Featured

ಉಡುಪಿ: ‘ರಾಜ್ಯದಲ್ಲಿ ಕಲ್ಲಿದ್ದಲ್ಲು ಕೊರತೆ ಕಾರಣದಿಂದ ವಿದ್ಯುತ್ ಉತ್ಪಾನದೆಯನ್ನು ಸ್ಥಗಿತ ಮಾಡಿಲ್ಲ’-ಸಚಿವ ಸುನಿಲ್‌ಕುಮಾರ್ -Vishwanews24

ಉಡುಪಿ: ‘ರಾಜ್ಯದಲ್ಲಿ ಕಲ್ಲಿದ್ದಲ್ಲು ಕೊರತೆ ಕಾರಣದಿಂದ ವಿದ್ಯುತ್ ಉತ್ಪಾನದೆಯನ್ನು ಸ್ಥಗಿತ ಮಾಡಿಲ್ಲ’-ಸಚಿವ ಸುನಿಲ್‌ಕುಮಾರ್

ರಾಜ್ಯಕ್ಕೆ ಬೇಕಾಗುವ ಕಲ್ಲಿದ್ದಲಿನ ಸರಬರಾಜನ್ನು ಕೇಂದ್ರ ಸರಕಾರದ ಜೊತೆಗೂಡಿ ನಿರ್ವಹಣೆ ಮಾಡುತ್ತಿದ್ದೇವೆ..

ಉಡುಪಿ : ರಾಜ್ಯದಲ್ಲಿ ಕಲ್ಲಿದ್ದಲ್ಲು ಕೊರತೆ ಕಾರಣದಿಂದ ವಿದ್ಯುತ್ ಉತ್ಪಾನದೆಯನ್ನು ಸ್ಥಗಿತ ಮಾಡಿಲ್ಲ. ರಾಜ್ಯಕ್ಕೆ ಬೇಕಾಗುವ ಕಲ್ಲಿದ್ದಲಿನ ಸರಬರಾಜನ್ನು ಕೇಂದ್ರ ಸರಕಾರದ ಜೊತೆಗೂಡಿ ನಿರ್ವಹಣೆ ಮಾಡುತ್ತಿದ್ದೇವೆ ಎಂದು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ಸಚಿವ ವಿ. ಸುನಿಲ್ ಕುಮಾರ್ ಹೇಳಿದ್ದಾರೆ.

ಉಡುಪಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಸೋಮವಾರ ಮಾತನಾಡಿದ ಅವರು, ಏಪ್ರಿಲ್ ತಿಂಗಳಿನಲ್ಲಿ ಮಳೆ ಬಂದಿದ್ದರಿಂದ ವಿದ್ಯುತ್ ಉತ್ಪಾದನೆಯ ಮೇಲಿನ ಒತ್ತಡ ಕಡಿಮೆ ಇದೆ. ರಾಜ್ಯಕ್ಕೆ 13 ರಿಂದ 15 ರೇಕ್ ಕಲ್ಲಿದ್ದಲು ಕೇಂದ್ರ ಸರಕಾರದಿಂದ ನಿತ್ಯ ಪೂರೈಕೆ ಆಗುತ್ತಿದೆ. ಪ್ರತಿ ಎರಡು ದಿನಗಳ ಕಾಲ ಸಭೆ ನಡೆಸಿ ನಿರ್ವಹಣೆ ಮಾಡುತಿದ್ದೇವೆ. ಎಲ್ಲಾ ರೀತಿಯ ಎಚ್ಚರಿಕೆಗಳನ್ನು ತೆಗೆದುಕೊಂಡಿದ್ದೇವೆ ಎಂದರು.

ಇಂಧನ ಇಲಾಖೆಯಿಂದ ಮೇ 5ರಿಂದ15ರವರೆಗೆ ರಾಜ್ಯದ ಎಲ್ಲಾ ಟ್ರಾನ್ಸ್ ಫಾರ್ಮರ್‌ಗಳ ನಿರ್ವಹಣೆ ಮಾಡಲಾಗುವುದು. ಎಲ್ಲಾ ಅಧಿಕಾರಿಗಳು ಈ ಅಭಿಯಾನದಲ್ಲಿ ಪಾಲ್ಗೊಳ್ಳಬೇಕು. ಟ್ರಾನ್ಸ್ ಫ್ರಾರ್ಮರ್‌ಗಳು ಬ್ಲಾಸ್ಟ್ ಆಗಿ ರಾಜ್ಯದಲ್ಲಿ ಪ್ರಾಣ ಹಾನಿ ಆಗಿದೆ. 15 ವರ್ಷಗಳ ಮೇಲ್ಪಟ್ಟ ಟ್ರಾನ್ಸ್ ಫ್ರಾರ್ಮರ್‌ಗಗಳನ್ನು ತತ್‌ಕ್ಷಣ ಬದಲಾವಣೆ ಮಾಡಲಾಗುವುದು ಎಂದವರು ತಿಳಿಸಿದರು.

ರಾಜ್ಯದಲ್ಲಿ ಇಂಧನ ಇಲಾಖೆಯಿಂದ .ಎಲೆಕ್ಟ್ರಿಕ್ ವಾಹನಗಳಿಗೆ ವಿದ್ಯುತ್ ಚಾರ್ಜಿಂಗ್ ಸೆಂಟರ್‌ಗಳ ಸ್ಥಾ‍ಪನೆ ಮಾಡಲಾಗುವುದು. ಮೊದಲ ಹಂತದಲ್ಲಿ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಚಾರ್ಜಿಂಗ್ ಸೆಂಟರ್ ಸ್ಥಾಪನೆ ಮಾಡಿ ಮುಂದೆ ಪ್ರವಾಸಿ ಕೇಂದ್ರ ಮತ್ತು ರಾಷ್ಟ್ರೀಯ ಹೆದ್ದಾರಿಗಳಲ್ಲಿ ತೆರೆಯಲಾಗುವುದು. ಮೇ 7ರಿಂದ ಮೈಸೂರಿನಲ್ಲಿ ಕಾರ್ಯಾರಂಭ ಮಾಡಲಿದೆ. ರಾಜ್ಯದಲ್ಲಿ ಒಟ್ಟು 1 ಸಾವಿರ ಚಾರ್ಜಿಂಗ್ ಸೆಂಟರ್‌ಗಳ ಸ್ಥಾಪನೆಗೆ ಆದ್ಯತೆ ಕೊಡಲಾಗಿದೆ.

ಜಿಲ್ಲಾ ಕೇಂದ್ರದಿಂದ ತತ್ಕ್ಷಣದಿಂದ ಪ್ರಾರಂಭವಾಗಲಿದ್ದು, ಈ ತಿಂಗಳಿನಲ್ಲಿ 300ಕ್ಕೂ ಹೆಚ್ಚು ಸೆಂಟರ್ ಗಳನ್ನು ಬೆಂಗಳೂರಿನಲ್ಲಿ ಪ್ರಾರಂಭಿಸುವ ಚಿಂತನೆ ಹೊಂದಲಾಗಿದೆ ಎಂದು ಸಚಿವ ಸುನಿಲ್‌ಕುಮಾರ್ ತಿಳಿಸಿದರು.

Vishwa News 24

Recent Posts

ಉಡುಪಿ : 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ -vishwanews24

  ಉಡುಪಿ : 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ ಉಡುಪಿ : ಕರ್ನಾಟಕ ಕಡಲ ಮೀನುಗಾರಿಕೆ ನಿಯಂತ್ರಣ…

10 hours ago

ಉಡುಪಿ : ಯುವತಿ ನಾಪತ್ತೆ -vishwanews24

ಉಡುಪಿ : ಯುವತಿ ನಾಪತ್ತೆ ಉಡುಪಿ: ಉಡುಪಿ ತಾಲೂಕು ಶಿವಳ್ಳಿ ಗ್ರಾಮದ ಇಂದ್ರಾಳಿ ದೇವಸ್ಥಾನದ ಬಳಿ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದ…

10 hours ago

ಮುಂದಿನ ದಿನಗಳಲ್ಲಿ ಬಿಜೆಪಿಯನ್ನು ಅಧಿಕಾರದಿಂದ ಕಿತ್ತೆಸೆಯುತ್ತೇವೆ : ಮಮತಾ ಬ್ಯಾನರ್ಜಿ -vishwanews24

ಮುಂದಿನ ದಿನಗಳಲ್ಲಿ ಬಿಜೆಪಿಯನ್ನು ಅಧಿಕಾರದಿಂದ ಕಿತ್ತೆಸೆಯುತ್ತೇವೆ : ಮಮತಾ ಬ್ಯಾನರ್ಜಿ ಹೊಸದಿಲ್ಲಿ: ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವನ್ನು ಭವಿಷ್ಯದಲ್ಲಿ ಅಧಿಕಾರದಿಂದ…

18 hours ago

ಇ-ಫಾರ್ಮಸಿ ವಿರೋಧಿಸಿ ಇಂದು ದೇಶಾದ್ಯಂತ ಮೆಡಿಕಲ್ ಶಾಪ್‌ಗಳು ಬಂದ್ -vishwanews24

ಇ-ಫಾರ್ಮಸಿ ವಿರೋಧಿಸಿ ಇಂದು ದೇಶಾದ್ಯಂತ ಮೆಡಿಕಲ್ ಶಾಪ್‌ಗಳು ಬಂದ್ ಬೆಂಗಳೂರು : ಕರ್ನಾಟಕ ಸೇರಿದಂತೆ ದೇಶಾದ್ಯಂತ ಮೆಡಿಕಲ್ ಶಾಪ್‌ಗಳು ಬಂದ್…

18 hours ago

ಬೆಳ್ತಂಗಡಿ: ನೇತ್ರಾವತಿ ನದಿಯಲ್ಲಿ ಮುಳುಗಿ ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು -vishwanews24

ಬೆಳ್ತಂಗಡಿ: ನೇತ್ರಾವತಿ ನದಿಯಲ್ಲಿ ಮುಳುಗಿ ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು ಬೆಳ್ತಂಗಡಿ : ಇಂಜಿನಿಯರಿಂಗ್ ವಿದ್ಯಾರ್ಥಿಗಳ ಏಳು ಜನರ ತಂಡವೊಂದು ಈಜಲು…

18 hours ago

ಉಡುಪಿ ಮಲಬಾರ್ ಗೋಲ್ಡ್ ನಲ್ಲಿ `ಆನಿಕಾ’ ವಜ್ರಾಭರಣ ಅನಾವರಣ -vishwanews24

ಉಡುಪಿ ಮಲಬಾರ್ ಗೋಲ್ಡ್ ನಲ್ಲಿ `ಆನಿಕಾ' ವಜ್ರಾಭರಣ ಅನಾವರಣ ಉಡುಪಿ : ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ…

2 days ago