ಉಡುಪಿ: ರಾಜ್ಯದಲ್ಲಿ ಬೀಳುಬಿದ್ದಿರುವ 15 ಲಕ್ಷ ಹೆಕ್ಟೇರ್ ಕೃಷಿ ಭೂಮಿಯಲ್ಲಿ ‘ಹಡಿಲುಭೂಮಿ ಕೃಷಿ ಅಭಿಯಾನ’ ನಡೆದರೆ ಭೂಮಿ ಹಸನಾಗಲಿದೆ. ಉಡುಪಿಯ ಅಭಿಯಾನ ರಾಜ್ಯಕ್ಕೆ ವಿಸ್ತರಿಸಲಿ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಹೇಳಿದರು.
ಶನಿವಾರ ಕೇದಾರೋತ್ಥಾನ ಟ್ರಸ್ಟ್ನಿಂದ ಕಡೆಕಾರಿನಲ್ಲಿ ನಡೆದ ಹಡಿಲು ಭೂಮಿ ಕೃಷಿ ಅಭಿಯಾನದಲ್ಲಿ ಭಾಗವಹಿಸಿ ಮಾತನಾಡಿದ ಸಚಿವರು, ‘ರಾಜ್ಯಕ್ಕೆ ಮಾದರಿ ಹಾಗೂ ಮಾರ್ಗದರ್ಶನ ಮಾಡುವ ಕೆಲಸವನ್ನು ಉಡುಪಿ ಶಾಸಕ ರಘುಪತಿ ಭಟ್ ನೇತೃತ್ವದ ಕೇದಾರೋತ್ಥಾನ ಟ್ರಸ್ಟ್ ಮಾಡುತ್ತಿದೆ. ಜಿಲ್ಲೆಯಲ್ಲಿ ಹಡಿಲು ಬಿದ್ದಿದ್ದ 2,000 ಎಕರೆಯಲ್ಲಿ ಸಾವಯವ ಪದ್ಧತಿಯಲ್ಲಿ ಭತ್ತದ ನಾಟಿ ನಡೆಯುತ್ತಿದೆ. ಸರ್ಕಾರ ಮಾಡಬೇಕಾದ ಕೆಲಸವನ್ನು ಟ್ರಸ್ಟ್ ಮಾಡುತ್ತಿರುವುದು ಅಭಿನಂದನೀಯ’ ಎಂದರು.
ಕೃಷಿಯಲ್ಲಿ ಹೆಚ್ಚು ರಾಸಾಯನಿಕ ಬಳಕೆಯಿಂದ ಆರೋಗ್ಯದ ಮೇಲಾಗುತ್ತಿರುವ ದುಷ್ಪರಿಣಾಮ ತಡೆಗೆ ಸರ್ಕಾರ ಸಾವಯವ ಕೃಷಿಗೆ ಪ್ರೋತ್ಸಾಹ ನೀಡಲು ₹500 ಕೋಟಿ ಮೀಸಲಿಟ್ಟಿದೆ. ರೈತರು ಸಾವಯವ ಕೃಷಿಯತ್ತ ಹೆಚ್ಚು ಆಸಕ್ತಿ ತೋರಬೇಕು ಎಂದರು.
ಮೀನುಗಾರರಿಗೆ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ ಕುಂದಾಪುರ: ರಾಜ್ಯದ ಸಾಂಪ್ರದಾಯಿಕ ನಾಡ ದೋಣಿ…
ಕಡಬ : ಜಲಪಾತಕ್ಕೆ ತೆರಳಿದ್ದ ಅಪ್ರಾಪ್ತ ವಿದ್ಯಾರ್ಥಿಗಳ ಮೇಲೆ ಹಲ್ಲೆ ; ಪ್ರಕರಣ ದಾಖಲು ಕಡಬ : ಜಲಪಾತಕ್ಕೆ ತೆರಳಿದ್ದ…
ಹಳಿ ನಿರ್ವಹಣೆ: ಅ.4ರಿಂದ ಬೆಂಗಳೂರು - ಮಂಗಳೂರು ನಡುವಿನ ಹಲವು ರೈಲುಗಳ ಸಂಚಾರ ರದ್ದು ಮಂಗಳೂರು: ಶಿರಿಬಾಗಿಲು- ಯಡಕುಮೇರಿ ರೈಲು…
ಮುಂಬೈ ಭೂಕುಸಿತ: ಇಬ್ಬರು ಬಲಿ, ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ ಮುಂಬೈ: ಘಾಟ್ಕೋಪರ್ನ ಚಿರಾಗ್ ನಗರದ ಗೌಸಿಯಾ ಚಾಲ್ನಲ್ಲಿ ಬುಧವಾರ…
ಪ್ರಜ್ವಲ್ ರೇವಣ್ಣ ಸೆಲ್ನಲ್ಲಿ ಮೊಬೈಲ್ ಪತ್ತೆ : ಜೈಲಾಧಿಕಾರಿ ಸಸ್ಪೆಂಡ್, SPಗೆ ಶೋಕಾಸ್ ನೋಟಿಸ್ ಬೆಂಗಳೂರು: ಜೀವಾವಧಿ ಶಿಕ್ಷೆಗೆ ಗುರಿಯಾಗಿ…
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…