Featured

ಉಡುಪಿ: ರಸ್ತೆ ಅಪಘಾತದಲ್ಲಿ ಮೃತಪಟ್ಟ ಪೊಲೀಸ್ ಪೇದೆಯ ಕುಟುಂಬಕ್ಕೆ 1.45 ಕೋಟಿ ವಿಮಾ ಚೆಕ್ ಹಸ್ತಾಂತರ – vishwanews24

ಉಡುಪಿ: ರಸ್ತೆ ಅಪಘಾತದಲ್ಲಿ ಮೃತಪಟ್ಟ ಪೊಲೀಸ್ ಪೇದೆಯ ಕುಟುಂಬಕ್ಕೆ 1.45 ಕೋಟಿ ವಿಮಾ ಚೆಕ್ ಹಸ್ತಾಂತರ

ಉಡುಪಿ: ಕರ್ತವ್ಯದಲ್ಲಿದ್ದಾಗ ರಸ್ತೆ ಅಪಘಾತದಲ್ಲಿ ಮೃತಪಟ್ಟ ದಿವಂಗತ ಪೊಲೀಸ್ ಕಾನ್ಸ್‌ಟೇಬಲ್   ಶ್ರೀ ಅರ್ಜುನ ಶಂಕರ ನೆಲ್ಲೂರ ರವರ ಅವಲಂಬಿತರಿಗೆ ಎಸ್.ಬಿ.ಐ. ಪೊಲೀಸ್ ಸ್ಯಾಲರಿ ಪ್ಯಾಕೇಜ್ ಯೋಜನೆಯಡಿ 1,45,00,000 ಮೊತ್ತದ ವಿಮಾ ಚೆಕ್ ಅನ್ನು ಮಂಗಳವಾರ ಹಸ್ತಾಂತರಿಸಲಾಯಿತು.

2023-24ನೇ ಸಾಲಿನಲ್ಲಿ ಸಿ.ಎಸ್.ಪಿ. ಜಿಲ್ಲಾ ನಿಯಂತ್ರಣ ಕೊಠಡಿ, ಉಡುಪಿ ಘಟಕದಲ್ಲಿ ಕರ್ತವ್ಯ ನಿರ್ವಹಿಸಿದ್ದ ಅರ್ಜುನ ನೆಲ್ಲೂರ ರವರು, ಹಾವೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಂದರ್ಭದಲ್ಲಿ ರಸ್ತೆ ಅಪಘಾತದಲ್ಲಿ ನಿಧನರಾಗಿದ್ದರು.

ಆ 04ರಂದು ಜಿಲ್ಲಾ ಪೊಲೀಸ್ ಅಧೀಕ್ಷಕರ ಕಚೇರಿಯಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಎಸ್ ಬಿ ಐ ನ ಪ್ರಾದೇಶಿಕ ವ್ಯವಹಾರ ಕಚೇರಿಯ ರೀಜನಲ್ ಮ್ಯಾನೇಜರ್ ಬಿ ಪ್ರಕಾಶ್ ಅಡಿಗ ಅವರು ಪೊಲೀಸ್ ಅಧೀಕ್ಷಕರು ಹರಿರಾಂ ಶಂಕರ್ ಅವರ ಸಮ್ಮುಖದಲ್ಲಿ ಕುಟುಂಬದ ಸದಸ್ಯರ ವೈಯಕ್ತಿಕ ಅಪಘಾತ ವಿಮೆಯ ಚೆಕ್ಕನ್ನು ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಎಸ್.ಬಿ.ಐ.. ನ ಮುಖ್ಯ ವ್ಯವಸ್ಥಾಪಕ ಕೀಳಂಜೆ ಕೃಷ್ಣರಾಜ ಭಟ್, ಮಲ್ಪೆ ಶಾಖೆಯ ಮೆನೇಜರ್ ರಾಜೇಶ್ ಗಂಗೊಳ್ಳಿ,ಇತರ ಅಧಿಕಾರಿಗಳಾದ ಶ್ರೀನಿವಾಸ್, ಪ್ರಣವ್ ಪೈ, ತನ್ಮಯ್, ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು ಹಾಗೂ ಮೃತ ಪೇದೆಯವರ ಕುಟುಂಬಸ್ಥರು ಉಪಸ್ಥಿತರಿದ್ದರು.

ಪೊಲೀಸ್ ಇಲಾಖೆ ಮತ್ತು ಎಸ್.ಬಿ.ಐ. ನಡುವಿನ ಒಪ್ಪಂದದಂತೆ ಕರ್ತವ್ಯದ ವೇಳೆ ಮೃತಪಟ್ಟ ಸಿಬ್ಬಂದಿಯವರ ಕುಟುಂಬಕ್ಕೆ ಈ ವಿಮಾ ಸೌಲಭ್ಯ ದೊರಕಿದೆ. ಇಂಥ ವಿಮಾ ಯೋಜನೆಗಳು ಎಲ್ಲಾ ಎಸ್‌ಬಿಐ ಶಾಖೆಗಳಲ್ಲಿ ಲಭ್ಯವಿದ್ದು ಇದರ ಸದುಪಯೋಗವನ್ನು ಪೊಲೀಸ್ ಇಲಾಖೆಯ ಸಿಬ್ಬಂದಿಗಳು ಪಡೆದುಕೊಳ್ಳಬೇಕು ಎಂದು ಪ್ರಕಾಶ ಅಡಿಗ ಅವರು ವಿನಂತಿಸಿದರು.

Vishwa News 24

Recent Posts

ಮೂಡಬಿದ್ರೆ: ಯುವತಿ ನಾಪತ್ತೆ ; ಪತ್ತೆಗೆ ಮನವಿ – vishwanews24

ಮೂಡಬಿದ್ರೆ: ಯುವತಿ ನಾಪತ್ತೆ ; ಪತ್ತೆಗೆ ಮನವಿ ಮೂಡಬಿದ್ರೆ: ಸಾಬಿರಾ ಬಾನು (20) ಎಂಬವರು ಜುಲೈ 27 ರಂದು ಕಾಣೆಯಾಗಿದ್ದು,…

6 minutes ago

ವಿಮೆ ಇಲ್ಲದ ವಾಹನಗಳಿಗೆ ಇನ್ಮುಂದೆ ಪೆಟ್ರೋಲ್‌ ನಿರಾಕರಣೆ : ಕೇಂದ್ರಕ್ಕೆ ಸುಪ್ರೀಂ ನಿದೇರ್ಶನ ! vishwanews24

ವಿಮೆ ಇಲ್ಲದ ವಾಹನಗಳಿಗೆ ಬಂಕ್‌ಗಳಲ್ಲಿ ಪೆಟ್ರೋಲ್‌ ನಿರಾಕರಣೆ : ಪ್ರಾಯೋಗಿಕ ಯೋಜನೆಗೆ ಕೇಂದ್ರಕ್ಕೆ ಸುಪ್ರೀಂ ಸೂಚನೆ ನವದೆಹಲಿ: ದೇಶದಲ್ಲಿ ವಿಮೆ ಇಲ್ಲದೆಯೇ…

29 minutes ago

ಮಂಗಳೂರು:ಭಾರೀ ಮಳೆಗೆ ಮತ್ತೆ ಕುಸಿಯಲಾರಂಭಿಸಿದ ಕೆತ್ತಿಕಲ್ ಗುಡ್ಡ – vishwanews24

ಮಂಗಳೂರು:ಭಾರೀ ಮಳೆಗೆ ಮತ್ತೆ ಕುಸಿಯಲಾರಂಭಿಸಿದ ಕೆತ್ತಿಕಲ್ ಗುಡ್ಡ ಅವೈಜ್ಞಾನಿಕ ಕಾಮಗಾರಿಗೆ ಸ್ಥಳೀಯರ ಆಕ್ಷೇಪ ಮಂಗಳೂರು: ವಾಮಂಜೂರು ತಿರುವೈಲು ಶಾಲೆಯ ಸಮೀಪದ…

36 minutes ago

ಕಟಪಾಡಿ : ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಆಂಬ್ಯುಲೆನ್ಸ್  – vishwanews24

ಕಟಪಾಡಿ : ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಆಂಬ್ಯುಲೆನ್ಸ್  ಕಟಪಾಡಿಯ ಯೇಣಗುಡ್ಡೆಯ ತೇಕಲ್ ತೋಟದ ಬಳಿ ರಾಷ್ಟ್ರೀಯ ಹೆದ್ದಾರಿ 66…

45 minutes ago

ಖ್ಯಾತ ಖಳನಾಯಕ ಪ್ರದೀಪ್ ರಾವತ್‌ ನಿಧನ – vishwanews24

ಖ್ಯಾತ ಖಳನಾಯಕ ಪ್ರದೀಪ್ ರಾವತ್‌ ನಿಧನ ಮುಂಬಯಿ: 'ಲಗಾನ್' ಮತ್ತು 'ಗಜನಿ' ಸೇರಿದಂತೆ ಹಲವು ಬ್ಲಾಕ್‌ಬಸ್ಟರ್ ಸಿನಿಮಾಗಳಲ್ಲಿ ಅಭಿನಯಿಸಿದ್ದ ಖ್ಯಾತ…

1 hour ago

ಕಾರ್ಕಳ: ಹೋಟೆಲ್‌ನ ಜೂಜಾಟ ಅಡ್ಡೆಯ ಮೇಲೆ ಪೊಲೀಸರ ದಾಳಿ ; ಆರು ಮಂದಿ ಅರೆಸ್ಟ್‌ – vishwanews24

ಕಾರ್ಕಳ: ಹೋಟೆಲ್‌ನ ಜೂಜಾಟ ಅಡ್ಡೆಯ ಮೇಲೆ ಪೊಲೀಸರ ದಾಳಿ ; ಆರು ಮಂದಿ ಅರೆಸ್ಟ್‌ ಕಾರ್ಕಳ: ಕಾರ್ಕಳ ತಾಲೂಕಿನ ನಿಟ್ಟೆ…

21 hours ago