ಉಡುಪಿ: ರಾಜ್ಯದಲ್ಲಿ ಮತಾಂತರ ನಿರ್ಬಂಧ ಮಾಡಿ. ಮತಾಂತರ ಆಗುವುದನ್ನು ತಡೆಯಬೇಕು. ಇಲ್ಲವಾದರೆ ಸಮಾಜದಲ್ಲಿ ದೊಡ್ಡ ಅಶಾಂತಿ ಉಂಟಾಗಬಹುದು ಎಂದು ಪೇಜಾವರ ಮಠಾಧೀಶ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಮತಾಂತರ ನಿರ್ಬಂಧ ಮಾಡಿ. ಮತಾಂತರ ಆಗುವುದನ್ನು ತಡೆಯಬೇಕು. ಇಲ್ಲವಾದರೆ ಸಮಾಜದಲ್ಲಿ ದೊಡ್ಡ ಅಶಾಂತಿ ಉಂಟಾಗಬಹುದು. ಒಂದು ಕಡೆ ಆಮೀಷವೊಡ್ಡಿ ಬಲವಂತವಾಗಿ ಮತಾಂತರ ಮಾಡುತ್ತಿಲ್ಲ ಅಂತಾರೆ. ಮತ್ತೊಂದು ಕಡೆ ಮತಾಂತರ ಮಾಡುತ್ತಿದ್ದ ಮಿಷನರಿ ಅವರನ್ನು ಬಂಧಿಸಿದ್ದಾರೆ ಎನ್ನುವ ಸುದ್ದಿಗಳು ವರದಿಯಾಗಿವೆ ಎಂದರು.
ಮತಾಂತರ ಮುಂದುವರಿದರೆ ಸಮಾಜದಲ್ಲಿ ದೊಡ್ಡ ಅಶಾಂತಿ, ಗೊಂದಲ ಉಂಟಾಗಬಹುದು. ಸರ್ಕಾರ ಬಲವಾದ ಕಾನೂನು ಜಾರಿಗೆ ತರುವ ಮೂಲಕ ಮತಾಂತರ ನಿರ್ಬಂಧ ಮಾಡಬೇಕು. ರಾಜ್ಯ ಸರ್ಕಾರ ಈ ವಿಷಯದ ಕುರಿತಂತೆ ಕಠಿಣ ಕಾನೂನು ಜಾರಿಗೆ ತರಬೇಕು ಎಂದು ಪೇಜಾವರ ಶ್ರೀಗಳು ಒತ್ತಾಯಿಸಿದ್ದಾರೆ.
ರಾಜ್ಯದಲ್ಲಿ ಕ್ರೈಸ್ತ ಮಿಷನರಿಗಳು ಹಿಂದೂ ಧರ್ಮವನ್ನು ಗುರಿಯಾಗಿಸಿ ಮತಾಂತರ ಮಾಡುತ್ತಿವೆ. ನಾವು ಒತ್ತಾಯದ ಮತಾಂತರ ಮಾಡುವುದಿಲ್ಲ ಎಂದರೂ ಮತಾಂತರ ಪ್ರಕ್ರಿಯೆ ನಿರಂತರವಾಗಿ ಎಗ್ಗಿಲ್ಲದೆ ರಾಜ್ಯದ ಎಲ್ಲ ಕಡೆ ನಡೆಯುತ್ತಿದೆ. ಹೀಗಾಗಿ ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆ ಜಾರಿಗೆ ಒತ್ತಾಯ ಕೇಳಿಬರುತ್ತಿದೆ.
ಆರ್ಥಿಕ ಪರಿಸ್ಥಿತಿ, ಅನಾರೋಗ್ಯ ಮತ್ತು ಮಾನಸಿಕ ಸಮಸ್ಯೆಯನ್ನು ಇಟ್ಟುಕೊಂಡು ಕ್ರೈಸ್ತ ಮಿಷನರಿಗಳು ರಾಜ್ಯದಲ್ಲಿ ಮತಾಂತರದ ದಾಳ ಹೂಡುತ್ತಿವೆ. ಕಳೆದ ಒಂದು ತಿಂಗಳಿಂದ ರಾಜ್ಯದ ಎಲ್ಲ ಕಡೆ ಮತಾಂತರ ಕೇಂದ್ರ, ಪ್ರಾರ್ಥನಾ ಮಂದಿರದ ಮೇಲೆ ಹಿಂದೂ ಸಂಘಟನೆಗಳು ದಾಳಿ ಮಾಡುತ್ತಿವೆ.
ಸೇತುವೆ ಮೇಲೆ 3 ವರ್ಷದ ಮಗು ಬಿಟ್ಟು ನದಿಗೆ ಹಾರಿದ ದಂಪತಿ ಅಮರಾವತಿ: ಇಲ್ಲಿನ ಪಶ್ಚಿಮ ಗೋದಾವರಿ ಜಿಲ್ಲೆಯ ಚಿಂಚಿನಾಡ…
ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಸಮಿತಿ ರಚನೆ : ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಭರವಸೆ ಕರಾವಳಿ ಭಾಗದಲ್ಲಿ ಕರ್ನಾಟಕ…
ಬಿಟ್ ಕಾಯಿನ್ ಹಗರಣ : ಹ್ಯಾಕರ್ ಶ್ರೀಕಿ ಹಾಗೂ ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ ಬೆಂಗಳೂರು: ಬಿಟ್ ಕಾಯಿನ್…
ಬಪ್ಪನಾಡು ದ್ವಾರ ಸ್ಥಳಾಂತರ ಕಾಮಗಾರಿ ವೀಕ್ಷಿಸಿದ ಎ.ಜೆ. ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಸಿವಿಲ್ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಮಂಗಳೂರು:ರಾಷ್ಟ್ರೀಯ ಹೆದ್ದಾರಿ-66ರ ವಿಸ್ತರಣೆಯ…
ನಾಗೇಂದ್ರ ಅವರು ಯಾವುದೇ ತಪ್ಪು ಮಾಡಿಲ್ಲ, ಅವರು ಒಬ್ಬ ನಿರಪರಾಧಿ .. ನಾಗೇಂದ್ರ ಅವರ ವಿರುದ್ಧ ಬಿಜೆಪಿ ನಡೆದುಕೊಂಡ ರೀತಿ…
ಕಟೀಲು ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರಕ್ಕೆ ಚಿನ್ನ-ಬೆಳ್ಳಿಯ ಪ್ರಭಾವಳಿ ಅರ್ಪಿಸಿದ ರಾಜೇಶ್ ಶೆಟ್ಟಿ ದಂಪತಿ ಮಂಗಳೂರು : ಶ್ರೀ ಕ್ಷೇತ್ರ ಕಟೀಲು…