Featured

ಉಡುಪಿ : ರಘುಪತಿ ಭಟ್ ಪ್ರಯತ್ನದಿಂದ ಕೃಷಿ ವಲಯದಲ್ಲಿ ಮನೆ ಕಟ್ಟಲು ಅವಕಾಶ – ಕೆ ರಾಘವೇಂದ್ರ ಕಿಣಿ ಹರ್ಷ – Vishwanews24

ಉಡುಪಿ : ರಘುಪತಿ ಭಟ್ ಪ್ರಯತ್ನದಿಂದ ಕೃಷಿ ವಲಯದಲ್ಲಿ ಮನೆ ಕಟ್ಟಲು ಅವಕಾಶ ಕೆ ರಾಘವೇಂದ್ರ ಕಿಣಿ ಹರ್ಷ

ಉಡುಪಿ:  ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಯ ಕೃಷಿ ವಲಯ ಅಥವಾ ಅಗ್ರಿಕಲ್ಚರ್ ಝೋನಲ್ಲಿ ಸಣ್ಣ ಹಿಡುವಳಿದಾರರಿಗೆ(ಭೂ ಮಾಲಕರಿಗೆ) ಸ್ವಂತ ಸೂರನ್ನು ಕಟ್ಟಿಕೊಳ್ಳಲು ವಲಯ ನಿಯಮಾವಳಿಗಳಲ್ಲಿ ಅವಕಾಶ ಇರಲಿಲ್ಲ. ಇದೀಗ ಉಡುಪಿ ಶಾಸಕ ಕೆ ರಘುಪತಿ ಭಟ್ ಇವರ ಭಗೀರಥ ಪ್ರಯತ್ನದಿಂದ ಕೃಷಿ ವಲಯದಲ್ಲಿ10ಸೆಂಟ್ಸು ಜಾಗ ಮತ್ತು 3000 ಚದರಅಡಿ ತನಕ ಸ್ವಂತ ಮನೆ ಕಟ್ಟಲು ಅವಕಾಶ ಸಿಕ್ಕಿರುವುದಕ್ಕೆ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ನಿಕಟ ಪೂರ್ವ ಅಧ್ಯಕ್ಷರಾದ ಕೆ ರಾಘವೇಂದ್ರ ಕಿಣಿ ಅವರು ಹರ್ಷ ವ್ಯಕ್ತಪಡಿಸಿದ್ದಾರೆ.

ಇದನ್ನು ವಿಶ್ಲೇಷಿಸಿದ ಇವರು ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರ ವ್ಯಾಪ್ತಿಯಲ್ಲಿ ಗ್ರಾಮ ಠಾಣಾ ಇರುವುದಿಲ್ಲ. ಇಲ್ಲಿ ತುಂಡು ಭೂಮಿಗಳು ಅತೀ ಹೆಚ್ಚು ಸಂಖ್ಯೆಯಲ್ಲಿ ಇರುತ್ತದೆ. ಪೂರ್ವಜರು ತಮ್ಮ ಕುಟುಂಬದ ಉಪಯೋಗಕ್ಕಾಗಿ ತಾವು ಅವಲಂಬಿತ ಕೃಷಿಭೂಮಿಗಳನ್ನೇ ತುಂಡು ಭೂಮಿಗಳಾಗಿ ರಚಿಸಿರುತ್ತಾರೆ. ಅಂತಹ ಕೆಲವು ಭಾಗಗಳು ಮತ್ತು ಇನ್ನಿತರವನ್ನು ಸೇರಿ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಯಲ್ಲಿ ಕೃಷಿ ವಲಯಗಳನ್ನಾಗಿ ಗುರುತಿಸಿರುತ್ತಾರೆ. ಆಗ ಝೋನಲ್ಲಿ ಸಾರ್ವಜನಿಕರಿಗೆ ಮನೆ ಕಟ್ಟಲು ಅವಕಾಶ ಇರುವುದಿಲ್ಲ. ಸಾವಿರಾರು ಜನರು ತಮ್ಮ ಸ್ವಂತ ಜಾಗದಲ್ಲಿ ಮನೆ ಕಟ್ಟಲು ಅವಕಾಶವಿಲ್ಲದೆ ಪರದಾಡುತ್ತಿದ್ದರು. ಈ ಹಿಂದೆ ಉಡುಪಿ ಪ್ರಾಧಿಕಾರದ ಸಭೆಯಲ್ಲಿ ಇಂತಹ ಮನೆಗಳಿಗೆ ಅವಕಾಶ ನೀಡಲಾಗುತಿತ್ತು. ಆದರೆ ಇದಕ್ಕೆ ZRನಲ್ಲಿ ಅವಕಾಶವಿರುವುದಿಲ್ಲ

ಹೀಗೆ ಸುಮಾರು ವರ್ಷಗಳಿಂದ ಉಡುಪಿಯ ಸಾವಿರಾರು ಮಂದಿಗೆ ತಮ್ಮ ಸ್ವಂತ ಸೂರುಗಳನ್ನು ಕಟ್ಟಲು ಸಾಧ್ಯವಾಗುತ್ತಿರಲಿಲ್ಲ. ಶ್ರೀಮಂತ ಹಿಡುವಳಿದಾರರು ಬೆಂಗಳೂರಿಗೆ ತೆರಳಿ ವಲಯ ಬದಲಾವಣೆ ಮಾಡಿಕೊಂಡು ಬರುತ್ತಿದ್ದರು. ಆದರೆ 10 ಸೆಂಟ್ಸ್ ಒಳಗಿನ ಸಾರ್ವಜನಿಕರಿಗೆ / ಬಡವರಿಗೆ ಇದು ಕಷ್ಟ ಸಾಧ್ಯವಿತ್ತು. ಇದೀಗ ಸರಕಾರ ವಲಯ ನಿಯಮಾವಳಿಗಳನ್ನೇ ತಿದ್ದುಪಡಿ ಮಾಡಿ ಆದೇಶ ಹೊರಡಿಸಿ 3000ಚದರ ಅಡಿ ತನಕ ಮನೆ ಕಟ್ಟಲು ಅವಕಾಶ ನೀಡಿದ್ದು ಮತ್ತು ನೆಲಮಹಡಿ ಮತ್ತು ಮೊದಲ ಮಹಡಿ ಮನೆ ಕಟ್ಟಲು ಅವಕಾಶ ನೀಡಿರುತ್ತಾರೆ. 5 ರಿಂದ 7 ಸೆಂಟ್ಸು ನ ತನಕದ ತನಕ ಜಾಗಗಳಿಗೆ 45 % ಕವರೇಜ್ ನಲ್ಲಿ 3,000 ಚದುರಅಡಿ ಮೀರದಂತೆ 7 ರಿಂದ 10 ಸೆಂಟ್ಸ್ ತನಕ 35% ಕವರೇಜ್ ನಲ್ಲಿ 3000 ಚದರಅಡಿ ಮೀರದಂತೆ ಮನೆ ಕಟ್ಟಲು ಅನುಮತಿ ನೀಡಿದ್ದು ಕ್ರಾಂತಿಕಾರಕ ಹೆಜ್ಜೆ ಮತ್ತು ರಾಜ್ಯದಲ್ಲಿ ಪ್ರಥಮ ಎಂದು ರಾಘವೇಂದ್ರ ಕಿಣಿ ವಿಶ್ಲೇಷಿಸಿದ್ದಾರೆ

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

20 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

21 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago