Featured

ಉಡುಪಿ : ರಸ್ತೆ ಅಪಘಾತದಲ್ಲಿ ಮೆದುಳು ನಿಷ್ಕ್ರೀಯ – ಅಂಗಾಂಗಗಳ ದಾನ ಮೂಲಕ 7 ಜನರಿಗೆ ಹೊಸ ಬದುಕು ನೀಡಿದ ಯುವಕ – Vishwanews24

ಉಡುಪಿ : ರಸ್ತೆ ಅಪಘಾತದಲ್ಲಿ ಮೆದುಳು ನಿಷ್ಕ್ರೀಯ -ಅಂಗಾಂಗಗಳ ದಾನ ಮೂಲಕ 7 ಜನರಿಗೆ ಹೊಸ ಬದುಕು ನೀಡಿದ ಯುವಕ

ಮಣಿಪಾಲ: ರಸ್ತೆ ಅಪಘಾತದಿಂದಾಗಿ ಮೆದುಳು ನಿಷ್ಕ್ರಿಯಗೊಂಡಿದ್ದ ವ್ಯಕ್ತಿ ಅಂಗಾಂಗ ದಾನದ ಮೂಲಕ ಸಾರ್ಥಕ್ಯ ಮೆರೆದಿದ್ದಾರೆ. ಪರಿಣಾಮ 7 ಮಂದಿ ಇದರ ಪ್ರಯೋಜನ ಪಡೆದುಕೊಂಡಿದ್ದಾರೆ.

ಭದ್ರಾವತಿ ಮೂಲದ ಉಲ್ಲಾಸ್‌ ಆರ್‌. (21)ಅವರಿಗೆ ಎ.22ರಂದು ಅಪರಾಹ್ನ ಭದ್ರಾವತಿ ತಾಲೂಕಿನ ಚೆನ್ನಗಿರಿ ರಸ್ತೆಯಲ್ಲಿ ಅಪಘಾತವಾಗಿತ್ತು. ತೀವ್ರ ಗಾಯಗೊಂಡಿದ್ದ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಎ. 23ರಂದು ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೈದ್ಯರು ಅವರನ್ನು ರಕ್ಷಿಸಲು ಪ್ರಯತ್ನಿಸಿದರೂ ಚೇತರಿಸಿಕೊಳ್ಳುವ ಯಾವುದೇ ಲಕ್ಷಣಗಳು ಕಂಡುಬರಲಿಲ್ಲ. ಬಳಿಕ ಅಧಿಕೃತವಾಗಿ ಪರಿಣಿತ ವೈದ್ಯರ ತಂಡವು ರೋಗಿಯ ಮೆದುಳು ನಿಷ್ಕ್ರಿಯಗೊಂಡಿದೆ ಎಂದು ಘೋಷಿಸಿದರು.

ಬಳಿಕ ಉಲ್ಲಾಸ್ ಅವರ ತಂದೆ ರಾಜಪ್ಪ ಮತ್ತು ಕುಟುಂಬ ಸದಸ್ಯರು ಇತರ ರೋಗಿಗಳ ಜೀವ ಉಳಿಸಲು ಕಾರ್ಯಸಾಧ್ಯವಾದ ಅಂಗಗಳನ್ನು ದಾನ ಮಾಡುವ ತಮ್ಮ ಇಚ್ಛೆಯನ್ನು ವ್ಯಕ್ತಪಡಿಸಿದರು. ದಾನ ಮಾಡಿದ ಹೃದಯ, ಶ್ವಾಸಕೋಶಗಳು, ಮೂತ್ರಪಿಂಡಗಳು, ಯಕೃತ್ತು, ಮತ್ತು ಎರಡು ಕಾರ್ನಿಯಾಗಳು 7 ಜನರ ಜೀವ ಉಳಿಸಲು ಸಹಾಯವಾಗಿದೆ.

ರೋಗಿಗಳಿಗೆ ಬಳಕೆ
ಶ್ವಾಸಕೋಶಗಳನ್ನು ಚೆನ್ನೈಯ ಅಪೊಲೊ ಆಸ್ಪತ್ರೆಗೆ, ಯಕೃತ್‌ ಅನ್ನು ಅಸ್ಟರ್‌ ಬೆಂಗಳೂರಿನ ಸಿಎಂಐ ಆಸ್ಪತ್ರೆಗೆ, ಮೂತ್ರಪಿಂಡವನ್ನು ಮಂಗಳೂರಿನ ಎಜೆ ಆಸ್ಪತ್ರೆಗೆ ಮತ್ತು ಕಾರ್ನಿಯಾಗಳು ಹಾಗೂ ಮೂತ್ರಪಿಂಡವನ್ನು ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ನೋಂದಾಯಿತ ರೋಗಿಗಳಿಗೆ ಬಳಸಲಾಯಿತು.

ರವಾನೆ
ದಾನ ಮಾಡಿದ ಅಂಗಗಳನ್ನು ಉಡುಪಿ ಮತ್ತು ದ.ಕ. ಪೊಲೀಸ್‌ ಇಲಾಖೆಯ ನೆರವಿನೊಂದಿಗೆ ಮಣಿಪಾಲದಿಂದ ಮಂಗಳೂರಿಗೆ ಗ್ರೀನ್‌ ಕಾರಿಡಾರ್‌ ಮೂಲಕ ಸ್ವೀಕರಿಸುವ ಆಸ್ಪತ್ರೆಗೆ ಕಳುಹಿಸಿಕೊಡಲಾಯಿತು.

ಅಂಗದಾನ ಪುಣ್ಯದ ಕೆಲಸ. ನನ್ನ ಮಗ ಅಂಗದಾನ ಮಾಡಿ ತನ್ನ ಸಾವಿನಲ್ಲೂ ಸಾರ್ಥಕ್ಯ ಕಂಡಿದ್ದಾನೆ.
– ರಾಜಪ್ಪ, ದಾನಿಯ ತಂದೆ

ಉಲ್ಲಾಸ್ ಅವರ ಕುಟುಂಬದ ಈ ಉದಾತ್ತ ನಿರ್ಧಾರವು ಜನರ ಬದಲಾಗುತ್ತಿರುವ ಮನಸ್ಥಿತಿ ಯನ್ನು ತೋರಿಸುತ್ತದೆ. ಇದು ಸ್ವಾಗತಾರ್ಹ ಬದಲಾವಣೆಯಾಗಿದೆ. ಇತ್ತೀಚಿನ ದಿನಗಳಲ್ಲಿ ಬಹಳಷ್ಟು ಜನರು ಇಂತಹ ನಿರ್ಧಾರ ತೆಗೆದುಕೊಳ್ಳುತ್ತಿ¨ªಾರೆ. ಇದನ್ನು ಇನ್ನಷ್ಟು ಜನರು ಅನುಕರಿಸುವ ಅಗತ್ಯವಿದೆ.
-ಡಾ| ಅವಿನಾಶ ಶೆಟ್ಟಿ ವೈದ್ಯಕೀಯ ಅಧೀಕ್ಷಕರು, ಕಸ್ತೂರ್ಬಾ ಆಸ್ಪತ್ರೆ ಮಣಿಪಾಲ

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

11 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

12 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago