂದಾಪುರ ರಿಚರ್ಡ್ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ ಕುಂದಾಪುರ: ಇಲ್ಲಿನ ಚರ್ಚ್ ರಸ್ತೆಯ ಸಮೀಪ ಗುರುವಾರ ತಡರಾತ್ರಿ…