ಉಡುಪಿ: ರಸ್ತೆ ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯೊಬ್ಬರು ಅಂಗಾಂಗ ದಾನದಿಂದ 6 ಮಂದಿಯ ಜೀವಕ್ಕೆ ಬೆಳಕಾಗಿದ್ದಾರೆ.
ಬ್ರಹ್ಮಾವರದ ಉಪ್ಪಿನಕೋಟೆ ಬಳಿ ಎ. 2ರಂದು ಸಂಜೆ ವೇಳೆ ನಡೆದ ರಸ್ತೆ ಅಪಘಾತದಲ್ಲಿ ಸಾಲಿಗ್ರಾಮದ ಶ್ರೀನಿವಾಸ (19) ಎಂಬವರು ತೀವ್ರ ಗಾಯಗೊಂಡು ಬಳಿಕ ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು.
ಮೃತ ಯುವಕನ ಹೆತ್ತವರು ಮಗನನ್ನು ಕಳೆದುಕೊಂಡ ದುಃಖದಲ್ಲಿದ್ದರೂ, ಅಂಗಾಂಗ ಅಪೇಕ್ಷಿತರ ಬಾಳಿಗೆ ಬೆಳಕಾಗುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಮೃತ ಯುವಕನ ಎರಡು ಮೂತ್ರಪಿಂಡಗಳು, ಯಕೃತ್ತು, ಚರ್ಮ ಮತ್ತು ಎರಡು ಕಾರ್ನಿಯಾಗಳು/ಕಣ್ಣುಗುಡ್ಡೆಗಳನ್ನು ದಾನ ಮಾಡಲಾಗಿದೆ. ಅಂಗಾಂಗಕ್ಕಾಗಿ ನೋಂದಾಯಿಸಿದ 6 ಮಂದಿಗೆ ಶ್ರೀನಿವಾಸ್ ಅಂಗಾಂಗಗಳನ್ನು ಅಳವಡಿಸಲಾಗಿದೆ. ಎರಡು ಕಾರ್ನಿಯಾಗಳು ಮತ್ತು ಎರಡು ಮೂತ್ರಪಿಂಡ ಹಾಗೂ ಚರ್ಮವನ್ನು ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ರೋಗಿಗಳಿಗೆ ಬಳಸಲಾಯಿತು. ಯಕೃತ್ತನ್ನು ಬೆಂಗಳೂರಿನ ಆಸ್ಟರ್ ಆಸ್ಪತ್ರೆಗೆ ಕಳುಹಿಸಿಕೊಡಲಾಯಿತು.
ನೋವಿನಲ್ಲೂ ಸಾಮಾಜಿಕ ಕಳಕಳಿ ಮೆರೆದ ಬಡ ಕುಟುಂಬದ ನಿರ್ಧಾರಕ್ಕೆ ಸಾರ್ವಜನಿಕರಿಂದ ಪ್ರಶಂಸೆ ವ್ಯಕ್ತವಾಗಿದೆ.
ಕಾಪು ಬೀಚ್ ನಲ್ಲಿ ತೀವ್ರ ಕಡಲು ಕೊರೆತ : ಸಾರ್ವಜನಿಕರು ಬೀಚ್ ಗೆ ತೆರಳದಂತೆ ಜಿಲ್ಲಾಡಳಿತ ಮನವಿ ಉಡುಪಿ :…
ಮಲ್ಪೆ ಬಂದರಿನಲ್ಲಿ ಸುಗಮ ಮೀನುಗಾರಿಕಾ ಚಟುವಟಿಕೆಗೆ ಅಗತ್ಯ ಕ್ರಮವಹಿಸಿ : ಅಧಿಕಾರಿಗಳಿಗೆ ಯಶ್ಪಾಲ್ ಸುವರ್ಣ ಸೂಚನೆ ಉಡುಪಿ: ಮಲ್ಪೆ ಬಂದರಿನಲ್ಲಿ…
ಮಹಾರಾಷ್ಟ್ರದಲ್ಲಿ ನಕಲಿ ಪನ್ನೀರ್ ಸಂಪೂರ್ಣ ನಿಷೇಧ : ಮಾರಾಟ ಮಾಡಿದರೆ ಜೈಲು ಶಿಕ್ಷೆ,ಭಾರಿ ದಂಡ ಮುಂಬೈ : ಆಹಾರದಲ್ಲಿ ಹೆಚ್ಚುತ್ತಿರುವ…
ಕಾಕ್ರೋಚ್ ಜನತಾ ಪಾರ್ಟಿ ಸದ್ಯಕ್ಕೆ ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವುದಿಲ್ಲ : ಅಭಿಜೀತ್ ದೀಪ್ಕೆ ಮುಂಬೈ : ಕಾಕ್ರೋಚ್ ಜನತಾ ಪಾರ್ಟಿ…
ಉದ್ಯಾವರ : ಪಾಪನಾಶಿನಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ ಉಡುಪಿ: ಉದ್ಯಾವರದ ಪಿತ್ರೋಡಿಯ ಪಾಪನಾಶಿನಿ ನದಿಯಲ್ಲಿ ಆಗಸ್ಟ್ 5…
ಕಾರ್ಕಳ ರೆಂಜಾಳದಲ್ಲಿ ಭೂಕುಸಿತದ ಆತಂಕ : ಡಿಸಿ ಸ್ವರೂಪಾ ಟಿ.ಕೆ ಭೇಟಿ, ಪರಿಶೀಲನೆ ಉಡುಪಿ: ಕಾರ್ಕಳ ತಾಲೂಕಿನಲ್ಲಿ ಕಳೆದ ಎರಡು…