Featured

ಉಡುಪಿ : ರಾಜ್ಯದಲ್ಲಿರೋದು ಸಂವೇದನಾಶೀಲತೆ ಇಲ್ಲದ ಭಂಡ ಸರ್ಕಾರ : ಸುನೀಲ್ ಕುಮಾರ್ ವಾಗ್ದಾಳಿ – vishwanews24

ಉಡುಪಿ: ರಾಜ್ಯದಲ್ಲಿರುವುದು ದಪ್ಪ ಚರ್ಮದ, ಎಮ್ಮೆ ಚರ್ಮದ ಸರ್ಕಾರ

ರಾಜ್ಯದಲ್ಲಿ ದುಡಿಯುವ ಕೈಗಳಿಗೆ ಕೆಲಸ ಇಲ್ಲದ ಪರಿಸ್ಥಿತಿ ನಿರ್ಮಾಣ

ಉಡುಪಿ: ರಾಜ್ಯದಲ್ಲಿರೋದು ಸಂವೇದನಾಶೀಲತೆ ಇಲ್ಲದ ಭಂಡ ಸರ್ಕಾರ ಎಂದು ಮಾಜಿ ಸಚಿವ ಸುನೀಲ್ ಕುಮಾರ್ ವಾಗ್ದಾಳಿ ನಡೆಸಿದರು.

ಉಡುಪಿಯಲ್ಲಿ ರಾಜ್ಯ ಸರ್ಕಾರದ ವಿರುದ್ಧದ ಪ್ರತಿಭಟನೆ ಸಂದರ್ಭದಲ್ಲಿ ಮಾತನಾಡಿದ ಕಾರ್ಕಳದಲ್ಲಿ ಸುನೀಲ್ ಕುಮಾರ್, ರಾಜ್ಯದಲ್ಲಿರುವುದು ದಪ್ಪ ಚರ್ಮದ ಎಮ್ಮೆ ಚರ್ಮದ ಸರ್ಕಾರ, ರಾಜ್ಯದಲ್ಲಿರೋದು ಸಂವೇದನಾಶೀಲತೆ ಇಲ್ಲದ ಭಂಡ ಸರಕಾರ. 22 ಲಕ್ಷ ರೇಷನ್ ಕಾರ್ಡ್, 12 ಲಕ್ಷ ಬಗರ್ ಹುಕುಂ ಜಮೀನು ತಿರಸ್ಕಾರ ಮಾಡಲು ಹೊರಡಿದೆ. ರಾಜ್ಯದಲ್ಲಿ ಮೈಕ್ರೋಫೈನಾನ್ಸ್ ಆರ್ಭಟ ಮಾಡುತ್ತಿದೆ. ಮೈಕ್ರೋ ಫೈನಾನ್ಸ್ ಗೆ ಕಡಿವಾಣ ಹಾಕುವ ಕೆಲಸವನ್ನು ಮಾಡುತ್ತಿಲ್ಲ. ರಾಜ್ಯದಲ್ಲಿ ದುಡಿಯುವ ಕೈಗಳಿಗೆ ಕೆಲಸ ಇಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ. ಕಟ್ಟಡ ನಿರ್ಮಾಣಕ್ಕೆ ಸಂಬಂಧಪಟ್ಟ ಯಾವುದೇ ವಸ್ತುಗಳು ಸಿಗುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬಿಟ್‌ಕಾಯಿನ್ ಜಾಲದಲ್ಲಿ ಮೊಹಮ್ಮದ್ ನಲಪಾಡ್ ಸಿಲುಕಿರುವ ಬಗ್ಗೆ ಮಾತನಾಡಿ, ಇದು 60 ಪರ್ಸೆಂಟ್ ಸರ್ಕಾರ. ಎಲ್ಲ ಸಚಿವರು ಹಗರಣದಲ್ಲಿ ಭಾಗಿಯಾಗಿದ್ದಾರೆ. ಕಾಂಗ್ರೆಸ್‌ನ ಕಾರ್ಯಕರ್ತರು ಬ್ರೋಕರ್‌ಗಳಾಗಿದ್ದಾರೆ. ಯೂಥ್ ಕಾಂಗ್ರೆಸ್ ಅಧ್ಯಕ್ಷ ಬಿಟ್ ಕಾಯಿನ್‌ನಲ್ಲಿ ಸಿಲುಕಿದ್ದಾರೆ. ಆರಂಭದಲ್ಲೇ ತೀವ್ರ ವಿಚಾರಣೆ ಮಾಡದೆ ಇರುವುದಕ್ಕೆ ಕಾರಣ ಏನು ಎಂದು ಪ್ರಶ್ನಿಸಿದರು.

ಹಣ ಚುನಾವಣೆಗಾಗಿ ಹೈಕಮಾಂಡ್‌ಗೆ ಹೋಗಿದೆ ಎಂಬ ಕಾರಣಕ್ಕೆ ಸಾಫ್ಟ್ ಕಾರ್ನರ್ ತೋರಲಾಗಿದೆ. ಅಬಕಾರಿ ಇಲಾಖೆ ಹಣ ದೆಹಲಿ, ಮಹಾರಾಷ್ಟ್ರ ಮತ್ತು ಕೇಂದ್ರದ ಚುನಾವಣೆಗೆ ರವಾನೆಯಾಗಿದೆ. ಈ ಕಾರಣಕ್ಕೆ ತನಿಖೆಯನ್ನು ಬಹಳ ಮಂದಗತಿಯಲ್ಲಿ ಮಾಡುತ್ತಿದೆ ಎಂದು ಆರೋಪಿಸಿದರು.

Vishwa News 24

Recent Posts

ಉಡುಪಿ : ಕೃಷಿ ಪ್ರಶಸ್ತಿ ; ಅರ್ಜಿ ಆಹ್ವಾನ – vishwanews24

ಉಡುಪಿ : ಕೃಷಿ ಪ್ರಶಸ್ತಿ ; ಅರ್ಜಿ ಆಹ್ವಾನ      ಉಡುಪಿ : ಕೃಷಿ ವಲಯದ ಉತ್ಪಾದಕತೆ ಹೆಚ್ಚಿಸಲು ಹಾಗೂ ರೈತರಲ್ಲಿ…

2 minutes ago

ಇನ್ನು ಮುಂದೆ ಭಕ್ತರು ಗೋಕರ್ಣದ ಮಹಾಗಣಪತಿ ವಿಗ್ರಹವನ್ನು ಸ್ಪರ್ಶಿಸಿ ಪೂಜಿಸುವಂತಿಲ್ಲ – vishwanews24

ಭಕ್ತರು ಗೋಕರ್ಣದ ಗಣೇಶನ ವಿಗ್ರಹ ಸ್ಪರ್ಶಿಸಿ ಪೂಜೆ ಮಾಡುವಂತಿಲ್ಲ ಗೋಕರ್ಣ (ಉತ್ತರ ಕನ್ನಡ ಜಿಲ್ಲೆ): ಗೋಕರ್ಣದ ಮಹಾಗಣಪತಿ ದೇವಸ್ಥಾನದಲ್ಲಿರುವ ಸಾವಿರಾರು ವರ್ಷಗಳಷ್ಟು…

18 hours ago

ಕೊಲಂಬೊ : 9 ಭಾರತೀಯ ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ – vishwanews24

ಕೊಲಂಬೊ : ಅಕ್ರಮ ಪ್ರವೇಶಿಸಿ ಮೀನುಗಾರಿಕೆ ನಡೆಸಿದ ಆರೋಪ : 9 ಭಾರತೀಯ ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ ಕೊಲಂಬೊ :…

18 hours ago

ಸುಳ್ಯ: ಬೈಕ್-ಕಾರು ಅಪಘಾತ ; ದ್ವಿತೀಯ ಪಿಯು ವಿದ್ಯಾರ್ಥಿ ಸಾವು – vishwanews24

ಸುಳ್ಯ: ಬೈಕ್-ಕಾರು ಅಪಘಾತ;  ದ್ವಿತೀಯ ಪಿಯು ವಿದ್ಯಾರ್ಥಿ ಸಾವು ಅರಂತೋಡು: ಅರಂತೋಡು ಕುಲ್ಚಾರ್ ಸಮೀಪ ಬೈಕ್ ಕಾರು ನಡುವೆ ಅಪಘಾತ…

19 hours ago

ಮಂಗಳೂರು: ವಿದ್ಯಾರ್ಥಿಗಳು, ವಿಪಕ್ಷ ನಾಯಕನ ಜೊತೆ ಆಡಳಿತ ಪಕ್ಷ ನಡೆಸಿಕೊಂಡ ರೀತಿ ಖಂಡನೀಯ: ರಮಾನಾಥ ರೈ – vishwanews24

ಮಂಗಳೂರು: ವಿದ್ಯಾರ್ಥಿಗಳು, ವಿಪಕ್ಷ ನಾಯಕನ ಜೊತೆ ಆಡಳಿತ ಪಕ್ಷ ನಡೆಸಿಕೊಂಡ ರೀತಿ ಖಂಡನೀಯ: ರಮಾನಾಥ ರೈ ಮಂಗಳೂರು: ನೀಟ್ ಪರೀಕ್ಷೆಯಲ್ಲಿನ…

19 hours ago

ಪ್ರಶ್ನೆ ಪತ್ರಿಕೆ ಸೋರಿಕೆ: ಕೇಂದ್ರ ಸರ್ಕಾರ ಯಾರನ್ನೂ ಕಾಪಾಡಬಾರದು : ಡಿ ಕೆ ಶಿ ಆಗ್ರಹ – vishwanews24

ಪ್ರಶ್ನೆ ಪತ್ರಿಕೆ ಸೋರಿಕೆ: ಕೇಂದ್ರ ಸರ್ಕಾರ ಯಾರನ್ನೂ ಕಾಪಾಡಬಾರದು : ಡಿ ಕೆ ಶಿವಕುಮಾರ್ ಆಗ್ರಹ ಬೆಂಗಳೂರು: ಪ್ರಶ್ನೆ ಪತ್ರಿಕೆ…

19 hours ago