Featured

ಉಡುಪಿ: ರಘುಪತಿ ಭಟ್ ಆಸ್ತಿ 21 ಕೋಟಿ ; ಸಾಲ 4 ಕೋಟಿ  – vishwanews24

ಉಡುಪಿ: ರಘುಪತಿ ಭಟ್ ಆಸ್ತಿ 21 ಕೋಟಿ ; ಸಾಲ 4 ಕೋಟಿ

ಉಡುಪಿ: ನೈರುತ್ಯ ಪದವೀಧರರ ಕ್ಷೇತ್ರದ ಚುನಾವಣೆಗೆ ಪಕ್ಷೇತರ ಅಭ್ಯರ್ಥಿಯಾಗಿ ಬಿಜೆಪಿಯ ಮಾಜಿ ಶಾಸಕ ರಘುಪತಿ ಭಟ್ ಅವರು ಕಣಕ್ಕೆ ಇಳಿಯಲು ಚುನಾವಣಾ ಅಧಿಕಾರಿಗಳಿಗೆ ತಮ್ಮ ಆಸ್ತಿಯ ವಿವರಗಳನ್ನು ನೀಡಿದ್ದಾರೆ.

ಚುನಾವಣಾಧಿಕಾರಿಗೆ ಗುರುವಾರ ಸಲ್ಲಿಸಿರುವ ಆಸ್ತಿ ವಿವರದಲ್ಲಿ ಚರಾಸ್ತಿ ಮತ್ತು ಸ್ಥಿರಾಸ್ತಿ ಸೇರಿ ಒಟ್ಟು 21,41,80,000 ಮೊತ್ತದ ಆಸ್ತಿ ಇದ್ದು, ಮನೆ ಮತ್ತು ವಾಹನಕ್ಕಾಗಿ ₹4,10,92,000 ಸಾವಿರ ಸಾಲ ಮಾಡಿರುವುದಾಗಿ ಅವರು ಘೋಷಿಸಿದ್ದಾರೆ. ಅವರ ಚರಾಸ್ತಿ 8,19,80,000 ಆಗಿದ್ದು ಸ್ಥಿರಾಸ್ತಿ 9,76,00,000 ಹೊಂದಿದ್ದಾರೆ. ಪತ್ನಿ ಶಿಲ್ಪಾ ಭಟ್ ಅವರ ಚರಾಸ್ತಿ 1, 11, 24,000. ಪುತ್ರರಿಬ್ಬರಲ್ಲಿ ಒಟ್ಟು ₹21 ಲಕ್ಷ ಇದೆ ಎಂದು ತಿಳಿದು ಬಂದಿದೆ.

ಹಾಗೂ 1 ಎಕರೆ 73 ಸೆಂಟ್ಸ್ ಕೃಷಿಯೇತರ ಜಮೀನು ಮತ್ತು 30 ಸೆಂಟ್ಸ್ ಕೃಷಿ ಜಮೀನು ಹೊಂದಿರುವ ರಘುಪತಿ ಭಟ್ ಅವರು 65 ಸೆಂಟ್ಸ್ ಅಳತೆಯ ನಿವೇಶನ ಹೊಂದಿದ್ದಾರೆ. ಮನೆ ಸಾಲ ₹1, 68,00,000 ಬಾಕಿ ಇದೆ. ವಾಹನ ಸಾಲ ₹11 ಲಕ್ಷ ಕಟ್ಟಬೇಕಿದೆ. ಯಾವುದೇ ಕ್ರಿಮಿನಲ್ ಕೇಸ್ ಕೂಡ ಹೊಂದಿಲ್ಲದ ರಘುಪತಿ ಭಟ್ ಅವರ ಬಳಿ ₹6,68,915, ಪತ್ನಿ ಶಿಲ್ಪಾ ಬಳಿ ₹42,000 ಮತ್ತು ಮಕ್ಕಳ ಬಳಿ ಒಟ್ಟು ₹8 ಸಾವಿರ ನಗದು ಇದೆ ಎಂದು ತಿಳಿದು ಬಂದಿದೆ.

ಉಡುಪಿಯ ಮಹಾಲಕ್ಷ್ಮಿ ಕೊ ಆಪರೇಟಿವ್ ಬ್ಯಾಂಕ್, ಹಿರಣ್ಯ ಬಿಲ್ಡರ್ಸ್, ಬ್ಯಾಂಕ್ ಆಫ್ ಬರೋಡ, ಕೆನರಾ ಬ್ಯಾಂಕ್, ಭಾರತ್ ಬಯೊ ಐಎಂಎಂ, ಕೇದಾರೋತ್ಥಾನ ಕೃಷಿ ಉತ್ಪಾದಕರ ಸಂಘ, ತರ್ಜನಿ ಇನ್ಸೂರೆನ್ಸ್, ಅದಾನಿ ದೆ ಗ್ರೀನ್ ಎನರ್ಜಿ, ಅದಾನಿ ಸಿಮೆಂಟ್ ಮತ್ತು ಡೆಲ್ಟಾ ಕಾರ್ಪ್‌ನಲ್ಲಿ ಕುಟುಂಬದ ಅನೇಕ ಷೇರುಗಳು ಇವೆ. ಇಬ್ಬರು ವ್ಯಕ್ತಿಗಳು, 5 ಸಂಸ್ಥೆಗಳಿಗೆ ಲಕ್ಷಾಂತರ ಮೊತ್ತದ ಸಾಲ ನೀಡಿದ್ದಾರೆ.

ಅವರ ಬಳಿ ₹16 ಲಕ್ಷ ಬೆಲೆಯ ಟಾಟಾ ನೆಕ್ಸಾನ್ ಇವಿ, ₹12 ಲಕ್ಷದ ಟೊಯೊಟ ಇನೋವ, ₹6 ಸಾವಿರ ಬೆಲೆಯ ಹೊಂಡಾ ಆ್ಯಕ್ಟಿವಾ ವಾಹನ ಗಳು ಇದ್ದು. ಪತ್ನಿ, ಪುತ್ರರ ಹೆಸರಿನಲ್ಲಿ ವಾಹನಗಳಿಲ್ಲ. ಭಟ್ ಅವರಲ್ಲಿ 400 ಗ್ರಾಂ ಚಿನ್ನ ಮತ್ತು 11 ಕಿಜಿ ಬೆಳ್ಳಿ, ಪತ್ನಿ ಬಳಿ 500 ಗ್ರಾಂ ಚಿನ್ನ ಇದೆ ಎಂಬ ಮಾಹಿತಿ ಲಭ್ಯವಾಗಿದೆ.

 

Vishwa News 24

Recent Posts

ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ – vishwanews24

ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…

1 day ago

ಮಂಗಳೂರು : ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್ – vishwanews24

ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್‌ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…

1 day ago

ಟ್ರ್ಯಾಕ್ಟರ್ – ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ – vishwanews24

ಟ್ರ‍್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…

1 day ago

ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಕಾರ್ಯಕರ್ತರ ಅಭಿಮಾನ ತಡಯೋಕೆ ಸಾಧ್ಯವಿಲ್ಲ :ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ – vishwanews24

ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್‍ಗೆ ಬಿಟ್ಟ ವಿಚಾರ.…

1 day ago

ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ – vishwanews24

ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…

1 day ago

ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ – vishwanews24

ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…

1 day ago