Featured

ಉಡುಪಿ : ರಂಗ ವರ್ಣದಲ್ಲಿ ಕನಕ ಗೋಪುರ ಝಗಮಗ  -Vishwanews24

ಉಡುಪಿ : ರಂಗ ವರ್ಣದಲ್ಲಿ ಕನಕ ಗೋಪುರ ಝಗಮಗ

ಉಡುಪಿ: ಇಲ್ಲಿನ ರಥಬೀದಿಯ ಕನಕ ಗೋಪುರ ತ್ರಿವರ್ಣಗಳಿಂದ ಝಗಮಗಿಸುತ್ತಿದೆ. ರಾಷ್ಟ್ರಧ್ವಜದ ಮೂರು ಬಣ್ಣಗಳಾದ ಕೇಸರಿ, ಬಿಳಿ ಮತ್ತು ಹಸಿರು ವರ್ಣದಲ್ಲಿ ಶೋಭಿಸುತ್ತಿದೆ. ಸ್ವಾತಂತ್ರ್ಯ ಅಮೃತ ಮಹೋತ್ಸವ ಅಂಗವಾಗಿ ಪರ್ಯಾಯ ಕೃಷ್ಣಾಪುರ ಶ್ರೀಕೃಷ್ಣ ಮಠ ಆಶ್ರಯದಲ್ಲಿ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ಉಡುಪಿ ವಲಯ ನೇತೃತ್ವದಲ್ಲಿ ಪಂಚಮಿ ಟ್ರಸ್ಟ್ ಮತ್ತು ಗಾಂಧಿ ಹಾಸ್ಪಿಟಲ್ ಸಹಯೋಗದೊಂದಿಗೆ ಕೃಷ್ಣ ಮಠದ ಕನಕ ಗೋಪುರ ತ್ರಿವರ್ಣದೊಂದಿಗೆ ಝಗಮಗಿಸುವಂತೆ ಮಾಡಲಾಗಿದ್ದು, ಶನಿವಾರದಿಂದ ಸೋಮವಾರ ವರೆಗೆ ಪ್ರತಿದಿನ ಸಂಜೆ 6.30ರಿಂದ ರಾತ್ರಿ 10ರ ವರೆಗೆ ವಿಶೇಷ ವಿದ್ಯುದ್ದೀಪಗಳ ಶೃಂಗಾರದಿಂದ ಕಂಗೊಳಿಸಲಿದೆ.

ಕನಕ ಗೋಪುರದ ದೀಪಾಲಂಕಾರವನ್ನು ಶನಿವಾರ ಉದ್ಘಾಟಿಸಲಾಗಿದ್ದು, ಪರ್ಯಾಯ ಕೃಷ್ಣಾಪುರ ಮಠಾಧೀಶ ಶ್ರೀ ವಿದ್ಯಾಸಾಗರತೀರ್ಥ ಶ್ರೀಪಾದರು ಸ್ವಿಚ್ ಆನ್ ಮಾಡುವ ಮೂಲಕ ತ್ರಿವರ್ಣ ದೀಪಾಲಂಕಾರಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಗಾಂಧಿ ಆಸ್ಪತ್ರೆ ಆಡಳಿತ ನಿರ್ದೇಶಕ ಡಾ. ಹರಿಶ್ಚಂದ್ರ, ನಗರಸಭಾ ಸದಸ್ಯ ವಿಜಯ ಕೊಡವೂರು,  ರೋಟರಿ ಉಡುಪಿ ರಾಯಲ್ ಅಧ್ಯಕ್ಷ ಪ್ರೊ. ಬಾಲಕೃಷ್ಣ ಮದ್ದೋಡಿ,  ಕಾರ್ಯಕ್ರಮ ಸಂಚಾಲಕ ಆಸ್ಟ್ರೋ ಮೋಹನ್, ಉಪಾಧ್ಯಕ್ಷ ಪ್ರವೀಣ್ ಹೂಡೆ, ಕಸಾಪ ಉಡುಪಿ ತಾಲೂಕು ಘಟಕಾಧ್ಯಕ್ಪ ರವಿರಾಜ್ ಹೆಚ್.ಪಿ ಛಾಯಾಗ್ರಾಹಕರ ಸಂಘದ ಪದಾಧಿಕಾರಿಗಳು ಮೊದಲಾದವರಿದ್ದರು.

ಈಸಂದರ್ಭದಲ್ಲಿ ಮಾಜಿ ಯೋಧ ಕೃಷ್ಣ ಶೆಟ್ಟಿಬೆಟ್ಟು ಇವರನ್ನು ಅಭಿನಂದಿಸಲಾಯಿತು. ಸೌತ್ ಕೆನರಾ ಫೋಟೊಗ್ರಾಫರ್ಸ್ ಅಸೋಸಿಯೇಶನ್ ಉಡುಪಿ ವಲಯ ಅಧ್ಯಕ್ಷ ಜನಾರ್ದನ ಕೊಡವೂರು ಸ್ವಾಗತಿಸಿದರು. ದಿವಾಕರ್ ಹಿರಿಯಡ್ಕ ಧನ್ಯವಾದವಿತ್ತರು. ಪೂರ್ಣಿಮಾ ಜನಾರ್ದನ್ ನಿರೂಪಿಸಿದರು
Vishwa News 24

Recent Posts

ಆರ್‌ಎಸ್‌ಎಸ್​ ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ – vishwanews24

ಆರ್‌ಎಸ್‌ಎಸ್​ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…

13 hours ago

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ – vishwanews24

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ  ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…

14 hours ago

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ – vishwanews24

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…

14 hours ago

ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ – vishwanews24

ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ ಚೆನ್ನೈ: ಸಿಎಂ ಸಿ.…

14 hours ago

ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ – vishwanews24

ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ ಉಡುಪಿ :…

18 hours ago

ಆರೆಸ್ಸೆಸ್ ಅನ್ನು ಹಿಂದೂ ಧರ್ಮಕ್ಕೆ ಹೋಲಿಸಿರುವುದು ಖಂಡನೀಯ: ಬಿ.ಕೆ. ಹರಿಪ್ರಸಾದ್ – vishwanews24

"ಹಿಂದೂ ಧರ್ಮವೂ ನೋಂದಣಿಯಾಗಿಲ್ಲ ಎಂಬ ಮೋಹನ್ ಭಾಗವತ್ ಅವರ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ ಬೆಂಗಳೂರು: ಆರೆಸ್ಸೆಸ್ ಮುಖ್ಯಸ್ಥ ಮೋಹನ್…

19 hours ago