ಉಡುಪಿ : ಉಡುಪಿ ರಜತ ಮಹೋತ್ಸವ ಕಾರ್ಯಕ್ರಮವನ್ನು ಜಿಲ್ಲೆಯಲ್ಲಿ ಹಬ್ಬದ ರೀತಿಯಲ್ಲಿ ಆಚರಿಸುವಂತೆ ಜಿಲ್ಲೆಯ ಜನತೆ ಹಾಗೂ ಸಂಘ ಸಂಸ್ಥೆಗಳಿಗೆ ಶಾಸಕ ಕೆ.ರಘುಪತಿ ಭಟ್ ಕರೆ ನೀಡಿದರು.
ಅವರು ಇಂದು ಉಡುಪಿ ರಜತ ಉತ್ಸವ ಆಚರಣೆ ಕುರಿತು ಉಡುಪಿ ಪ್ರವಾಸಿ ಮಂದಿರದಲ್ಲಿ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲಾ ಕೇಂದ್ರಕ್ಕೆ ಜನ ಸಾಮಾನ್ಯರು ಬಂದು ತಮ್ಮ ಕೆಲಸ ಕಾರ್ಯಗಳನ್ನು ಮಾಡಿಕೊಂಡು ಹೋಗಲು ಅನುಕೂಲವಾಗಲು ಉಡುಪಿ ಜಿಲ್ಲೆಯನ್ನು ರಚನೆ ಮಾಡಬೇಕೆಂಬ ಜನರ ಒತ್ತಾಸೆಯನ್ನು ಅರಿತು ಸರ್ಕಾರ ಉಡುಪಿ ಜಿಲ್ಲಾ ಕೇಂದ್ರವನ್ನಾಗಿ ಘೋಷಿಸಿತ್ತು. ಪ್ರಸಕ್ತ ಮಾಹೆಯ 25 ಕ್ಕೆ 25 ವರ್ಷಗಳು ತುಂಬುತ್ತಿರುವ ಹಿನ್ನಲೆಯಲ್ಲಿ ರಜತ ಮಹೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದರು.
ಜಿಲ್ಲೆಯು ಇದುವರೆಗೆ ಬೆಳದು ಬಂದಿರುವ ಹಾದಿ ಮತ್ತು ಇನ್ನೂ ಗಳಿಸಬೇಕಿರುವ ಅಭಿವೃಧ್ದಿಯ ಬಗ್ಗೆ ಅವಲೋಕನ ಮಾಡಿಕೊಳ್ಳಲು ಇಂತಹ ಕಾರ್ಯಕ್ರಮಗಳು ಪೂರಕವಾಗಲಿದೆ , ಈ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲು ಸಕಲ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ತಿಳಿಸಿದರು.
ವೇದಿಕೆ ಕಾರ್ಯಕ್ರಮವು ಆಗಸ್ಟ್ 25 ರಂದು ಅಜ್ಜರಕಾಡು ನ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದ್ದು, ರಾಜ್ಯದ ಘನತೆವೆತ್ತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಹಾಗೂ ಸಚಿವ ಸಂಪುಟದ ವಿವಿಧ ಸಚಿವರುಗಳು ಸಹ ಆಗಮಿಸಲಿದ್ದಾರೆ ಎಂದರು.
ರಜತ ಮಹೋತ್ಸವದ ಅಂಗವಾಗಿ ಉಡುಪಿಯ ಬೋರ್ಡ್ ಶಾಲೆಯಿಂದ ಅಜ್ಜರಕಾಡು ಕ್ರೀಡಾಂಗಣದವರೆಗೆ ವಿವಿಧ ಸಾಂಸ್ಕೃತಿಕ ಕಲಾತಂಡಗಳು ಹಾಗೂ ಶಾಲಾ ವಿದ್ಯಾರ್ಥಿಗಳಿಂದ ಮೆರವಣಿಗೆ ಆಯೋಜಿಸುವಂತೆ ತಿಳಿಸಿದ ಅವರು, ಈ ಎಲ್ಲಾ ಕಾರ್ಯಕ್ರಮಗಳ ಕುರಿತು ಮಾಧ್ಯಮಗಳಲ್ಲಿ ಹಾಗೂ ಸಾಮಾಜಿಕ ಮಾಧ್ಯಮಗಳ ಮೂಲಕ ಹೆಚ್ಚಿನ ಪ್ರಚಾರ ನೀಡುವಂತೆ ತಿಳಿಸಿದರು.
ಅಗಸ್ಟ್ 21 – ಯುವವಾಹಿನಿ ಅಂತರ್ ಘಟಕದ ಡೆನ್ನಾನ ಡೆನ್ನನ ಸಾಂಸ್ಕೃತಿಕ ಸೌರಭ : vishwanews24
ಆಗಸ್ಟ್ 24 ರಿಂದ ನೇಷನ್ ಫಸ್ಟ್ ತಂಡ ಹಾಗೂ ವಿವಿಧ ಕಾಲೇಜು ವಿದ್ಯಾರ್ಥಿಗಳಿಂದ ಜಿಲ್ಲೆಯಾದ್ಯಂತ 75 ಕಿ.ಮೀ.ಗಳ ಓಟದ ಕಾರ್ಯಕ್ರಮ ನಡೆಯಲಿದೆ ಎಂದರು.
ರಜತ ಮಹೋತ್ಸವ ಕಾರ್ಯಕ್ರಮಕ್ಕೆ ಜಿಲ್ಲೆಯ ಎಲ್ಲಾ ಜನಪ್ರತಿನಿಧಿಗಳು, ಗಣ್ಯರು ಸೇರಿದಂತೆ ಜಿಲ್ಲೆಯ ಆರಂಭದ ದಿನಗಳಿಂದ ಇದುವರೆಗಿನ ಜನಪ್ರತಿನಿಧಿಗಳನ್ನು ಆಹ್ವಾನಿಸಬೇಕು ಎಂದರು.
ಉತ್ಸವದ ಯಶಸ್ವಿ ಆಚರಣೆ ಕುರಿತು ರಚಿಸಲಾಗಿರುವ ಎಲ್ಲಾ ಸಮಿತಿಗಳು ತಮಗೆ ನೀಡಿರುವ ಜವಾಬ್ದಾರಿಗಳನ್ನು ಪರಸ್ಪರ ಸಮನ್ವಯದಿಂದ ನಿಭಾಯಿಸುವಂತೆ ತಿಳಿಸಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ, ಜಿ.ಪಂ.ಸಿಇಓ ಪ್ರಸನ್ನ ಹೆಚ್. ಜಿಲ್ಲಾ ಪೊಲೀಸ್ ವರಿಷ್ಠಾದಿಕಾರಿ ಅಕ್ಷಯ್ ಹಾಕೆ ಮಚೀಂದ್ರ , ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್. ಹಾಗೂ ಎಲ್ಲಾ ಜಿಲ್ಲಾ ಮಟ್ಟದ ಅನುಷ್ಠಾನಾಧಿಕಾರಿಗಳು ಉಪಸ್ಥಿತರಿದ್ದರು.
ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…
ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…
ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್ಐಆರ್ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…
ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್ ಲಕ್ನೋ: ರಾಮಭಕ್ತರ…
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…