Featured

ಉಡುಪಿ ರಜತ ಮಹೋತ್ಸವ ಕಾರ್ಯಕ್ರಮ ಹಬ್ಬದಂತೆ ಆಚರಣೆಗೆ ಶಾಸಕ ರಘುಪತಿ ಭಟ್ ಕರೆ – Vishwanews24

ಉಡುಪಿ ರಜತ ಮಹೋತ್ಸವ ಕಾರ್ಯಕ್ರಮ ಹಬ್ಬದಂತೆ ಆಚರಣೆಗೆ ಶಾಸಕ ರಘುಪತಿ ಭಟ್ ಕರೆ

ಉಡುಪಿ : ಉಡುಪಿ ರಜತ ಮಹೋತ್ಸವ ಕಾರ್ಯಕ್ರಮವನ್ನು ಜಿಲ್ಲೆಯಲ್ಲಿ ಹಬ್ಬದ ರೀತಿಯಲ್ಲಿ ಆಚರಿಸುವಂತೆ ಜಿಲ್ಲೆಯ ಜನತೆ ಹಾಗೂ ಸಂಘ ಸಂಸ್ಥೆಗಳಿಗೆ ಶಾಸಕ ಕೆ.ರಘುಪತಿ ಭಟ್ ಕರೆ ನೀಡಿದರು.

ಅವರು ಇಂದು ಉಡುಪಿ ರಜತ ಉತ್ಸವ ಆಚರಣೆ ಕುರಿತು ಉಡುಪಿ ಪ್ರವಾಸಿ ಮಂದಿರದಲ್ಲಿ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಿಲ್ಲಾ ಕೇಂದ್ರಕ್ಕೆ ಜನ ಸಾಮಾನ್ಯರು ಬಂದು ತಮ್ಮ ಕೆಲಸ ಕಾರ್ಯಗಳನ್ನು ಮಾಡಿಕೊಂಡು ಹೋಗಲು ಅನುಕೂಲವಾಗಲು ಉಡುಪಿ ಜಿಲ್ಲೆಯನ್ನು ರಚನೆ ಮಾಡಬೇಕೆಂಬ ಜನರ ಒತ್ತಾಸೆಯನ್ನು ಅರಿತು ಸರ್ಕಾರ ಉಡುಪಿ ಜಿಲ್ಲಾ ಕೇಂದ್ರವನ್ನಾಗಿ ಘೋಷಿಸಿತ್ತು. ಪ್ರಸಕ್ತ ಮಾಹೆಯ 25 ಕ್ಕೆ 25 ವರ್ಷಗಳು ತುಂಬುತ್ತಿರುವ ಹಿನ್ನಲೆಯಲ್ಲಿ ರಜತ ಮಹೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದರು.

ಜಿಲ್ಲೆಯು ಇದುವರೆಗೆ ಬೆಳದು ಬಂದಿರುವ ಹಾದಿ ಮತ್ತು ಇನ್ನೂ ಗಳಿಸಬೇಕಿರುವ ಅಭಿವೃಧ್ದಿಯ ಬಗ್ಗೆ ಅವಲೋಕನ ಮಾಡಿಕೊಳ್ಳಲು ಇಂತಹ ಕಾರ್ಯಕ್ರಮಗಳು ಪೂರಕವಾಗಲಿದೆ , ಈ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲು ಸಕಲ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ತಿಳಿಸಿದರು.

ವೇದಿಕೆ ಕಾರ್ಯಕ್ರಮವು ಆಗಸ್ಟ್ 25 ರಂದು ಅಜ್ಜರಕಾಡು ನ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದ್ದು, ರಾಜ್ಯದ ಘನತೆವೆತ್ತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಹಾಗೂ ಸಚಿವ ಸಂಪುಟದ ವಿವಿಧ ಸಚಿವರುಗಳು ಸಹ ಆಗಮಿಸಲಿದ್ದಾರೆ ಎಂದರು.

ರಜತ ಮಹೋತ್ಸವದ ಅಂಗವಾಗಿ ಉಡುಪಿಯ ಬೋರ್ಡ್ ಶಾಲೆಯಿಂದ ಅಜ್ಜರಕಾಡು ಕ್ರೀಡಾಂಗಣದವರೆಗೆ ವಿವಿಧ ಸಾಂಸ್ಕೃತಿಕ ಕಲಾತಂಡಗಳು ಹಾಗೂ ಶಾಲಾ ವಿದ್ಯಾರ್ಥಿಗಳಿಂದ ಮೆರವಣಿಗೆ ಆಯೋಜಿಸುವಂತೆ ತಿಳಿಸಿದ ಅವರು, ಈ ಎಲ್ಲಾ ಕಾರ್ಯಕ್ರಮಗಳ ಕುರಿತು ಮಾಧ್ಯಮಗಳಲ್ಲಿ ಹಾಗೂ ಸಾಮಾಜಿಕ ಮಾಧ್ಯಮಗಳ ಮೂಲಕ ಹೆಚ್ಚಿನ ಪ್ರಚಾರ ನೀಡುವಂತೆ ತಿಳಿಸಿದರು.

ಅಗಸ್ಟ್ 21 – ಯುವವಾಹಿನಿ ಅಂತರ್ ಘಟಕದ ಡೆನ್ನಾನ ಡೆನ್ನನ ಸಾಂಸ್ಕೃತಿಕ ಸೌರಭ : vishwanews24

ಆಗಸ್ಟ್ 24 ರಿಂದ ನೇಷನ್ ಫಸ್ಟ್ ತಂಡ ಹಾಗೂ ವಿವಿಧ ಕಾಲೇಜು ವಿದ್ಯಾರ್ಥಿಗಳಿಂದ ಜಿಲ್ಲೆಯಾದ್ಯಂತ 75 ಕಿ.ಮೀ.ಗಳ ಓಟದ ಕಾರ್ಯಕ್ರಮ ನಡೆಯಲಿದೆ ಎಂದರು.

ರಜತ ಮಹೋತ್ಸವ ಕಾರ್ಯಕ್ರಮಕ್ಕೆ ಜಿಲ್ಲೆಯ ಎಲ್ಲಾ ಜನಪ್ರತಿನಿಧಿಗಳು, ಗಣ್ಯರು ಸೇರಿದಂತೆ ಜಿಲ್ಲೆಯ ಆರಂಭದ ದಿನಗಳಿಂದ ಇದುವರೆಗಿನ ಜನಪ್ರತಿನಿಧಿಗಳನ್ನು ಆಹ್ವಾನಿಸಬೇಕು ಎಂದರು.

ಉತ್ಸವದ ಯಶಸ್ವಿ ಆಚರಣೆ ಕುರಿತು ರಚಿಸಲಾಗಿರುವ ಎಲ್ಲಾ ಸಮಿತಿಗಳು ತಮಗೆ ನೀಡಿರುವ ಜವಾಬ್ದಾರಿಗಳನ್ನು ಪರಸ್ಪರ ಸಮನ್ವಯದಿಂದ ನಿಭಾಯಿಸುವಂತೆ ತಿಳಿಸಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ, ಜಿ.ಪಂ.ಸಿಇಓ ಪ್ರಸನ್ನ ಹೆಚ್. ಜಿಲ್ಲಾ ಪೊಲೀಸ್ ವರಿಷ್ಠಾದಿಕಾರಿ ಅಕ್ಷಯ್ ಹಾಕೆ ಮಚೀಂದ್ರ , ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್. ಹಾಗೂ ಎಲ್ಲಾ ಜಿಲ್ಲಾ ಮಟ್ಟದ ಅನುಷ್ಠಾನಾಧಿಕಾರಿಗಳು ಉಪಸ್ಥಿತರಿದ್ದರು.

ಆಂಧ್ರ ಪ್ರದೇಶ ಫೋಟೋಗ್ರಫಿ ಅಕಾಡೆಮಿ ಆಜಾದಿಕಾ ಅಮೃತ್ ಮಹೋತ್ಸವದ ಅಂಗವಾಗಿ ಆಯೋಜಿಸಿದ್ದ ರಾಷ್ಟ್ರ ಮಟ್ಟದ ಛಾಯಾಗ್ರಹಣ ಸ್ಪರ್ಧೆಯಲ್ಲಿ ಕರ್ನಾಟಕದ ಪಂಚ ಛಾಯಾಗ್ರಾಹಕರ ಚಿತ್ರಗಳು ಪ್ರಶಸ್ತಿಗೆ ಆಯ್ಕೆ – Vishwanews24

Vishwa News 24

Recent Posts

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

10 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

11 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

11 hours ago

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ -vishwanews24

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…

11 hours ago

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

2 days ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

2 days ago