ಉಡುಪಿ: ನೈಜ ವಿಷಯ ಮರೆಮಾಚಿ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹಬ್ಬಿಸಿರುವ ವ್ಯಕ್ತಿಯ ವಿರುದ್ದ ಕ್ರಮ ಕೈಗೊಳ್ಳುವಂತೆ ಉಡುಪಿ ನಗರಸಭೆಯ ವಿಪಕ್ಷ ನಾಯಕ ರಮೇಶ್ ಕಾಂಚನ್ ಉಡುಪಿ ಸೆನ್ ಠಾಣೆಗೆ ದೂರು ನೀಡಿದ್ದಾರೆ
ಉಡುಪಿ ನಗರಸಭೆಯ ವಿರೋಧ ಪಕ್ಷದ ನಾಯಕನಾಗಿದ್ದು ತಾರೀಕು. 24/12/2024ರಂದು ನಡೆದ ನಗರಸಭೆಯ ಸಾಮಾನ್ಯ ಸಭೆಯಲ್ಲಿ ಉಡುಪಿಯ ಶಾಸಕರು ಮಸೀದಿ, ದೇವಸ್ಥಾನ ಹಾಗು ಚರ್ಚುಗಳ ವಿಷಯದ ಬಗ್ಗೆ ಚರ್ಚೆಗೆ ತೆಗೆದುಕೊಂಡಾಗ ಕಾಂಚನ್ ಅವರು ಯಾವುದೇ ಧರ್ಮಕ್ಕೆ ಅಥವ ಯಾವುದೇ ಸಮುದಾಯದ ವಿರುದ್ಧ ಅಪಮಾನ ಮಾಡುವ ರೀತಿ ಮಾತನಾಡಿರುವುದಿಲ್ಲ. ಧಾರ್ಮಿಕ ಸಂಸ್ಥೆಗಳ ಬಗ್ಗೆ ಯಾವುದೇ ಕ್ರಮ ಕೈಗೊಳ್ಳುವ ಮೊದಲು ಸರಿಯಾಗಿ ಯೋಚಿಸಿ ಮುಂದುವರಿಯಬೇಕು ಎಂದು ಹೇಳಿರುವುದಾಗಿ ತಿಳಿಸಿದ್ದು ಆದರೆ ಒಬ್ಬ ವ್ಯಕ್ತಿ ನಾನು ಹಿಂದೂ ಧರ್ಮಕ್ಕೆ ಅವಹೇಳನ ಮಾಡಿರುತ್ತೇನೆ ಎಂದು ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹಬ್ಬಿಸಿರುತ್ತಾನೆ.
ನಾನು ಹಿಂದೂ ಧರ್ಮದ ವಿರೋಧಿ ಎಂದು ಬಿಂಬಿಸಿ ನನ್ನ ವೈಯಕ್ತಿಕ ವರ್ಚಸ್ಸಿಗೆ ಧಕ್ಕೆ ಮಾಡಿರುತ್ತಾನೆ. ಹಾಗೆಯೇ ಸಮಾಜದಲ್ಲಿ ಅಶಾಂತಿ ಸೃಷ್ಟಿಸಲು ಆ ಮೂಲಕ ಪ್ರಯತ್ನಿಸಿರುತ್ತಾನೆ.ಅದರಿಂದ ಈ ಸುಳ್ಳು ಸುದ್ದಿ ಹಬ್ಬಿಸುವ ಆ ವ್ಯಕ್ತಿಗೆ ಎಚ್ಚರಿಕೆ ನೀಡಿ ಸರಿಯಾದ ಕಾನೂನು ಕ್ರಮ ಕೈಗೊಳ್ಳ ಬೇಕಾಗಿ ದೂರಿನಲ್ಲಿ ತಿಳಿಸಿದ್ದಾರೆ.
ಮೀನುಗಾರರಿಗೆ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ ಕುಂದಾಪುರ: ರಾಜ್ಯದ ಸಾಂಪ್ರದಾಯಿಕ ನಾಡ ದೋಣಿ…
ಕಡಬ : ಜಲಪಾತಕ್ಕೆ ತೆರಳಿದ್ದ ಅಪ್ರಾಪ್ತ ವಿದ್ಯಾರ್ಥಿಗಳ ಮೇಲೆ ಹಲ್ಲೆ ; ಪ್ರಕರಣ ದಾಖಲು ಕಡಬ : ಜಲಪಾತಕ್ಕೆ ತೆರಳಿದ್ದ…
ಹಳಿ ನಿರ್ವಹಣೆ: ಅ.4ರಿಂದ ಬೆಂಗಳೂರು - ಮಂಗಳೂರು ನಡುವಿನ ಹಲವು ರೈಲುಗಳ ಸಂಚಾರ ರದ್ದು ಮಂಗಳೂರು: ಶಿರಿಬಾಗಿಲು- ಯಡಕುಮೇರಿ ರೈಲು…
ಮುಂಬೈ ಭೂಕುಸಿತ: ಇಬ್ಬರು ಬಲಿ, ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ ಮುಂಬೈ: ಘಾಟ್ಕೋಪರ್ನ ಚಿರಾಗ್ ನಗರದ ಗೌಸಿಯಾ ಚಾಲ್ನಲ್ಲಿ ಬುಧವಾರ…
ಪ್ರಜ್ವಲ್ ರೇವಣ್ಣ ಸೆಲ್ನಲ್ಲಿ ಮೊಬೈಲ್ ಪತ್ತೆ : ಜೈಲಾಧಿಕಾರಿ ಸಸ್ಪೆಂಡ್, SPಗೆ ಶೋಕಾಸ್ ನೋಟಿಸ್ ಬೆಂಗಳೂರು: ಜೀವಾವಧಿ ಶಿಕ್ಷೆಗೆ ಗುರಿಯಾಗಿ…
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…