Featured

ಉಡುಪಿ : ನನ್ನನ್ನು ಮನೆಮಗಳು ತರ ನೋಡಿದ್ದೀರಿ, ಇದಕ್ಕಿಂತ ಹೆಚ್ಚೇನು ಬೇಕು : ಅಭಿಮಾನಿಗಳಿಗೆ ಥ್ಯಾಂಕ್ಸ್ ಹೇಳಿದ ರಕ್ಷಿತಾ ಶೆಟ್ಟಿ – vishwanews24

ಉಡುಪಿ : ನನ್ನನ್ನು ಮನೆಮಗಳು ತರ ನೋಡಿದ್ದೀರಿ, ಇದಕ್ಕಿಂತ ಹೆಚ್ಚೇನು ಬೇಕು : ಅಭಿಮಾನಿಗಳಿಗೆ ಥ್ಯಾಂಕ್ಸ್ ಹೇಳಿದ ರಕ್ಷಿತಾ ಶೆಟ್ಟಿ

ಉಡುಪಿ: ಕನ್ನಡ ಮತ್ತು ತುಳು ಮಿಶ್ರಿತ ಯುಟ್ಯೂಬ್ ನಲ್ಲಿ ಮಿಂಚುತ್ತಿದ್ದ ರಕ್ಷಿತಾ ಶೆಟ್ಟಿ ಇದೀಗ ಬಿಗ್‌ಬಾಸ್ ಕನ್ನಡ ಸೀಸನ್ 12ರ ರನ್ನರ್ ಅಪ್ ಆಗಿದ್ದಾರೆ. ತಮ್ಮ ಗೆಲುವಿಗೆ ಕಾರಣರಾದ ಅಭಿಮಾನಿಗಳಿಗೆ ಥ್ಯಾಂಕ್ಸ್ ಹೇಳಿರುವ ರಕ್ಷಿತಾ ಶೆಟ್ಟಿ ನನ್ನನ್ನು ಮನೆಮಗಳು ತರ ನೋಡಿದ್ದೀರಿ, ಇದಕ್ಕಿಂತ ಹೆಚ್ಚೇನು ಬೇಕು ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

ಸೋಷಿಯಲ್ ಮೀಡಿಯಾದಲ್ಲಿ ವಿಡಿಯೋ ಹಂಚಿಕೊಳ್ಳುವ ಮೂಲಕ ಧನ್ಯವಾದ ತಿಳಿಸಿದ್ದಾರೆ. ನಾನು ಈ ಸ್ಥಾನಕ್ಕೆ ಬರಲು ಕರ್ನಾಟಕವೇ ಕಾರಣ. ತುಂಬಾ ಪ್ರೀತಿಕೊಟ್ಟು ಕನ್ನಡಿಗರು ನನ್ನನ್ನು ಗೆಲ್ಲಿಸಿದ್ದಾರೆ. ನನ್ನನ್ನು ಮನೆಮಗಳು ತರ ನೋಡಿದ್ದೀರಿ, ಇದಕ್ಕಿಂದ ಹೆಚ್ಚೇನು ಬೇಕಿಲ್ಲ ಎಂದಿದ್ದಾರೆ. ಅಭಿಮಾನಿಗಳು ಕಾಮೆಂಟ್ ಮಾಡಿ ನೀವೇ ವಿನ್ನರ್ ಎಂದು ಬರೆದುಕೊಂಡಿದ್ದಾರೆ.

ಬಿಗ್‌ಬಾಸ್‌ ಮನೆಯಲ್ಲಿರುವಾಗ ನೀವೆಲ್ಲ ಇಷ್ಟು ಪ್ರೀತಿ, ಸಪೋರ್ಟ್ ಮಾಡ್ತಿದೀರಾ ಅಂತ ಗೊತ್ತಿರಲಿಲ್ಲ. ನಾನು ಅಂದುಕೊಂಡೂ ಇರಲಿಲ್ಲ. ಮನೆಯಿಂದ ಆಚೆ ಬಂದಮೇಲೆ ಇದನ್ನೆಲ್ಲ ನೋಡಿದರೆ ಕನಸಾ? ಅಥವಾ ಸತ್ಯಾನಾ? ಅಂತ ಅನಿಸುತ್ತೆ. ಅಷ್ಟು ಪ್ರೀತಿ ನೀವೆಲ್ಲ ಕೊಟ್ಟಿದೀರಿ. ನಿಮ್ಮ ಆಶೀರ್ವಾದ, ಪ್ರೀತಿಯಿಂದ ನಾನು ರನ್ನರ್ ಅಪ್ ಆಗಿದೀನಿ. ನನಗೋಸ್ಕರ ಸಮಯ ಕೊಟ್ಟು ಇಷ್ಟೊಂದು ವೋಟ್ ಹಾಕಿದ್ದಕ್ಕೆ ತುಂಬು ಹೃದಯದ ಧನ್ಯವಾದ. ಎಲ್ಲ ಕನ್ನಡಿಗರಿಗೂ, ಬೇರೆ ರಾಜ್ಯದಲ್ಲಿರುವ, ಮುಂಬೈನಲ್ಲಿರುವ, ಬೇರೆ ದೇಶದಲ್ಲಿರುವ ಎಲ್ಲ ಕನ್ನಡಿಗರಿಗೂ ಥ್ಯಾಂಕ್ಯೂ ಎಂದು ಧನ್ಯವಾದ ತಿಳಿಸಿದ್ದಾರೆ.

ಈ ಮೊದಲು ನಾನು ವಿಡಿಯೋ ಮಾಡಿದಾಗ ನನ್ನ ಬಗ್ಗೆ ತುಂಬಾ ನೆಗೆಟಿವ್ ಕಾಮೆಂಟ್‌ ಬರುತ್ತಿತ್ತು. ತುಂಬಾ ಟ್ರೋಲ್ ಮಾಡ್ತಾ ಇದ್ರು, ಆದರೆ ಈಗ ನನ್ನ ಬಗ್ಗೆ ಒಂದೇ ಒಂದು ನೆಗೆಟಿವ್ ಕಾಮೆಂಟ್‌ ನೋಡಲೇ ಇಲ್ಲ, ಎಲ್ಲರೂ ನನಗೆ ಕೇವಲ ಪ್ರೀತಿಯನ್ನೇ ಕೊಡ್ತಾ ಇದ್ದಾರೆ. ಟ್ರೋಲ್, ಟ್ರೋಲ್ ಮೀಮ್ಸ್ ಮಾಡಿದವರಿಗೆ ಥ್ಯಾಂಕ್ಸ್, ಎಲ್ಲ ಯೂಟ್ಯುಬರ್ಸ್, ಇನ್‌ಫ್ಲೂಯೆನ್ಸರ್ಸ್‌ ಎಲ್ಲರೂ ತುಂಬಾ ಸಪೋರ್ಟ್ ಮಾಡಿದ್ದಾರೆ. ಇಲ್ಲಿ ತನಕ ಬರುವವರೆಗೂ ನನ್ನ ಶ್ರಮ ಎಷ್ಟಿತ್ತೋ, ನಿಮ್ಮದು ಕೂಡ ಅಷ್ಟೇ ಶ್ರಮ ಇದೆ ಎಂದಿದ್ದಾರೆ.

ನನ್ನ ಗೆಲುವಿಗೆ ಇಡೀ ಕರ್ನಾಟಕ ಕಾರಣ. ನಾನು ಸಾಯುವವರೆಗೂ ಮರೆಯಲ್ಲ. ನಾನು ಎಲ್ಲವನ್ನೂ ಪದಗಳಲ್ಲಿ ಹೇಳೋಕೆ ಆಗಲ್ಲ. ಇಷ್ಟು ದಿನ ವಿಡಿಯೋ ಮಾಡೋಕೆ ಆಗಲಿಲ್ಲ. ಈ ಮೂಲಕ ನಿಮ್ಮ ಜೊತೆ ಮಾತನಾಡುವ ಅವಕಾಶ ಸಿಕ್ಕಿತು, ಹೀಗೆ ಪ್ರೀತಿ ಮಾಡ್ತಾ ಇರಿ. ಮನೆಮಗಳು ತರ ನೋಡಿದ್ದೀರಿ, ಇದಕ್ಕಿಂತ ದೊಡ್ಡದೇನು ಬೇಕಿಲ್ಲ ಎಂದು ತಿಳಿಸಿದ್ದಾರೆ

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

3 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

3 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

3 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

4 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

4 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

5 hours ago